ನಾವು ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂತ ಹೇಳಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

 ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿನ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು. ಆಗ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು. ಈಗ ಗುತ್ತಿಗೆ ಕೆಲಸ…

Read More

ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

ಬೆಂಗಳೂರು : ಪಂಜಾಬ್ ನಲ್ಲಿ ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೇಮ ವೈಫಲ್ಯದಿಂದ ಆಕಾಂಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆಕಾಂಕ್ಷಾ ಪಗ್ವಾಡ ಕಾಲೇಜಿನ ಪ್ರೊ. ಮ್ಯಾಥ್ಯೂ ಅವರನ್ನು ಪ್ರೀತಿಸುತ್ತಿದ್ದರು. ಕಾಲೇಜಿಗೆ ಸರ್ಟಿಫಿಕೇಟ್ ತರಲು ಹೋದಾಗ ಬ್ರೇಕಪ್ ವಿಚಾರಕ್ಕೆ ಪ್ರೊ. ಮ್ಯಾಥ್ಯೂ ಜೊತೆ ಆಕಾಂಕ್ಷ ಗಲಾಟೆ ಮಾಡಿದ್ದಾರೆ. ನಂತರ ಮನನೊಂದು ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ, ಪ್ರೊ…

Read More

ಸುಹಾಸ್‌ ಹತ್ಯೆ ಪ್ರಕರಣ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟ‌ರ್ ವಿರುದ್ಧ FIR

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮಾಜಿ ಕಾರ್ಪೊರೇಟ‌ರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆ‌ರ್ ದಾಖಲಾಗಿದೆ. ಶ್ವೇತಾ ಪೂಜಾರಿ ಮೇಲೆ ಎಫ್‌ಐಆ‌ರ್ ದಾಖಲಾಗಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ…

Read More

ಕುಲಾಲ/ಕುಂಬಾರರ ಯುವವೇದಿಕೆ ಉಳ್ಳಾಲ ಇದರ ಆಶ್ರಯದಲ್ಲಿ SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ/ಕುಂಬಾರರ ಯುವವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಉಳ್ಳಾಲ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ ಮೇ.18ರಂದು ರವಿವಾರ ಶ್ರೀರಕ್ತೇಶ್ವರಿ ಅಮ್ಮನವರ ಸನ್ನಿಧಿ ಟ್ರಸ್ಟ್ (ರಿ.) ವಿದ್ಯಾನಗರ ನರಿಂಗಾನ ಇಲ್ಲಿ ನಡೆಯಿತು. 2024-25ನೇ ಸಾಲಿನಲ್ಲಿ ನಡೆದ SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಶ್ರೀ ವೈಷ್ಣವಿ ಕ್ಷೇತ್ರ ಮುಳಿಯ ದೀಪ…

Read More

ಪುತ್ತೂರು: ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ..! ಸವಾರ ಮೃತ್ಯು

ಪುತ್ತೂರು: ಶಾಮಿಯಾನ ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುದೀಪ್‍ ಚೊಕ್ಕಾಡಿ ಮೃತಪಟ್ಟ ಬೈಕ್‍ ಸವಾರ ಗಂಭೀರ ಗಾಯಗೊಂಡ ಸುದೀಪ್‍ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದೀಪ್‍ ಮುರ ಸಮೀಪ ಆಯುರ್ವೇದಿಕ್‍ ಔಷಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ ಮೂಲದ ಏರೋಸ್ಪೇಸ್ ಇಂಜಿನಿಯರ್ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು..!

ಬೆಳ್ತಂಗಡಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿಯೋರ್ವಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಪ್ಪತ್ತೆರಡು ವರ್ಷದ ಆಕಾಂಕ್ಷ ಮೃತ ದುರ್ದೈವಿ. ಧರ್ಮಸ್ಥಳ ಬೋಳಿಯಾರ್ ನಿವಾಸಿಗಳಾದ ಸುರೇಂದ್ರ ಹಾಗುಹ ಸಿಂಧೂದೇವಿ ದಂಪತಿಯ ಮಗಳು ಆಕಾಂಕ್ಷ. ಈಕೆ ಪಂಜಾಬ್ ನ ಫಗ್ವಾಡಾ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಮುಗಿಸಿ ಆರು ತಿಂಗಳ ಹಿಂದೆಯಷ್ಟೇ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ವೃತ್ತಿ ಜೀವನ ಶುರು ಮಾಡಿದ್ದರು. ಶೈಕ್ಷಣಿಕ ಪ್ರಮಾಣ ಪತ್ರಕ್ಕಾಗಿ ಪಂಜಾಬ್ ಗೆ ಆಗಮಿಸಿದ್ದ ಆಕಾಂಕ್ಷ ನಂತರ ಮನೆಯವರ ಜೊತೆ…

Read More

ಮಂಗಳೂರು: ರೈಲಿನಲ್ಲಿ ಕುಳಿತಿದ್ದ ವ್ಯಕ್ತಿ ಹೃದಾಯಾಘಾತದಿಂದ ಸಾವು..!

ಮಂಗಳೂರು: ರೈಲಿನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರಿಗೆ ಹೃದಾಯಾಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು ಚೆನ್ನೈ ಮೇಲ್ ಎಕ್ಸ್‌ಪ್ರೆಸ್‌ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಯಾದವ್ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್ ಕೊಡಿಸಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.೦೦…

Read More

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪಕ್ಕೆ 4 ತಿಂಗಳ ಕಾಲ ಪ್ರವೇಶ ನಿರ್ಬಂಧ..!

ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ಆಕರ್ಷಣೆಯ ತಾಣವಾದ ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಸಾರ್ವಜನಿಕ ಪ್ರವಾಸಿಗರಿಗೆ ಭೇಟಿಯನ್ನು ಮುಂದಿನ 4 ತಿಂಗಳ ಕಾಲ ನಿರ್ಬಂಧಿಸಲಾಗಿದೆ. ಜತೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯ ತನಕ ಸ್ಥಗಿತಗೊಳಿಸಲಾಗಿದೆ. ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ ಎಂಬ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸಪ್ಟೆಂಬರ್ 15 ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ….

Read More

ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನರಾರಂಭ : ಮೊದಲ ದಿನವೇ ಪುಸ್ತಕ, ಸಮವಸ್ತ್ರ ವಿತರಣೆ

ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನಾರರಂಭವಾಗಲಿದ್ದು, ಪ್ರಾರಂಭೋತ್ಸವ ದಿನದಿಂದಲೇ ಪುಸ್ತಕ, ಸಮವಸ್ತ್ರ ಕೊಡಲು ಸಿದ್ಧತೆ ಕೈಗೊಳ್ಳಲಾಗಿದೆ. ಶೂ, ಸಾಕ್ಸ್ ಮೂರು ತಿಂಗಳ ನಂತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ…

Read More

 ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣ : ಇಬ್ಬರ ವಿರುದ್ಧ ‘FIR’ ದಾಖಲು

ಬೆಂಗಳೂರು : ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ ಡಿಸ್‌ಪ್ಲೇ ಬೋರ್ಡ್​ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಕನ್ನಡಿಗರ ಭಾವನೆಗಳಿಗೆ ಧಕ್ಕೆ, ಸಮಾಜದಲ್ಲಿ ಪರಸ್ಪರ ವೈ ಮನಸು ಸೃಷ್ಟಿ,ಹಾಗು ಶಾಂತಿ ಭಂಗ ಉಂಟು ಮಾಡಲು ಯತ್ನಿಸಿದ ಆರೋಪದ ಅಡಿ FIR ದಾಖಲಿಸಲಾಗಿದೆ. ಹೌದು ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣಕ್ಕೆ…

Read More