ನಾಟಕ ಕ್ಷೇತ್ರದಲ್ಲಿ ಹೊಸ ದಾಖಲೆ ಸೃಷ್ಟಿಸಲು ಹೊರಟಿದೆ ಸಾಯಿಶಕ್ತಿ ಕಲಾಬಳಗ : ಒಂದೇ ದಿನ ಮೂರು ರಾಜ್ಯಗಳಲ್ಲಿ ನಾಟಕ ಪ್ರದರ್ಶನ

ಮಂಗಳೂರು : ನಾಟಕ ರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸುವ ಪ್ರಯತ್ನದಲ್ಲಿ, ಮಂಗಳೂರಿನ ಸಾಯಿಶಕ್ತಿ ಕಲಾಬಳಗ ಈಗಾಗಲೇ ಸಾಕಷ್ಟು ಹೆಸರನ್ನು ಹುಟ್ಟುಹಾಕಿದೆ. ಈ ತಂಡ ಇದೀಗ ಒಂದೇ ದಿನ ಮೂರು ರಾಜ್ಯಗಳಲ್ಲಿ ನಾಟಕ ಪ್ರದರ್ಶಿಸುವ ಮೂಲಕ ಹೊಸ ದಾಖಲೆ ಬರೆಯಲು ಮುಂದಾಗಿದೆ. ಇದು ನಾಟಕ ಕ್ಷೇತ್ರದಲ್ಲಿ ಅಪೂರ್ವ ಪ್ರಯತ್ನವಾಗಿದ್ದು , ನಾಟಕದ ಪ್ರಭಾವವನ್ನು ವಿಸ್ತರಿಸುವ ಮಹತ್ವಾಕಾಂಕ್ಷಿ ಯೋಜನೆ ಎಂದು ಪರಿಗಣಿಸಲಾಗಿದೆ. ಈ ವಿಶಿಷ್ಟ ಪ್ರಯತ್ನದ ಅಂಗವಾಗಿ, ತಂಡದ ಕಲಾವಿದರು ಕರ್ನಾಟಕ, ಕೇರಳ , ಮತ್ತು ಮುಂಬೈ ಮಹಾನಗರಿಯಲ್ಲಿ ಒಂದೇ…

Read More

ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಮಾರ್ಚ್ 1 ರಿಂದ ಅರ್ಜಿ ಪ್ರಕ್ರಿಯೆಯೂ ಆರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು IDBI ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ idbibank.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 12, 2025. ಈ ನೇಮಕಾತಿ ಅಭಿಯಾನದಡಿಯಲ್ಲಿ, ಐಡಿಬಿಐ ಬ್ಯಾಂಕ್ ಒಟ್ಟು 650 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಐಡಿಬಿಐ ಬ್ಯಾಂಕ್ ನೇಮಕಾತಿ ಅರ್ಹತಾ ಮಾನದಂಡಗಳು: ಅರ್ಜಿ ಶುಲ್ಕ ಎಷ್ಟು? ಸಾಮಾನ್ಯ…

Read More

ತಿದ್ದುಪಡಿ ಮಾಡಿದ ಮೇಲೆ ಹಳೆಯ ಜನನ ಪ್ರಮಾಣ ಪತ್ರ ರದ್ದು ಮಾಡಿ- ಕರ್ನಾಟಕ ಹೈಕೋರ್ಟ್

ಬೆಂಗಳೂರು: ಈಗಾಗಲೇ ನೀಡಲಾದ ಜನನ ಪ್ರಮಾಣಪತ್ರದಲ್ಲಿ ಯಾವುದೇ ತಿದ್ದುಪಡಿ ಕಂಡುಬಂದರೆ, ಜನನ ಮತ್ತು ಮರಣ ನೋಂದಣಾಧಿಕಾರಿಗಳು ಹಿಂದಿನ ಜನನ ಪ್ರಮಾಣಪತ್ರವನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ಹೇಳಿದೆ. ಹಿಂದಿನ ಜನನ ಪ್ರಮಾಣಪತ್ರವನ್ನು ರದ್ದುಪಡಿಸಲಾಗಿದೆ ಎಂಬ ಅನುಮೋದನೆಯೊಂದಿಗೆ, ಸರಿಪಡಿಸಿದ ಜನನ ಪ್ರಮಾಣಪತ್ರವನ್ನು ನೀಡುವಾಗ ಮೂಲ ಜನನ ಪ್ರಮಾಣಪತ್ರವನ್ನು ಹಿಂಪಡೆಯಲು ಎಲ್ಲಾ ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ನ್ಯಾಯಾಲಯವು ಈಗ ಪೌರಾಡಳಿತ ನಿರ್ದೇಶಕರಿಗೆ ಸೂಚಿಸಿದೆ. ಅಗತ್ಯ ನಮೂದುಗಳನ್ನು ಇ-ಜನ್ಮ…

Read More

ಭೀಕರ ರಸ್ತೆ ಅಪಘಾತ- ಮೂವರು ದುರ್ಮರಣ

ಕಾಸರಗೋಡು: ಮಂಜೇಶ್ವರದ ವಾಮಂಜೂರಿನಲ್ಲಿ ಸೋಮವಾರ ತಡ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಉಪ್ಪಳ ಪೈವಳಿಕೆ ಸಮೀಪದ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ವರುಣ್ ಮತ್ತು ಕೃಷ್ಣ ಮೃತಪಟ್ಟವರು.ಉಪ್ಪಿನಂಗಡಿ ಮೂಲದ ರತನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ…

Read More

ಬಂಟ್ವಾಳ: ವೀಡಿಯೋ ನೋಡಿದರೆ ಹಣ ಸಿಗುತ್ತದೆ ಎಂದು ನಂಬಿ 1.12 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ಬಂಟ್ವಾಳ: ವೀಡಿಯೋ ನೋಡಿದರೆ ಹಣ ಸಿಗುತ್ತದೆ ಎಂಬ ಆ್ಯಪ್‌ವೊಂದರ ಮಾಹಿತಿಯಂತೆ ಕಲ್ಲಡ್ಕ ಕೃಷ್ಣಕೋಡಿಯ ವರುಣ್‌ ಅವರು ಬ್ಯಾಂಕ್‌ ಖಾತೆಯಿಂದ 1.12 ಲಕ್ಷ ರೂ. ಕಳೆದುಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರುಣ್‌ ಮೊಬೈಲ್‌ಗೆ 2024ರ ನ. 8ರಂದು ವಾಟ್ಸ್‌ಆ್ಯಪ್‌ ಮೂಲಕ ಲಿಂಕ್‌ವೊಂದು ಬಂದಿದ್ದು, ಅದನ್ನು ಒತ್ತಿದಾಗ ಮಾಡಿದಾಗ ಆರ್‌ಪಿಸಿ ಆ್ಯಪ್‌ ಓಪನ್‌ ಆಗಿತ್ತು. ಅದರ ಮೂಲಕ ಅಶಕ್ತರಿಗೆ ನೆರವು ನೀಡಲಾಗುತ್ತದೆ ಎಂಬ ಮಾಹಿತಿ ಇದ್ದು, ಜತೆಗೆ ದಿನಕ್ಕೆ 40…

Read More

ಖ್ಯಾತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಕ್ಷೇತ್ರಕ್ಕೆ ಭೇಟಿ

ಉಡುಪಿ: ಖ್ಯಾತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಗದ್ದುಗೆ ಪ್ರತಿಷ್ಠೆಯ ಸಂದರ್ಭದಲ್ಲಿ ದೇವಾಲಯಕ್ಕೆ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆ ಭಾರತ ಟಿ -20 ತಂಡದ ಕ್ಯಾಪ್ಟನ್ ಆಗಮಿಸಿದರು. ಈ ಹಿಂದೆಯೂ ಕ್ಷೇತ್ರಕ್ಕೆ ಬಂದು ದೇಗುಲಕ್ಕೆ ಕಂಬವನ್ನು ಸೇವಾ ರೂಪದಲ್ಲಿ ದಂಪತಿ ಕೊಟ್ಟಿದ್ದರು. ಸೂರ್ಯ ಕುಮಾರ್ ಯಾದವ್ ಪತ್ನಿ ಕರಾವಳಿ ಮೂಲದವರು. ನಿರ್ಮಾಣ ಹಂತದಲ್ಲಿದ್ದ ಕಾಪು ಮಾರಿಯಮ್ಮನ ಗುಡಿಯನ್ನು ಕಂಡು ಸೂರ್ಯ ಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದರು. ಬ್ರಹ್ಮಕಲಶೋತ್ಸವದ ವೇಳೆ ದೇಗುಲಕ್ಕೆ ಬರುವುದಾಗಿ ಯಾದವ್ ಹೇಳಿದ್ದರು. ಟಿ…

Read More

ಬೆಳ್ತಂಗಡಿ: ನವವಿವಾಹಿತೆ ಆತ್ಮಹತ್ಯೆ..!! ಸಾವಿನ ಸುತ್ತ ಅನುಮಾನದ ಹುತ್ತ

ಬೆಳ್ತಂಗಡಿ: ಕಣಿಯೂರು ನಿವಾಸಿ ಮತ್ತು ನವವಿವಾಹಿತೆ ಪೂಜಾಶ್ರೀ (23) ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ ಮೂಲತ: ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ಮನೆಯ ವಾರಿಜ ಮತ್ತು ಸೇಸಪ್ಪ ಪೂಜಾರಿ ದಂಪತಿಯ ಪುತ್ರಿ. ಅವರು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಪೂಜಾಶ್ರೀ ಕೆಲಸ ಹುಡುಕುತ್ತಿದ್ದರು ಎಂದು ತಿಳಿದುಬಂದಿದೆ. ಇದೇ ನೆಪದಲ್ಲಿ ಪತಿ ಪ್ರಕಾಶ್ ಅವರು ಪೂಜಾಶ್ರೀಯನ್ನು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕಳುಹಿಸಿದ್ದರು….

Read More

ಡ್ರ್ಯಾಗನ್ ಹಣ್ಣಿನ ಆರೋಗ್ಯ ಪ್ರಯೋಜನಗಳು..!

ಡ್ರ್ಯಾಗನ್ ಹಣ್ಣನ್ನ ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಆರೋಗ್ಯವಾಗಿರಲು ಬಯಸುವವರು ನಿಯಮಿತವಾಗಿ ಈ ಹಣ್ಣನ್ನ ತಿನ್ನಬೇಕು. ಡ್ರ್ಯಾಗನ್ ಹಣ್ಣು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ದೊಡ್ಡ ಪ್ರಮಾಣದ ಫೈಬರ್ ಜೊತೆಗೆ ಇದು ಫೈಟೊನ್ಯೂಟ್ರಿಯೆಂಟ್‌’ಗಳು, ವಿಟಮಿನ್‌’ಗಳು, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಕ್ಯಾರೋಟಿನ್ ಮತ್ತು ಪ್ರೋಟೀನ್‌’ಗಳಲ್ಲಿ ಸಮೃದ್ಧವಾಗಿದೆ. ಈ ಡ್ರ್ಯಾಗನ್ ಹಣ್ಣು ಮಧುಮೇಹ, ಕ್ಯಾನ್ಸರ್, ಡೆಂಗ್ಯೂ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಹಾಗಾದ್ರೆ, ಈ ಡ್ರ್ಯಾಗನ್ ಫ್ರೂಟ್ ಮಧುಮೇಹವನ್ನ ಹೇಗೆ ನಿಯಂತ್ರಿಸುತ್ತದೆ ಎಂಬುದನ್ನ ತಿಳಿಯೋಣ. ಡ್ರ್ಯಾಗನ್‌ ಫ್ರೂಟ್ ಪೋಷಕಾಂಶಗಳ…

Read More

ರಾಜ್ಯದಲ್ಲಿ ಹಕ್ಕಿಜ್ವರ ಭೀತಿ : ಕೋಳಿಮಾಂಸದ ಬೆಲೆ 200 ರೂ.ಗೆ ಇಳಿಕೆ

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿಂದ ಕೆಲವು ಕಡೆಗಳಲ್ಲಿ ಜನರು ಚಿಕನ್‌ ತಿನ್ನಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಚಿಕನ್‌ ಬೆಲೆ ಇಳಿಕೆ ಆಗಿದ್ದು, ಒಂದಷ್ಟು ಜನ ಯಾವುದಕ್ಕೂ ಹೆದರದೆ ಖರೀದಿಗೆ ಮುಗಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 70 ರೂ. ಚಿಕನ್‌ ರೇಟ್‌ ಕಡಿಮೆಯಾಗಿದ್ದು, ಮಟನ್‌ ಗೆ ಫುಲ್‌ ಡಿಮ್ಯಾಂಡ್‌ ಬಂದಿದೆ. 270 ರೂ. ಇದ್ದ ಚಿಕನ್‌ ದರ ಇದೀಗ 200 ರೂ. ತಲುಪಿದೆ. ಗ್ರಾಮಾಂತರದಲ್ಲಿ ಬೆಲೆ ಪ್ರತಿ ಕೇಜಿಗೆ 240 ರೂ. ರಿಂದ180ರೂ.ಗೆ ಇಳಿಕೆ ಕಂಡಿದೆ.

Read More

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ಗೆ ಆಟೋ ರಿಕ್ಷಾ ಡಿಕ್ಕಿ; ಇಬ್ಬರು ಸಾವು

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕ…

Read More