ಮಂಗಳೂರು – ಬೆಂಗಳೂರು ರೈಲಿನಿಂದ ಬಿದ್ದ ಯುವಕ- 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆ..!

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು, 15 ಗಂಟೆ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟ‌ರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು…

Read More

ಪಕ್ಷದಿಂದ ಯತ್ನಾಳ್ ಉಚ್ಚಾಟನೆ| ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಯತ್ನಾಳ್‌  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್‌ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ…

Read More

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಸರ್ಕಾರಿ ಅಭಿಯೋಜಕ..!

ಉಡುಪಿ: ಉಡುಪಿ ನ್ಯಾಯಾಲಯದ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಮರಳಿನಿಂದ ತುಂಬಿದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದಂತೆ ನಾಯ್ಕ್ 2,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ಉಡುಪಿ ನ್ಯಾಯಾಲಯದೊಳಗಿನ ಅವರ ಕಚೇರಿಯಲ್ಲಿ ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದೂರುದಾರರು ಪರಿಚಯದ ವ್ಯಕ್ತಿಯೊಬ್ಬರ ವಾಹನದಲ್ಲಿ ಮೂಲ್ಕಿಯಿಂದ ಉಡುಪಿಗೆ ಮರಳು ಸಾಗಿಸುತ್ತಿರುವಾಗ ನಿಟ್ಟೂರು…

Read More

ಬೆಳ್ತಂಗಡಿ: ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಸಾವು..!

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ.26 ರಂದು ನಡೆದಿದೆ. ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಮೃತಪಟ್ಟವರು.ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ- ಮಂಗಳೂರಿನ ಯುವಕ ಸಾವು..!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಗೆ ಪಲ್ಟಿಯಾಗಿ, ಕ್ಲೀನರ್‌ವೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನ್ನು ಮಂಗಳೂರಿನ ಬಣತಾಡಿ ಗ್ರಾಮದ ದಿ. ರಹೀಮ್ ರವರ ಮಗ ಉಮ್ಮರ್ ಸಲ್ಮನ್ ಫಾರಿಶ್ (18) ಎಂದು ಗುರುತಿಸಲಾಗಿದೆ. ಕಲ್ಲಡ್ಕ ಮೂಲದ ಫಾಹಾದ್ ಎಂಬವರು ಚಾಲಕರಗಿದ್ದ ಪ್ಲೈವುಡ್ ತುಂಬಿದ್ದ ಲಾರಿ ವೇಗವಾಗಿ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.ಲಾರಿ ಚಾಲಕನಿಗೆ ಸಣ್ಣ ಪುಟ್ಟ…

Read More

ಪುತ್ತೂರು: ಯುವಕನ ಶವ ಕೆರೆಯಲ್ಲಿ ಪತ್ತೆ..!!

ಪುತ್ತೂರು: ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಅಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ. ಮರಕ್ಕೂರ್ ನಿವಾಸಿ ಕಿರಣ್‍ ನಾಯ್ಕ್ (29) ಎಂಬವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ,ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Read More

SSLC ಆದವರಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ- ಮಂಗಳೂರಿನಲ್ಲಿ ಪರೀಕ್ಷೆ 

ಬೆಂಗಳೂರು:ಇಂಡಿಯನ್ ಕೋಸ್ಟ್ ಗಾರ್ಡ್ನಲ್ಲಿ ಗ್ರೂಪ್ ಸಿ ವಿಭಾಗದ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಗ್ರೂಪ್ ಸಿಯ ಒಟ್ಟು 4 ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು. ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ. ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಮತ್ತು ಔದ್ಯೋಗಿಕ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ವೇತನ: 21,700ರಿಂದ 69,100 ರೂ…

Read More

ಕಡಬ: ಮಲಗಿದ ಸ್ಥಿತಿಯಲ್ಲಿ ಎರಡುವರೆ ವರ್ಷದ ಗಂಡು ಮಗು ಮೃತ್ಯು..!

ಕಡಬ :ಎರಡುವರೆ ವರ್ಷದ ಗಂಡು ಮಗುವೊಂದು ಆಕಸ್ಮಿಕವಾಗಿ ಮಲಗಿದಲ್ಲಿಯೇ ಮೃತಪಟ್ಟ ಘಟನೆಯೊಂದು ಕಡಬದ ಕೊಣಾಜೆ ಗ್ರಾಮದಿಂದ ವರದಿಯಾಗಿದೆ. ಉತ್ತರ ಪ್ರದೇಶ ಮೂಲದ ಕೊಣಾಜೆಯ ಮಾಲದಲ್ಲಿ ಕೆಲಸಕ್ಕೆಂದು ಬಂದು ವಾಸವಾಗಿದ್ದ  ರಾಜಾ  ಸಿಂಗ್ ಮತ್ತು ಶ್ರೀ ಮತಿ ದಿವ್ಯಾಂಶಿ ದಂಪತಿಗಳ ಪುತ್ರ ರುದ್ರ ಪ್ರತಾಪ್‌ ಸಿಂಗ್‌ ( 2 ½ ವರ್ಷ) ಮೃತಪಟ್ಟ ಮಗು ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಲಿಂಡೋರಾಜ್‌ರವರ  ಜಾಗದಲ್ಲಿ   ತೋಟದ ಕೆಲಸ ಮಾಡಿಕೊಂಡಿದ್ದ ಈ ದಂಪತಿಗೆ   2 ½ ವರ್ಷ ಪ್ರಾಯದ ಗಂಡುಮಗುವಿತ್ತು.ಮಾ.25 ರಂದು…

Read More

ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಹಿರಿಯ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಗೀತಾ ಶಿವಕುಮಾರ್ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗೀತಾ ಅವರಿಗೆ ಸರ್ಜರಿ ಮಾಡಿರುವ ಬಗ್ಗೆ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಚಿವರು,…

Read More

ಪ್ರಚೋದನಕಾರಿ ಭಾಷಣ: ಮಂಜು ಕೊಳ ವಿರುದ್ಧ ಸುಮೋಟೋ ಕೇಸ್ ..!

ಉಡುಪಿ:  ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾ.22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು ಕೊಳ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಸಭೆಯಲ್ಲಿ ಮಾತನಾಡಿದ್ದ ಮಂಜು ಕೊಳ, ಗಂಗೊಳ್ಳಿಯ ಒಂದು ಘಟನೆ ನೆನಪಿಟ್ಟುಕೊಳ್ಳಿ ಎಂದು ಇದೇ ಎಸ್ಪಿಗೆ ಹೇಳುತ್ತೇನೆ. ಒಬ್ಬ ಮೀನುಗಾರನನ್ನು ಒಳಗೆ ಹಾಕಿದರು. ಅದಕ್ಕೆ 10,000 ಜನ…

Read More