ಮುಸ್ಲಿಂ ಮುಖಂಡರ ಜತೆ ಗೃಹ ಸಚಿವರ ಸಭೆ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದಿಕ್ಕುತಪ್ಪಿಸುವ ಷಡ್ಯಂತ್ರ- ಸುನೀಲ್ ಕುಮಾರ್

ಮಂಗಳೂರು ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತು ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಪ್ರತ್ಯೇಕ ಸಭೆ‌ ನಡೆಸುವ ಮೂಲಕ ಈ ಹತ್ಯಾ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸಲು ಮುಂದಾಗಿರುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದೂಗಳ ದಮನಕ್ಕೆ ದುರ್ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಸಚಿವ ಪರಮೇಶ್ವರ್ ಅವರು, ಪೊಲೀಸ್ ಅಧಿಕಾರಿಗಳ ಜತೆಗೆ…

Read More

ಸುಹಾಸ್ ಶೆಟ್ಟಿ ಹತ್ಯೆ: ಕೊಲೆಗೆ ಫಾಜಿಲ್ ಸಹೋದರನಿಂದ ಸುಪಾರಿ..! ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಪ್ಲಾನ್

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಎಂಬಾತ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣ ಫಾಝಿಲ್…

Read More

ಕಾರ್ಕಳ: ಕೆರೆ ಮಣ್ಣು ಮಿಶ್ರಿತ ಮಣ್ಣಿನ ಪರಿಕರಗಳ ಅನದಿಕೃತ ಮಾರಾಟ..! ಕುಲಾಲ್ ಸಂಘದಿಂದ ಇಲಾಖೆಗಳಿಗೆ ಮನವಿ

ಕಾರ್ಕಳ ಬೈಪಾಸ್ ಬಳಿ ಹೊರ ರಾಜ್ಯದ ಕೆರೆ ಮಣ್ಣು ಮಿಶ್ರಿತ ಮಣ್ಣಿನ ಪರಿಕರಗಳನ್ನು ಅನಧಿಕೃತವಾಗಿ ಸ್ಥಳೀಯ ಆಡಳಿತದ ಅನುಮತಿಯಿಲ್ಲದೆ ರಸ್ತೆ ಬಳಿ ರಾಶಿ ಹಾಕಿ ಕೆಲವು ತಿಂಗಳಿಂದ ಮಾರಾಟ ಮಾಡುತ್ತಿದ್ದು ಈ ಕೂಡಲೇ ಅದನ್ನು ತೆರವುಗೊಳಿಸಿ ಸ್ಥಳೀಯ ಕುಂಬಾರರಿಗೆ ಅನುಕೂಲ ಕಲ್ಪಿಸಿ ಕೊಡುವಂತೆ ಸಂಬಂಧ ಪಟ್ಟ ಲೋಕೋಪಯೋಗಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಕಾರ್ಯ ನಿರ್ವಾಹಕ ಅಧಿಕಾರಿ ತಾಲೂಕ್ ಪಂಚಾಯತ್, ಕಾರ್ಕಳ ತಾಲೂಕಿನ ಮಾನ್ಯ ತಹಶೀಲ್ದಾರರು ಹಾಗೂ ಸಾಣೂರು ಗ್ರಾಮ ಪಂಚಾಯತ್ ಪಿ. ಡಿ. ಓ ಇವರಿಗೆ…

Read More

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಗೋವಾ: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಜಾತ್ರಾ ಮಹೋತ್ಸವ ವೇಳೆ ಜನರು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು…

Read More

SSLC ಪರೀಕ್ಷೆ : ರಿತೇಶ್ ಮೂಲ್ಯ 98.56% ಅಂಕ

ಕಾರ್ಕಳ : 2024 – 25 ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆ ಹಿರ್ಗಾನ ಶಾಲೆಯ ವಿದ್ಯಾರ್ಥಿ ರಿತೇಶ್ ಮೂಲ್ಯಇವರು 625 ಅಂಕ ಕ್ಕೆ 616 (98.56%) ಅಂಕ ಪಡೆದು ಉತ್ತೀರ್ಣರಾಗಿರುತ್ತಾರೆ.ಇವರು ಮೂರೂರು ಚಂದ್ರಶೇಖರ ಮೂಲ್ಯ ಹಾಗೂ ಸುಜಾತ ಇವರ ಪುತ್ರ.

Read More

ಮಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ 8 ಆರೋಪಿಗಳು ಸೆರೆ- ತೀವ್ರ ವಿಚಾರಣೆ

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ…

Read More

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ

ಮಂಗಳೂರು: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಗೃಹ ಸಚಿವವರಿಗೆ ಬರೆದ ಪತ್ರದಲ್ಲಿ ಸಂಸದರು, ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಘಟನೆಯಿಂದ ನಾನು ದಿಗ್ಭ್ರಮೆಗೊಂಡಿದ್ದು, ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ…

Read More

SSLC ಪರೀಕ್ಷೆ : ನಾರಾವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂನಂ ಡಿ. ಕುಲಾಲ್ ರವರಿಗೆ 95% ಅಂಕ

ನಾರಾವಿ: 2024-25ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ನಾರಾವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂನಂ ಡಿ. ಕುಲಾಲ್ ಅವರು 95% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಪಾಲ್ಕೆ ಪೊಸಕ್ಯಾರು ನಿವಾಸಿ ಧರ್ಣಪ್ಪ ಮತ್ತು ಹರಿಣಿ ದಂಪತಿಯ ಸುಪುತ್ರಿ.

Read More

ಸುಹಾಸ್ ಶೆಟ್ಟಿ ಹತ್ಯೆ: ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ಮಧ್ಯೆ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಟೋ ಚಾಲಕ ಅಬೂಬ್ಬಕರ್ ಮೇಲೆ ದಾಳಿ ಮಾಡಲಾಗಿರುವ ಕುರಿತು ವರದಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್‌ ಕೊಲೆಗೆ ಯತ್ನ ಮಾಡಲಾಗಿದೆ. ಅಬೂಬಕ್ಕರನನ್ನು ಅಡ್ಡಗಟ್ಟಿ ಸುಶಾಂತ್‌, ಸಂದೇಶ್‌ ಪೂಜಾರಿ ಎಂಬುವವರು ಕೊಲೆಗೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದಾರೆ. ಪೊಲೀಸರ ವಿಚಾರಣೆ…

Read More

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಎರಡು ಸ್ಥಳಗಳಲ್ಲಿ ಇಬ್ಬರಿಗೆ ಚೂರಿ ಇರಿತ..!!

ಮಂಗಳೂರು: ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೋಟು ಒಳಪೇಟೆಯಲ್ಲಿ ಯುವಕರಿಗೆ ಚೂರಿ ಇರಿಯಲಾಗಿದೆ ಎಂಬ ಮಾಹಿತಿ ಲಭಿಸಿದೆ. ಮಂಗಳೂರು ಕಮಿಷನರ್ ವ್ಯಾಪ್ತಿಯ ಅಡ್ಯಾರ್ ಕಣ್ಣೂರು ಎಂಬಲ್ಲಿ ಬೈಕ್‌ನಲ್ಲಿ ಬಂದ ತಂಡವೊಂದು ಯುವಕನೋರ್ವನಿಗೆ ಚೂರಿ ಇರಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಯುವಕ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಅಡ್ಯಾರ್ ಕಣ್ಣೂರು ನಿವಾಸಿ ನೌಶಾದ್ ಎಂಬಾತ…

Read More