ಸೆಲ್ಫಿ ವಿಡಿಯೋ ಮಾಡಿ ಅತ್ತೆ, ನಾದಿನಿ, ಮಗಳ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತು ನಾದಿನಿ ಸಿಂಧು(24) ಮೇಲೆ ಖಾಸಗಿ ಶಾಲೆಯ ವಾಹನ ಚಾಲಕ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಘಟನೆಯಲ್ಲಿ ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹತ್ಯೆ ಬಳಿಕ ರತ್ನಾಕರ ತಾನೂ ಗುಂಡು…

Read More

ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಪ್ರಥಮ- ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಭಾಜರಾಗಿದ್ದು. ಲಯನ್ಸ್ ಕ್ಲಬ್ ಪಂಪ್ ವೆಲ್ ಕಲ್ಪವ್ರಕ್ಷಕ್ಕೆ ಲಯನ್ಸ್ ಗವರ್ನರ್ ಭಾರತಿ ಬಿ.ಎಂ ಇವರ ಭೇಟಿ ಸಂದರ್ಭದಲ್ಲಿ ಸತೀಶ್ ಇರಾ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ ಎಮ್, ಕ್ಲಬ್ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾರ್ಯದರ್ಶಿ ರಮ್ಯಾ ಶೆಟ್ಟಿ, ಕೋಶಾಧಿಕಾರಿ ವೀಣಾ ಮಂಗಳ,…

Read More

ಮಂಗಳೂರು: ಮೂಡ ಆಯುಕ್ತರಿಗೆ ಜೀವ ಬೆದರಿಕೆ- ಪ್ರಕರಣ ದಾಖಲು

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತರಿಗೆ ಇಬ್ಬರು ಬ್ರೋಕರ್‌ಗಳು ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೂಡಾ ಆಯುಕ್ತೆ ಉರ್ವ ಠಾಣೆಗೆ ದೂರು ನೀಡಿದ್ದಾರೆ. ಜನವರಿ 7 ರಂದು ಸಿಬ್ಬಂದಿ ಊಟಕ್ಕೆ ಹೋದ ಸಮಯದಲ್ಲಿ ಮುಡಾ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಮೇಜಿನ ಮೇಲಿದ್ದ ಕಡತಗಳನ್ನು ವಿರೂಪಗೊಳಿಸಿದ ಆರೋಪ, ಅಲ್ಲದೆ ಮೂಡಾದಲ್ಲಿ ನಡೆದಿರುವ ಕೆಲವು ವಿದ್ಯಾಮಾನ, ಮುಡಾ ಕಚೇರಿಯಲ್ಲಿನ ಏಕ-ಸ್ಥಳ ಅನುಮೋದನೆಗಳು ಮತ್ತು ಇತರ ಕೆಲಸಗಳಿಗೆ ಸಂಬಂಧಿಸಿದ…

Read More

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈಗೆ ಗೇಟ್ ಪಾಸ್ ಸಾಧ್ಯತೆ…?

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪಕ್ಷಕ್ಕೆ ಒಂದು ಇಮೇಜ್ ತಂದು ಕೊಟ್ಟಿದ್ದ ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಸಾದ್ಯತೆ ಇದೆ ಎಂದು ವರದಿಯಾಗಿದೆ. 2026ರಲ್ಲಿ ತಮಿಳು ನಾಡಿನಲ್ಲಿ ಚುನಾವಣೆ ಹಿನ್ನಲೆ ಜಾತಿ ಲೆಕ್ಕಾಚಾರದ ವಿಚಾರವಾಗಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2026ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುವ ಸಾಧ್ಯತೆ ಹಿನ್ನಲೆ ಬಿಜೆಪಿ…

Read More

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು  ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ…

Read More

ಬಂಟ್ವಾಳ: ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತಿಮಹಾರುದ್ರ ಪಾರಾಯಣ

ಬಂಟ್ವಾಳ:ಮೊಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರದಲ್ಲಿ ಜರಗಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ 2ನೇ ದಿನವಾದ ನಿನ್ನೆ ಶ್ರೀ ದೇವರಿಗೆ ಅತಿಮಹಾರುದ್ರ ಪಾರಾಯಣ ನಡೆಯಿತು. ಪ್ರತಿನಿತ್ಯ ಶ್ರೀ ಕ್ಷೇತ್ರದಲ್ಲಿ ಈ ಪಾರಾಯಣ ಮೇ 4 ರಂದು ನಡೆಯುವ ಯಾಗದವರೆಗೂ ನಡೆಯಲಿದೆ. ನಿತ್ಯ ಅನ್ನದಾನವೂ ನಡೆಯುತ್ತದೆ. ವಾರಾಣಾಸಿ ಕಾಶಿಮಠ ಶ್ರೀಮದ್ ಕಾಶಿಜ್ಞಾನ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥ ಈ…

Read More

ಬೆಲೆ ಏರಿಕೆ ವಿರುದ್ಧ ಬಿಜೆಪಿಯಿಂದ ರಾಜ್ಯದಾದ್ಯಂತ ಹೋರಾಟ: 2ರಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 2ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸರಣಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿರುವ ಏಕೈಕ ಖಾತರಿ ಬೆಲೆ ಏರಿಕೆ… ಈ ಬೆಲೆ ಏರಿಕೆಯಿಂದ ಜನಸಾಮಾನ್ಯರು ಬೇಸತ್ತಿದ್ದಾರೆ” ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು. ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2ರಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ. ಏಪ್ರಿಲ್ 5 ರಂದು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಲ್ಲಿ ಬಿಜೆಪಿ…

Read More

ಎಪ್ರಿಲ್ 1 ರಿಂದ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆ..!

ಉಡುಪಿ: ಏಪ್ರಿಲ್‍ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟ‌ರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಳ್ತಂಗಡಿ: ಬೈಕ್‌ಗಳ ನಡುವೆ ಅಪಘಾತ- ಭಾಗವತ ಸತೀಶ್ ಆಚಾರ್ಯ ಮೃತ್ಯು

ಬೆಳ್ತಂಗಡಿ: ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಂಡಿಂಜೆ ಗ್ರಾಮದ ಪಿಯೂಲಿರು ನಿವಾಸಿ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಎಂದು ಗುರುತಿಸಲಾಗಿದೆ. ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರವರು ಮಾ. 31ರಂದು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ…

Read More

ಉಳ್ಳಾಲ: ಲಕೋಟೆಯಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಪತ್ತೆ..!

ಉಳ್ಳಾಲ: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಉಳ್ಳಾಲ ಪರಿಸರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಇದರ ಹಿಂದಿನ ಅಸಲಿಯತ್ತು ಈಗ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಸುದ್ದಿ ಕಾಡಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ…

Read More