ತುಳುನಾಡಿನ ದೈವಗಳ ಮೊರೆ ಹೋದ ತಮಿಳು ನಟ ವಿಶಾಲ್-ಹರಿಪಾದೆ ಜಾರಂದಾಯ ನೇಮ ವೀಕ್ಷಣೆ

ಮುಲ್ಕಿ: ಇತ್ತೀಚೆಗೆ ತೆರೆಕಂಡ ತಮಿಳು ಚಿತ್ರ ಮದಗಜರಾಜ ಚಿತ್ರದ ಪ್ರಚಾರದ ವೇಳೆ ತಮ್ಮ ಅನಾರೋಗ್ಯದಿಂದ ಸುದ್ದಿಯಾಗಿದ್ದ ತಮಿಳಿನಿ ಖ್ಯಾತ ನಟ ವಿಶಾಲ್ ದೈವನ ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೈವದ ಆಶೀರ್ವಾದ ಪಡೆದರು. ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು ಅನಾರೋಗ್ಯದಿಂದ ವಿಶಾಲ್ ಸುದ್ದಿಯಾಗಿದ್ದರು, ಮದಗಜರಾಜ ಸಿನೆಮಾ ಪ್ರಚಾರದ ವೇಳೆ ನಟನ ಸ್ಥಿತಿ ನೋಡಿ ಅಭಿಮಾನಿಗಳು…

Read More

ಬಂಟ್ವಾಳ: ಡ್ರೈವಿಂಗ್ ವೇಳೆ ಮೂರ್ಛೆ ಹೋದ ಲಾರಿ ಚಾಲಕ- ಡಿವೈಡರ್ ಏರಿ ನಿಂತ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿರುವ ಘಟನೆ ಇಂದು ಬೆಳಗ್ಗೆ 7.45ರ ಸುಮಾರಿಗೆ ನಡೆದಿದೆ. ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು ಹೋಗಿದ್ದಾರೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.‌ ಲಾರಿಯು ಬೆಂಗಳೂರು ಭಾಗದಿಂದ ಮಂಗಳೂರು ಭಾಗಕ್ಕೆ ಚಲಿಸುತ್ತಿತ್ತು‌ ಎನ್ನಲಾಗಿದೆ.

Read More

ಪಡುಬಿದ್ರಿ: ಬಸ್ ಚಾಲಕನಿಗೆ ಹಠಾತ್ ಎದೆನೋವು- ಇಳಿಜಾರಿಗಿಳಿದ ಬಸ್..!

ಪಡುಬಿದ್ರಿ : ಖಾಸಗಿ ವೇಗದೂತ ಬಸ್ಸಿನ ಚಾಲಕನಿಗೆ ಅಪಸ್ಮಾರ ಸಂಭವಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಧರಗೆ ಚಲಿಸಿದ ಘಟನೆ ಬುಧವಾರ ಬೆಳಿಗ್ಗೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿನ ಚಾಲಕ ಶಂಭು ಮುಲ್ಕಿಯವರು ಎರ್ಮಳು ತೆಂಕ ಸಮೀಪಿಸುತ್ತಿದ್ದಂತೆ ಅವರಿಗೆ ಅಪಸ್ಮಾರ ಸಂಭವಿಸಿದೆ. ಇದೇ ಸಂದರ್ಭ 24 ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಧರೆಗೆ ಚಲಿಸಿದೆ. ಈ ಸಂದರ್ಭ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿ, ವಿದ್ಯುತ್…

Read More

ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಅಯೋದ್ಯ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

Read More

ಮಗುವಿನೊಂದಿಗೆ ತಾಯಿ ನಾಪತ್ತೆ..! ಪ್ರಕರಣ ದಾಖಲು

ಮಂಗಳೂರು: ಕುಂಜತ್ತಬೈಲು ಬಸವನಗರದ ಬಾಡಿಗೆ ಮನೆಯಲ್ಲಿದ್ದ ಮಹಾದೇವಿ (ಕರಿಯಮ್ಮ – 25) ಮತ್ತು ಮಗಳು ಕಾವೇರಿ (4) ಮನೆಯಿಂದ ನಾಪತ್ತೆಯಾಗಿದ್ದಾರೆ.ಮಹಾದೇವಿಗೆ 7 ವರ್ಷದ ಹಿಂದೆ ಬಾಗಲಕೋಟೆ ಜಿಲ್ಲೆಯ ಕೆರೂರಿನ ಹಾಲಿಗೇರಿ ನಿವಾಸಿ ವೆಂಕಪ್ಪನೊಂದಿಗೆ ವಿವಾಹವಾಗಿತ್ತು. 2 ವರ್ಷದ ಹಿಂದೆ ಪತಿ-ಪತ್ನಿ ಮಧ್ಯೆ ವಿರಸ ತಲೆದೋರಿದ ಕಾರಣ ಕುಳಾಯಿಯಲ್ಲಿರುವ ಅಣ್ಣನ ಮನೆಗೆ ಬಂದು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.ಫೆ. 2ರಂದು ರಾತ್ರಿ 10 ಗಂಟೆಗೆ ಅಲ್ಲಿ ಅತ್ತಿಗೆಯೊಂದಿಗೆ ಜಗಳವಾಗಿತ್ತು. ಬಳಿಕ ಆಕೆಯನ್ನು ಕುಂಜತ್ತಬೈಲಿನ ಬಸವ ನಗರದಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಕರೆದುಕೊಂಡು…

Read More

ಬಂಟ್ವಾಳ: ಅಡುಗೆ ಅನಿಲ ಸೋರಿಕೆ -ಸೊತ್ತುಗಳು ಸುಟ್ಟು ಭಸ್ಮ, ಓರ್ವ ಗಾಯ..!

ಬಂಟ್ವಾಳ: ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್‌ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್ ನಗರ ನಿವಾಸಿ ಗಣೇಶ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂದಿಸಲು ಹೋದ ಗಣೇಶ್ ಅವರ ಕೈ ಗೆ ಗಾಯವಾಗಿದೆ. ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.ಮನೆಯ ಗ್ಯಾಸ ಗೀಸರ್ ಫ್ರಿಡ್ಜ್ ಸುಟ್ಟು ಭಸ್ಮವಾಗಿದೆ. ಸುಮಾರು 75 ಸಾವಿರ ರೂ .ನಷ್ಟ ಸಂಭವಿಸಿದೆ…

Read More

ಮಂಗಳೂರು : ಕಾಂಪೌಂಡ್ ಗೋಡೆಗೆ ಗುದ್ದಿದ ಕಾರು, ಇಬ್ಬರಿಗೆ ಗಾಯ

ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಗುದ್ದಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಪಂಚಾಯತ್ ಕಚೇರಿ ಬಳಿಯ ಪಾಡ್ಯರ್ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕೊಂಪದವು ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಗುದ್ದಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಮೂಡಬಿದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Read More

ಬಂಟ್ವಾಳ: ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ..!

ಬಂಟ್ವಾಳ: ಸಮೀಪ ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಹಮೀದ್ ಹಾಗೂ ಸರ್ಪುದ್ದೀನ್ ಎಂಬವರ ಮನೆಗೂ ಬೆಂಕಿ ತಗುಲಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಈ ಘಟನೆ ನಡೆದಿದ್ದು ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹಾಗೂ ಸಾರ್ವಜನಿಕರು ಹರಸಾಹಸ ಪಡಬೇಕಾಯಿತು….

Read More

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರು: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಪ್ರಾಣ ಉಳಿಸಿದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಯನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶ್ಲಾಘಿಸಿದ್ದಾರೆ. ಅಸ್ಸಾಂ ಮೂಲದ 12 ವರ್ಷದ ಬಾಲಕ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿ ಎದೆಗೂಡಿಗೆ ತೆಂಗಿನ ದಿಂಡು ಹಾಗೂ ಲೋಹದ ಸರ ಸೇರಿಕೊಂಡಿತ್ತು. ವೆನ್ಲಾಕ್‌ಗೆ ಕರೆತರಲಾಗಿದ್ದ ಬಾಲಕನಿಗೆ ಕಾರ್ಡಿಯೋಥೋರಾಸಿಕ್​ ಮತ್ತು…

Read More

ಏರೋ ಇಂಡಿಯಾದಲ್ಲಿ ಮೊದಲ ಬಾರಿಗೆ US F -35 ಮತ್ತು ರಷ್ಯಾದ S-U-57 ಯುದ್ದ ವಿಮಾನಗಳು ಭಾಗಿ

ಬೆಂಗಳೂರು:ಏರೋ ಇಂಡಿಯಾದ ಮೊದಲ ದಿನವಾದ ಸೋಮವಾರ ರಷ್ಯಾದ ಸು -57 ಮತ್ತು ಅಮೆರಿಕದ ಎಫ್ -35 ಲೈಟ್ನಿಂಗ್ 2 – ವಿಶ್ವದ ಅತ್ಯಂತ ಸುಧಾರಿತ ಐದನೇ ತಲೆಮಾರಿನ ಯುದ್ಧ ವಿಮಾನಗಳು ಬೆಂಗಳೂರಿನ ಆಕಾಶಕ್ಕೆ ಹಾರಿದವು. ಅವರ ಪ್ರದರ್ಶನಗಳು ಸ್ಪಷ್ಟ ಪ್ರದರ್ಶನಕಾರರಾಗಿದ್ದವು, ಸೂರ್ಯ ಕಿರಣ್ ತಂಡದ ಸಾಂಪ್ರದಾಯಿಕ ಚಮತ್ಕಾರಿಕ ಪ್ರದರ್ಶನವನ್ನು ಸಹ ಮೀರಿಸಿದರು. ಇದು ಏರೋ ಇಂಡಿಯಾದಲ್ಲಿ ಸು -57 ನ ಚೊಚ್ಚಲ ಪಂದ್ಯವಾಗಿತ್ತು. ಲಾಕ್ಹೀಡ್ ಮಾರ್ಟಿನ್ ತಯಾರಿಸಿದ ಎಫ್ -35 ಪ್ರಮುಖ ರಕ್ಷಣಾ ಪ್ರದರ್ಶನದ ಹಿಂದಿನ ಆವೃತ್ತಿಯಲ್ಲಿ…

Read More