ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಕೋಟಿ ಹಣ ಪತ್ತೆ ಪ್ರಕರಣ; ತಲ್ಲತ್‌ ಗ್ಯಾಂಗ್‌ನ ಇಬ್ಬರು ಅರೆಸ್ಟ್

0 0
Read Time:1 Minute, 45 Second

ಮಂಗಳೂರು : ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿಯ ನಿರ್ಜನ ಪ್ರದೇಶದಲ್ಲಿ ಮಂಗಳೂರಿನ ಪ್ರಸಿದ್ಧ  ಜ್ಯುವೆಲ್ಲರಿ ಮಾಲೀಕರಾಗಿರುವ ರಾಜೇಶ ಪವಾರ್‌ ಎಂಬುವವರಿಗೆ ಸೇರಿದ್ದ ಕಾರು ದೊರಕಿತ್ತು.

ಆದರೆ. ಅಚ್ಚರಿಯೆಂಬಂತೆ ಅದರಲ್ಲಿ 1.14 ಕೋಟಿ ನಗದು ಪತ್ತೆಯಾಗಿತ್ತು. ಇದಾದ ಕೆಲವು ದಿನದ ಬಳಿಕ ರಾಜೇಶ್‌ ಪವಾರ್‌ ಮತ್ತು ಕಾರಿನ ಚಾಲಕರು ಅಂಕೋಲಾ ಠಾಣೆಗೆ ತೆರಳಿ ದರೋಡೆ ಕುರಿತು ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಕಾರವಾರ ಪೊಲೀಸರು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ತಲ್ಲತ್‌ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಬಳಿಕ ವಿಚಾರಣೆಗೆ ಒಳಪಡಿಸಿದಾಗ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ದೋಚಿರುವುದಾಗಿ ಒಪ್ಪಿಕೊಂಡಿದ್ದಾರೆ.
ಮಂಗಳೂರು ಹೊರವಲಯದ ಅಡ್ಯಾರ್‌, ಬಜಾಲ್‌ನಲ್ಲಿ ಸಕ್ರಿಯವಾಗಿರುವ ತಲ್ಲತ್‌ ಗ್ಯಾಂಗ್‌ನ ಸದಸ್ಯರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ದರೋಡೆ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಈ ಇಬ್ಬರ ಬಂಧನದ ಬಳಿಕ ಮತ್ತೂ ಕೆಲವೊಂದು ಮಹತ್ವದ ಮಾಹಿತಿ ತಿಳಿದಿದೆ. ಈ ದರೋಡೆ ಸಂಬಂಧಿತ ತಲ್ಲತ್ ಗ್ಯಾಂಗ್‌ನ ಪ್ರಮುಖ ಆರೋಪಿಗಳು ತಲೆಮರಿಸಿಕೊಂಡಿದ್ದು, ತೀವ್ರ ತನಿಖೆ ನಡೆಯುತ್ತಿದೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *