ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

0 0
Read Time:1 Minute, 54 Second

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ಶನಿವಾರ (ಆ.17) ಬೆಳಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ. ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ ದೀರ್ಘವಾಗಿ ಇರಲಿದೆ ಎಂದು ಅವರು ತಿಳಿಸಿದ್ದಾರೆ. ಸಿದ್ಧರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ.ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇಂದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸುಳಿವು ಸಿಎಂ ಸಿದ್ಧರಾಮಯ್ಯ ಅವರಿಗೆ ಶುಕ್ರವಾರವೇ ಲಭಿಸಿತ್ತು. ಅದರಂತೆ ಕಳೆದ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಅವರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ. ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆಯೇ ಸಿಎಂ ನಿವಾಸಕ್ಕೆ ಸಚಿವರಾದ ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಬೈರತಿಸುರೇಶ್‌ ಮೊದಲಿಗರಾಗಿ ಆಗಮಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *