ವಿಟ್ಲ: ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣ- ಕೇರಳದ ಪೊಲೀಸ್ ಅಧಿಕಾರಿ ಅರೆಸ್ಟ್

ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ರೂಪಾಯಿ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎಎಸ್ಐ ಸೇರಿದಂತೆ ಮತ್ತೆ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ. ಕೇರಳದ ಕೊಡಂಗಲ್ಲೂರು ಪೊಲೀಸ್ ಠಾಣೆಯ ಎಎಸ್ಐ ಶಫೀರ್‌ ಬಾಬು (48), ಬಂಟ್ವಾಳ ಪರ್ಲಿಯಾ ನಿವಾಸಿ ಮೊಹಮ್ಮದ್‌ ಇಕ್ಬಾಲ್‌(38), ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್‌ ಅನ್ಸಾರ್‌ (27), ಬಂಟ್ವಾಳ ನಾರ್ಶ ನಿವಾಸಿ ಸಿರಾಜುದ್ದೀನ್‌ (37) ಬಂಧಿತ ಆರೋಪಿಗಳು. ಪ್ರಕರಣದಲ್ಲಿ ತನಿಖಾ ತಂಡವು…

Read More

ಕಾರ್ಕಳ: ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವು

ಕಾರ್ಕಳ : ಕಫದ ತೊಂದರೆ ಉಲ್ಬಣಗೊಂಡು ಮೂರು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಫೆ.14ರಂದು ಕಾರ್ಕಳದಲ್ಲಿ ನಡೆದಿದೆ. ನಿಂಜೂರು ಗ್ರಾಮದ ಪೂರ್ಣಿಮಾ ಎಂಬವರ 3 ತಿಂಗಳ ಗಂಡು ಮಗು ಧನ್ವಿತ್ ಮೃತಪಟ್ಟಿದೆ. ಕಫದ ತೊಂದರೆ ಉಲ್ಬಣಗೊಂಡು ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

Read More

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಹಾ ಕುಂಭಮೇಳ ಹೋಗುವವರ ದಟ್ಟಣೆ : ಕಾಲ್ತುಳಿತಕ್ಕೆ 11 ಮಹಿಳೆಯರು, 4 ಮಕ್ಕಳು ಸೇರಿ 18 ಮಂದಿ ಸಾವು

ನವದೆಹಲಿ: ಮಹಾಕುಂಭ ಮೇಳಕ್ಕೆ ತೆರಳಲು ಎರಡು ರೈಲುಗಳು ವಿಳಂಬವಾಗಿದ್ದರಿಂದ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಾಧಿಕಾರಿ ಈ ಸಾವುಗಳನ್ನು ದೃಢಪಡಿಸಿದ್ದಾರೆ. ಘಟನೆಯಲ್ಲಿ 10 ಮಹಿಳೆಯರು, ಮೂವರು ಮಕ್ಕಳು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೇಡಿ ಹಾರ್ಡಿಂಗ್ ಆಸ್ಪತ್ರೆಯಲ್ಲಿ ಇನ್ನೂ ಮೂರು ಸಾವುಗಳು…

Read More

ಹಕ್ಕಿ ಜ್ವರ ಭೀತಿ: ಕೋಳಿ ಮತ್ತು ಮೊಟ್ಟೆ ಸೇವಿಸುವುದು ಸುರಕ್ಷಿತವೇ |

ನವದೆಹಲಿ:ವಿವಿಧ ರಾಜ್ಯಗಳು ಮುಂಜಾಗ್ರತಾ ಕ್ರಮವಾಗಿ 7,000 ಕ್ಕೂ ಹೆಚ್ಚು ಕೋಳಿ ಮತ್ತು 2,000 ಮೊಟ್ಟೆಗಳನ್ನು ನಾಶಪಡಿಸಿದ್ದರೂ, ಭಾರತದಾದ್ಯಂತ ಎಚ್ 5 ಎನ್ 1 ಹಕ್ಕಿ ಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಕೋಳಿಗಳ ಹಠಾತ್ ಸಾವುಗಳನ್ನು ವರದಿ ಮಾಡಿವೆ ಮತ್ತು ಆರೋಗ್ಯ ಅಧಿಕಾರಿಗಳು ಇದಕ್ಕೆ ಕಾರಣವನ್ನು ಹಕ್ಕಿ ಜ್ವರ ಎಂದು ಗುರುತಿಸಿದ್ದಾರೆ. ಅಲ್ಲದೆ, ಮಧ್ಯಪ್ರದೇಶದ ಚಿಂದ್ವಾರದಲ್ಲಿ, ಅಧಿಕಾರಿಗಳು ಎರಡು ಅಂಗಡಿಗಳು ಮತ್ತು ಒಂದು ಮನೆಯಲ್ಲಿ ಸೋಂಕುಗಳನ್ನು ದೃಢಪಡಿಸಿದರು, ಇದು ಕೋಳಿಗಳು ಮತ್ತು…

Read More

ಬಂಟ್ವಾಳ: ಪ್ರತಿನಿತ್ಯ ಕ್ಷುಲ್ಲಕ ವಿಚಾರಕ್ಕೆ ಜಗಳ; ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರಿಂದ ಕ್ಲಾಸ್

ಬಂಟ್ವಾಳ: ಶಾಲೆಯಲ್ಲಿ ಪ್ರತಿದಿನವೂ ಕ್ಷುಲ್ಲಕವಿಚಾರದಲ್ಲಿ ಜಗಳವಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರೇ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಲವತ್ತಾರು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗೆ ಮೂವರು ಶಿಕ್ಷಕರನ್ನು ಶಿಕ್ಷಣ ಇಲಾಖೆ ನಿಯೋಜಿಸಿತ್ತು, ಮುಖ್ಯ ಶಿಕ್ಷಕಿ ಅನಿತಾ, ಲವಿನಾ ಮತ್ತು ಸುಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಈ ಪೈಕಿ ಮುಖ್ಯ ಶಿಕ್ಷಕಿ ಅನಿತಾ ಮತ್ತು ಸುಮಯ್ಯ ನಡುವೆ ಮನಸ್ತಾಪ ಇತ್ತು ಎಂದು…

Read More

ಕಾರ್ಕಳ: ಚಾರ್ಜ್‌ಗಿಟ್ಟ ಮೊಬೈಲ್ ಫೋನ್ ಸ್ಪೋಟ..!!

ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಕಾರ್ಕಳದ ತೆಳ್ಳಾರು ರಸ್ತೆಯ‌ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್‌ ಕುಮಾರ್‌ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ. ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಮನೆಯ ಕೋಣೆಗಳಿಗೆಲ್ಲಾ ಬೆಂಕಿ ಆವರಿಸಿ ಸುಮಾರು 7ಲಕ್ಷ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಎರಡೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿ ಎಸಿ ಆನ್ ಇದ್ದ ಕಾರಣ ಬೆಂಕಿಯ ಕಿಡಿ ಮನೆ ತುಂಬೆಲ್ಲ…

Read More

ಬಂಟ್ವಾಳ: ಚರಂಡಿಗೆ ಬಿದ್ದ ಆಟೋ ರಿಕ್ಷಾ- ಚಾಲಕ ಸಾವು..!!

ಬಂಟ್ವಾಳ : ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಪ್ರಯಾಣಿಕರಾಗಿದ್ದ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟವರು. ಮಹಾಬಲ ಪೂಜಾರಿಯವರು ತಮ್ಮ ಸಂಬಂಧಿಗಳ ಮಕ್ಕಳನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಗರಡಿ ಜಾತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ವಾಪಸ್ ಮನೆಗೆ ಬರುವ ವೇಳೆ ಚಾಲಕ ಮಹಾಬಲ ಪೂಜಾರಿಯವರ ನಿಯಂತ್ರಣ ಕಳೆದಕೊಂಡ ಆಟೋರಿಕ್ಷಾ…

Read More

ಬಂಟ್ವಾಳ : ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಮಣ್ಣು ಅಗೆತ – ದೂರು ದಾಖಲು

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪಥ ರಸ್ತೆಯ ಕಾಮಗಾರಿ ನಡೆಸುತ್ತಿರುವ ಕೆ.ಎನ್.ಆರ್.ಸಿ.ಕಂಪೆನಿಯ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿದೆ. ಕಂಪೆನಿಯ ಅಧಿಕಾರಿಗಳಾದ ಪಿ.ಆರ್.ಒ.ನಂದಕುಮಾರ್ ಮತ್ತು ಸೈಟ್ ಇಂಜಿನಿಯರ್ ನಿತಿನ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ಮೆಲ್ಕಾರ್ ಹೆದ್ದಾರಿ ಬದಿಯಲ್ಲಿ ಬಾಡಿಗೆಗೆ ಇದ್ದ ಹಳೆಯ ಸಂಚಾರ ಪೊಲೀಸ್…

Read More

ಮಂಗಳೂರು: ಫೆಬ್ರವರಿ 17ರಂದು ವಾಹನಗಳ ಸಂಚಾರ ಗಣತಿ

ಮಂಗಳೂರು,: ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ. 2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 17ರಂದು ಬೆಳಗ್ಗೆ 6ರಿಂದ ಫೆಬ್ರವರಿ 24ರ ಬೆಳಗ್ಗೆ 6ರವರೆಗೆ ಸತತವಾಗಿ 7 ದಿನಗಳ ಕಾಲ ನಡೆಸಲಾಗುವುದು. ದ.ಕ. ಜಿಲ್ಲೆಯಲ್ಲಿ ಈ ಗಣತಿಗೆ ಸುಮಾರು 126 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ವಾಹನ ಸಂಚಾರದ ಬೆಳವಣಿಗೆಯ…

Read More

ಫೆ. 17ರಂದು ಉಡುಪಿಯಿಂದ ಪ್ರಯಾಗರಾಜ್‌ಗೆ ವಿಶೇಷ ರೈಲು ವ್ಯವಸ್ಥೆ…!!

ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಕರಾವಳಿ ಹಾಗೂ ಮಲೆನಾಡಿನ ಭಾಗದ ಭಕ್ತರಿಗೆ ಅನುಕೂಲವಾಗುವಂತೆ ಕೊಂಕಣ ರೈಲ್ವೆಯು ವಿವಿಧ ಪ್ರಾದೇಶಿಕ ರೈಲ್ವೆಯ ಸಹಯೋಗದೊಂದಿಗೆ ಫೆ.17ರಂದು ಉಡುಪಿಯಿಂದ ನೇರವಾಗಿ ಪ್ರಯಾಗ್‌ರಾಜ್‌ಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ. ಮಹಾಕುಂಭ ಸ್ಪೆಷಲ್ ರೈಲು (ರೈಲು ನಂ.01192) ಫೆ.17ರ ಅಪರಾಹ್ನ 12:30ಕ್ಕೆ ಉಡುಪಿಯಿಂದ ಹೊರಟು ಕುಂದಾಪುರ, ಕಾರವಾರ, ಮಡಗಾಂವ್, ರತ್ನಗಿರಿ, ರೋಹಾ, ಕಲ್ಯಾಣ್, ನಾಸಿಕ್ ಮಾರ್ಗವಾಗಿ ತೆರಳಲಿದ್ದು, ಫೆ.19ರಂದು ಬೆಳಗ್ಗೆ 6:30ಕ್ಕೆ ಪ್ರಯಾಗ್‌ರಾಜ್ ಜಂಕ್ಷನ್ ತಲುಪಲಿದೆ. ಅಲ್ಲಿ ಜನರನ್ನು…

Read More