
Read Time:51 Second
ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಫ್ ಸಿಬ್ಬಂದಿಗಳು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.


ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅ.14ರಂದು ಸಂಜೆ 6:30ಕ್ಕೆ ಮುಂಬೈನಿ0ದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.