ವಿಟ್ಲ: ಪೆಟ್ರೋಲ್ ಹಾಕಿ ಹಣ ನೀಡದೆ ಯಾಮಾರಿಸಿದ ಆಲ್ಟೋ ಕಾರು ಅಪಘಾತ..!!

ವಿಟ್ಲ: ಮದ್ಯ ಸೇವಿಸಿ ಆಲ್ಟೋ ಕಾರಿನಲ್ಲಿ ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 20ರಂದು ನಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮದ್ಯವ್ಯಸನಿಗಳಾಗಿದ್ದು, ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಕಾರು…

Read More

ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ..!

ಮಂಗಳೂರು: ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ . ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ….

Read More

ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್​​ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ಅವರ ಕೃತಿಯ ಅನುವಾದಿತ ‘ಹಾರ್ಟ್ ಲ್ಯಾಂಪ್’ ಎಂಬ ಸಣ್ಣ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹಾಗಾಗಿ ಕರುನಾಡಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಮಂಗಳವಾರ ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂ. ನಗದು ಒಳಗೊಂಡಿದೆ.ಪ್ರತಿಷ್ಠಿತ ಸಾಹಿತ್ಯ…

Read More

 ಬೆಳ್ತಂಗಡಿ: ಆಕಾಂಕ್ಷ ಸಾವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೃತದೇಹ ಇಂದು ಧರ್ಮಸ್ಥಳಕ್ಕೆ

ಬೆಳ್ತಂಗಡಿ: ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಆರೋಪಕ್ಕೆ ಸಂಬಂಧಪಟ್ಟಂತೆ ಕೇರಳ ಮೂಲದ ಪ್ರೊಫೆಸರ್‌ ಬಿಜಿಲ್‌ ಸಿ ಮ್ಯಾಥ್ಯೂ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಸೋಮವಾರ ಮರಣೋತ್ತರ ಪರೀಕ್ಷೆ ಮಾಡಿದ ಸಿವಿಲ್‌ ಸರಕಾರಿ ಆಸ್ಪತ್ರೆ ವೈದ್ಯರು, ಶವವನ್ನು ಮನೆ ಮಂದಿಗೆ ಹಸ್ತಾಂತರ ಮಾಡಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ ಎರಡು ಗಂಟೆ ವೇಳೆಗೆ ಅಂಬುಲೆನ್ಸ್‌ ಮೂಲಕ ಶವವನ್ನು ತರಲಾಗಿತ್ತು. ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯು ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಶವವನ್ನು…

Read More

ಮಣಿಪಾಲ: ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿಯೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪಟ್ಟೆಯಾಗಿದೆ. ಮೃತರನ್ನು ಛತ್ತಿಸ್‌ಗಡದ ಅನ್ಶುಲ್ ಯಾದವ್ (21) ಎಂದು ಗುರುತಿಸಲಾಗಿದೆ. ಇವರು ಬಿಬಿಎ (ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಕಾಡೆಮಿ) ವ್ಯಾಸಾಂಗ ಮಾಡುತ್ತಿದ್ದು ಮಣಿಪಾಲದ ಎಂಐಟಿ ಹಾಸ್ಟೆಲ್‌ ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದರು. ಇವರು ತನ್ನ ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು…

Read More

ಬಂಟ್ವಾಳ: ದಿ. ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಧ್ಯಾನ್ ಗೆ ಸಾರ್ವಜನಿಕ ಶ್ರದ್ದಾಂಜಲಿ ಸಭೆ

ಬಂಟ್ವಾಳ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನರಿಕೊಂಬು ಗ್ರಾ.ಪಂ.ಸದಸ್ಯರು ಮತ್ತು ಸಾಮಾಜಿಕ ಕಾರ್ಯಕರ್ತರು ಮತ್ತು ಸಮಾಜ ಸೇವಾ ಸಹಕಾರಿ ಸಂಘ ನಿ.ಬಂಟ್ವಾಳ ಇದರ ನಿರ್ದೇಶಕರಾದ ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಇವರಿಗೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಸಾರ್ವಜನಿಕ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ಸತ್ಯಶ್ರೀ ಕಲ್ಯಾಣ ಮಂಟಪ, ಪಾಣೆಮಂಗಳೂರು ಇಲ್ಲಿ ಭಾರತೀಯ ಜನತಾ ಪಾರ್ಟಿ, ನರಿಕೊಂಬು, ಓಂ ಶ್ರೀ ಗೆಳೆಯರ ಬಳಗ (ರಿ.), ನಾಯಿಲ ನರಿಕೊಂಬು, ಶ್ರೀ ದೇವಿ ಯುವಕ ಮಂಡಲ, ನಾಯಿಲ…

Read More

ಮಂಗಳೂರು: ಬಾಡಿಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..! ಕೊಲೆ ಶಂಕೆ

ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದಾನೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ ಶಾಂತಾ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಭಾನುವಾರ ಶವ ಪತ್ತೆಯಾಗಿದ್ದು, ಘಟನೆಯ ಬಳಿಕ ನವೀನ್ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು…

Read More

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ-ಸಂಕಷ್ಟಕ್ಕೀಡಾದ ಜನ

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ್ದು, 185ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Hire Glow Elegent overseas international Private Ltd ಎಂಬ ಹೆಸರಿನಿಂದ ವಂಚನೆಗೊಳಗಾದ 185 ಜನ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಕೇರಳ ಸೇರಿದಂತೆ ಇತರ ಕೆಲವು ರಾಜ್ಯಗಳ ಜನರೂ ವಂಚನೆಗೆ ಒಳಗಾಗಿದ್ದಾರೆ. ಇದೀಗ ವಂಚನೆಗೊಳಗಾದವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ವಂಚನೆಯ ಕರಾಳ ಮುಖ ಅನಾವರಣಗೊಂಡಿದೆ. ಮಂಗಳೂರಿನ ಕಂಕನಾಡಿಯಲ್ಲಿ ಕಚೇರಿಯನ್ನು ‌ಹೊಂದಿದ್ದ ಖಾಸಗಿ…

Read More

ಮಂಗಳೂರು : ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಖೈದಿಗಳಿಂದ ಅಟ್ಯಾಕ್

ಮಂಗಳೂರು ; ಸುಹಾಸ್ ಶೆಟ್ಟಿ ಹತ್ಯೆ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಮಂಗಳೂರು ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪರಾದ ನೌಷಾದ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ‌ ಮೈಸೂರು ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದಿದ್ದ ನೌಷಾದ್ ಜೈಲಿನಲ್ಲಿ ಮತ್ತೋರ್ವ ಖೈದಿ…

Read More

ಮೇ 20ರಂದು ಉಡುಪಿ, ದ.ಕ, ಉ.ಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯಾಗುವ ಸಾಧ್ಯತೆ

ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರೀ ಸುಂಟರಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಇಡೀ ದಿನ ಜಿಲ್ಲೆಯಾದ್ಯಂತ‌ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಗೆ ಜನರು ಪರದಾಡಿದರು….

Read More