ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಅರೆಸ್ಟ್..!

0 0
Read Time:1 Minute, 54 Second

ಮಂಗಳೂರು: ಕುಖ್ಯಾತ ರೌಡಿ ಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಈ ವೇಳೆ ಆತ ಪೊಲೀಸ್ ಅಧಿಕಾರಿಗಳಿಗೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆಂದು ತಿಳಿದು ಬಂದಿದೆ.

ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43) ಬಂಧಿತ ಕುಖ್ಯಾತ ರೌಡಿಶೀಟರ್. ರೌಡಿಶೀಟರ್ ದಾವೂದ್ ಹಲವಾರು ಗಂಭೀರ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಆರೋಪಿ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆಯ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ಎಂದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪಿಎಸ್ಐ ನರೇಂದ್ರ ನೇತೃತ್ವದ ತಂಡ ದಾವೂದ್‌ನನ್ನು ಬಂಧಿಸಲು ಮುಂದಾಗಿದೆ.

ಕಾರ್ಯಾಚರಣೆ ವೇಳೆ ದಾವೂದ್ ಬಂಧನದಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ‌. ಇದರಿಂದ ಪಿಎಸ್ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ನಡುವೆಯೂ ತಂಡ ಆತನನ್ನು ಸದೆಬಡಿದು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ. ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಿಆರ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಘೋರ ಅಪರಾಧಗಳಲ್ಲಿ ತೊಡಗಿಸಿಕೊಂಡಿರುವ ಆರೋಪಿ. ದಾವೂದ್ ಉಳ್ಳಾಲ ಮತ್ತು ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ನ್ಯಾಯವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *