
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಜುಲೈ 28ನೇ ಆದಿತ್ಯವಾರ ಮಧ್ಯಾಹ್ನ 3ಕ್ಕೆ ಪೊಸಳ್ಳಿ ಕುಲಾಲ ಭವನದಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ, ಆಟಿ ತಿಂಗಳ ಆಹಾರ ಮತ್ತು ವಿವಿಧ ವಿನೋಧಾವಳಿಗಳು ನಡೆಯಲಿರುವುದು.
ಸಮಾರಂಭದ ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ವಹಿಸಲಿದ್ದಾರೆ. ಮುಖ್ಯಾತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ., ಮತ್ತು ಕೋಶಾಧಿಕಾರಿ ಸೋಮನಾಥ ಸಾಲ್ಯಾನ್ ಹಾಗೂ ನಮ್ಮ ತುಳುನಾಡು ಮತ್ರು ಆಟಿ ತಿಂಗಳ ಮಹತ್ವದ ಬಗ್ಗೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಪ್ರಧಾನ ಕಾರ್ಯದರ್ಶಿ ನಾರಾಯಣ ಸಿ. ಪೆರ್ನೆ ಉಪನ್ಯಾಸ ನೀಡಲಿದ್ದಾರೆ.
ಇದೇ ಸಂಧರ್ಭ ಎಲ್ಲಾ ವಯೋಮಾನದವರಿಗೆ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ ಮತ್ತು ವಿವಿಧ ಮನೆಗಳಲ್ಲಿ ತಯಾರಿಸಿದ ಆಹಾರ ಖಾದ್ಯಗಳ ಪ್ರದರ್ಶನ ನಡೆಯಲಿದೆ ಎಂದು ಸೇವಾದಳದ ದಳಪತಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಮತ್ತು ಮಹಿಳಾ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

