ಮಂಗಳೂರು: ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ – ಪ್ರಕರಣ ದಾಖಲು

0 0
Read Time:1 Minute, 21 Second

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಒಬ್ಬರು ತಲೆಗೆ ಗಂಭೀರವಾಗಿ ಯಾರೋ ಹೊಡೆದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟವರು. ರಾಜೇಶ್ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ ತೊಳೆಯುವುದು, ಕೆಲವೊಮ್ಮೆ ಕಂಡೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್‌ ನಿಲ್ದಾಣದ ಬಳಿ ರಸ್ತೆ ಬದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹ ಕಿವಿಯಲ್ಲಿ ರಕ್ತ ಒಸರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಸಹೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *