ಬೆಳ್ತಂಗಡಿ: ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಕೂಗು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ…

Read More

ಮಂಗಳೂರು: ಮಾ.7-9ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ಇಂಡಿಯಾ ಪ್ಯಾಡಲ್ ಫೆಸ್ಟಿವಲ್

ಮಂಗಳೂರು: ದೇಶದ ಏಕೈಕ ಅಂತರರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡಲ್ ಕಾರ್ಯಕ್ರಮವಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್, ಮಾರ್ಚ್ 7 ರಿಂದ 9 ರವರೆಗೆ ನಗರದ ಸಸಿಹಿತ್ಲು ಬೀಚ್‌ನಲ್ಲಿ ನಡೆಯಲಿದೆ. ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಈ ಉತ್ಸವದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟುಗಳು, ಪ್ರಾದೇಶಿಕ ಸ್ಪರ್ಧಿಗಳು ಮತ್ತು ಜಲ ಕ್ರೀಡಾ ಉತ್ಸಾಹಿಗಳು ಭಾಗವಹಿಸಲಿದ್ದಾರೆ. ಪ್ಯಾಡಲ್ ಫೆಸ್ಟಿವಲ್ 2025 ಗಾಗಿ ನೋಂದಣಿಗಳು ಆರಂಭವಾಗಿದ್ದು, ವಿವಿಧ ವಿಭಾಗಗಳಲ್ಲಿ ಭಾಗವಹಿಸುವವರನ್ನು ಆಹ್ವಾನಿಸಲಾಗಿದೆ. ನೋಂದಣಿ ಮತ್ತು ಈವೆಂಟ್ ವಿವರಗಳಿಗಾಗಿ https://indiapaddlefestival.com/ipf2025-registration/ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Read More

ಪ್ರಧಾನಿ ಮೋದಿ-ಎಲೋನ್ ಮಸ್ಕ್ ಭೇಟಿ: ಭಾರತದಲ್ಲಿ ನೇಮಕಾತಿ ಪ್ರಾರಂಭಿಸಿದ ಟೆಸ್ಲಾ

ನವದೆಹಲಿ:ಪ್ರಧಾನಿ ಮೋದಿ ಮತ್ತು ಎಲೋನ್ ಮಸ್ಕ್ ನಡುವಿನ ಸಭೆಯ ನಂತರ ಟೆಸ್ಲಾ ಇಂಕ್ ಭಾರತದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕಂಪನಿಯು ಇತ್ತೀಚೆಗೆ ತನ್ನ ಲಿಂಕ್ಡ್ಇನ್ ಪುಟದಲ್ಲಿ ಅಪ್ಲೋಡ್ ಮಾಡಿದ ಉದ್ಯೋಗ ಪೋಸ್ಟಿಂಗ್ಗಳ ಪ್ರಕಾರ, ಮಸ್ಕ್ ಒಡೆತನದ ಕಂಪನಿಯು ಗ್ರಾಹಕ-ಮುಖ ಮತ್ತು ಬ್ಯಾಕ್-ಎಂಡ್ ಸ್ಥಾನಗಳು ಸೇರಿದಂತೆ 13 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹುಡುಕುತ್ತಿದೆ ಎಂದು ಘೋಷಿಸಿದೆ. ಸರ್ವೀಸ್ ಟೆಕ್ನಿಷಿಯನ್ ಮತ್ತು ವಿವಿಧ ಸಲಹಾ ಹುದ್ದೆಗಳು ಸೇರಿದಂತೆ ಐದು ಹುದ್ದೆಗಳು ಮುಂಬೈ ಮತ್ತು ದೆಹಲಿ ಎರಡರಲ್ಲೂ ಲಭ್ಯವಿದ್ದರೆ, ಉಳಿದ ಹುದ್ದೆಗಳು –…

Read More

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ- ಓರ್ವ ಸವಾರ ಮೃತ್ಯು

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ….

Read More

ಬೆಳ್ತಂಗಡಿ: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ..!

ಬೆಳ್ತಂಗಡಿ: ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವ‌ರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು

Read More

ವಿಜಯನಗರದಲ್ಲಿ ನಡೆದ ಖೇಲೋ ಇಂಡಿಯಾ ವುಮೆನ್ಸ್ ವುಶು ಲೀಗ್ ನಲ್ಲಿ ಮಂಗಳೂರಿನ ಸಮೃದ್ಧಿ ಕುಲಾಲ್ ಗೆ ಕಂಚಿನ ಪದಕ

ಮಂಗಳೂರು : ವಿಜಯನಗರ ಜಿಲ್ಲೆ ಹೊಸಪೇಟೆ ವುಶು ಅಸೋಷಿಯೇಷನ್ ಇದರ ವತಿಯಿಂದ ಇತ್ತೀಚೆಗೆ ನಡೆದ ಖೇಲೋ ಇಂಡಿಯಾ ವುಮೆನ್ಸ್ ವುಶು ಲೀಗ್ ನಲ್ಲಿ ಸುರತ್ಕಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಇದರ ವಿದ್ಯಾರ್ಥಿನಿ ಸಮೃದ್ಧಿ ಎಂ ಕುಲಾಲ್ ಅವರು ಕಂಚಿನ ಪದಕ ಪಡೆದಿದ್ದಾರೆ. ಇವರು ಆರನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಮರೋಳಿ ನಿವಾಸಿ ಮನೋಜ್ ಕುಮಾರ್ ಮತ್ತು ಗೀತಾ ಮನೋಜ್ ದಂಪತಿಯ ಸುಪುತ್ರಿ.

Read More

ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಮೃತ್ಯು..!

ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ. ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Read More

ಮೂಡುಬಿದಿರೆ: ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿ ಮನೆಯಲ್ಲಿದ್ದ ಬಾಲಕಿಯ ಪ್ರಜ್ಞೆ ತಪ್ಪಿಸಿ ಸುಮಾರು 30 ಪವನ್‌ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಿನ್ನೆ ಮೂಡುಬಿದಿರೆ ಸಮೀಪ ಸಂಭವಿಸಿದೆ. ಮೂಡುಬಿದಿರೆ ತಾಲೂಕಿನ ಅಳಿಯೂರಿನ ನೇಲಡೆಯ ಪ್ರಶಾಂತ್ ಜೈನ್ ಎಂಬವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ. ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಅವರ ಪತ್ನಿ ಶಿರ್ತಾಡಿಗೆ ಹೋಗಿದ್ದರು. ಅವರ ಪುತ್ರಿಯ…

Read More

ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕಾನೂನುಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ ಎಂದು ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಬಸವರಾಜು ಸಲ್ಲಿಸಿಸದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನಗಂಟಿ ಅವರ ಪೀಠ ಈ ಆದೇಶ ನೀಡಿದೆ. ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ…

Read More

ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್, 3 ವರ್ಷದ ಬಾಲಕ ಮೃತ್ಯು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಗನ್‌ ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ ಲೋಡೆಡ್ ಆಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ ಇಲ್ಲೇ…

Read More