ಪುತ್ತೂರು: ಅಕ್ರಮ ಗೋಸಾಗಾಟ- ಆರೋಪಿ ಕಾಲಿಗೆ ಗುಂಡೇಟು!!

0 0
Read Time:1 Minute, 40 Second

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ.

ಆರೋಪಿ ಅಬ್ದುಲ್ಲಾ (40) ಎಂಬಾತ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದು ಈ ವೇಳೆ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ.

ಆಗ ಪಿಎಸ್ಐ ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಒಂದು ಗುಂಡು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.

ಆರೋಪಿಯನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *