Headlines

ಸಿಐಎಸ್‌ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್/ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4, 2025. ವಿದ್ಯಾರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಯೋಮಿತಿ ಅಭ್ಯರ್ಥಿಗಳ ವಯಸ್ಸು 21 ರಿಂದ 27 ವರ್ಷಗಳ ನಡುವೆ ಇರಬೇಕು. ಚಾಲನಾ ಪರವಾನಗಿ ಅಭ್ಯರ್ಥಿಗಳು ಭಾರೀ ಮೋಟಾರು ವಾಹನಗಳು, ಸಾರಿಗೆ ವಾಹನಗಳು, ಲಘು ಮೋಟಾರು ವಾಹನಗಳು ಮತ್ತು ಗೇರ್ ಹೊಂದಿರುವ ಮೋಟಾರ್‌ಸೈಕಲ್‌ಗಳಿಗೆ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು….

Read More

ಪುತ್ತೂರು: ರಾತ್ರೋರಾತ್ರಿ ಬಿಜೆಪಿ ಮುಖಂಡನ ಮನೆ ತೆರವು – ಪೊಲೀಸರ ಜತೆ ಬಿಜೆಪಿ ಮುಖಂಡರ ಮಾತಿನ ಚಕಮಕಿ

ಪುತ್ತೂರು : ಮುಖ್ಯ ರಸ್ತೆಗೆ ಬದಿಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು  ವಾಸಿಸುತ್ತಿದ್ದ  ಮನೆಯನ್ನು ಮಂಗಳವಾರ ತಡ ರಾತ್ರಿ ತೆರವುಗೊಳಿಸಿದ ವಿಚಾರವಾಗಿ ಬುಧವಾರ ಬೆಳಿಗ್ಗೆ ಪೊಲೀಸ್‍  ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸುಮಾರು 2.30ರಿಂದ 3 ಗಂಟೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಮಂಗಳೂರಿನ ಜಾತ್ರೆಗೆ ತೆರಳಿದ್ದ ವೇಳೆ ಹಿಂಭಾಗದಿಂದ ಜೆಸಿಬಿ ಮೂಲಕ ಮನೆಯನ್ನು ದೂಡಿ ಹಾಕಲಾಗಿದೆ….

Read More

ಮಹಾ ಕುಂಭ ಮೇಳ: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ

ಲಖನೌ: ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಇಂದು ಬುಧವಾರ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕುಂಭ ಮೇಳಕ್ಕೆ ಆಗಮಿಸಿದ್ದಾರೆ. ಅವರು ಪ್ರಯಾಗ್‌ರಜ್‌ಗೆ ಆಗಮಿಸಿದ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪ್ರಧಾನಿಯನ್ನು ಸ್ವಾಗತಿಸಿದರು. ಅಲ್ಲಿಂದ ಮುಂದೆ ಅವರು ಏರಿಯಲ್ ಘಾಟ್‌ನಲ್ಲಿ ದೋಣಿಯ ಮೂಲಕ ತ್ರಿವೇಣಿ ಸಂಗಮಕ್ಕೆ ತೆರಳಿ ಅಮೃತ ಸ್ನಾನವನ್ನು ಕೈಗೊಂಡಿದ್ದಾರೆ. ಪುಣ್ಯ ಸ್ನಾನದ ಸಂದರ್ಭದಲ್ಲಿ ಕೈಯಲ್ಲಿ ರುದ್ರಕ್ಷಿ ಮಾಲೆಯನ್ನು ಹಿಡಿದು, ಮಂತ್ರ ಉಚ್ಛಾರಣೆ ಮಾಡುತ್ತಾ ತ್ರಿವೇಣಿಯಲ್ಲಿ ಮೋದಿ ಪುಣ್ಯ ಸ್ನಾನ…

Read More

ಪ್ರಸಾದ್ ಕುಲಾಲ್ ಸಿದ್ದಕಟ್ಟೆ ಇವರಿಂದ 1008 ಸೂರ್ಯನಮಸ್ಕಾರ

ಉಪ್ಪಿನಂಗಡಿ ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ spyss ಸಮಿತಿಯಿಂದ 108 ಸೂರ್ಯ ನಮಸ್ಕಾರ ಹಮಿಕೊಂಡಿದ್ದು ಸುಮಾರು 90 ಯೋಗ ಬಂಧುಗಳು ಜೋಡಿಸಿಕೊಂಡಿದ್ದರು. ಶ್ರೀಯುತ ಪ್ರಸಾದ್ ಕುಲಾಲ್ ಸಿದ್ದಕಟ್ಟೆ ಮತ್ತು ಶ್ರೀ ಆನಂದ ಕುಂಟಿನಿ ರವರು ಸೇರಿಕೊಂಡು ಒಬ್ಬಬ್ಬರು 1008 ಸೂರ್ಯ ನಮಸ್ಕಾರಗಳನ್ನು ಅತ್ಯಂತ ಶೃದ್ದೆಯಿಂದ ಸಮಾರ್ಪಿಸಿದರು.

Read More

ದೆಹಲಿ ವಿಧಾನಸಭೆ ಚುನಾವಣೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಮತದಾನ 

ನವದೆಹಲಿ : ಇಂದು ದೆಹಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಷ್ಟರಪತಿ ದ್ರೌಪದಿ ಮುರ್ಮು ಅವರು ಇಂದು ಮತದಾನ ಮಾಡಿದ್ದಾರೆ. ಇಂದು ದೆಹಲಿಯ ರಾಷ್ಟ್ರಪತಿ ಎಸ್ಟೇಟ್‌ನ ಡಾ. ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರಪತಿ ದ್ರೌಪದಿ ಮತದಾನ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮತ ಚಲಾಯಿಸಿದ ನಂತರ, ರಾಷ್ಟ್ರಪತಿ ಎಸ್ಟೇಟ್‌ನ ಡಾ. ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿ ತಮ್ಮ ಶಾಯಿ ಹಚ್ಚಿದ ಬೆರಳನ್ನು ತೋರಿಸಿದ್ದಾರೆ. Delhi: President Droupadi Murmu shows her inked finger…

Read More

ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿ – ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು

ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.ಶಿರ್ವದಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಗುಚಿ‌ಬಿದ್ದ ಟಿಪ್ಪರ್ ನಿಂದ ಅದರ ಚಾಲಕ ಹೊರಕ್ಕೆ ಹಾರಿದ್ದಾರೆ. ದುರಾದೃಷ್ಟವಶಾತ್ ಟಿಪ್ಪರ್‌ನ ಅಡಿಗೆ ಬಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ (55) ಎಂದು ಗುರುತಿಸಲಾಗಿದೆ. ಅತಿ…

Read More

ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!

ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ. ಬಂಟ್ವಾಳ ‌ತಾಲೂಕಿನ‌ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದೆ‌. ಅವರ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಖಾಸಗಿ ಆಸ್ಪತ್ರೆಗೆ ಕೊಂಡ್ಯೋಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ…

Read More

10 ವರ್ಷಗಳಲ್ಲಿ 25 ಕೋಟಿ ಜನರನ್ನ ಬಡತನದಿಂದ ಮೇಲೆತ್ತಲಾಗಿದೆ’ : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಮಾತು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಫೆಬ್ರವರಿ 04) ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಈ ವೇಳೆ ನಮ್ಮ 10 ವರ್ಷದ ಆಡಳಿತದಲ್ಲಿ 25 ಕೋಟಿ ಜನಸಂಖ್ಯೆಯನ್ನ ಬಡತನದಿಂದ ಮೇಲೆತ್ತಲಾಗಿದೆ ಎಂದು ಮಾಹಿತಿ ನೀಡಿದರು. ಜನರಿಗೆ ನಿಜವಾದ ಅಭಿವೃದ್ಧಿಯನ್ನು ಒದಗಿಸಿದೆ. ಬಡವರಿಗೆ 4 ಕೋಟಿ ಮನೆಗಳನ್ನು ನೀಡಲಾಗಿದೆ. ಆದ್ರೆ, ಕೆಲವರು ಗುಡಿಸಲಿನಲ್ಲಿ ಫೋಟೋ ಸೆಷನ್’ಗಳನ್ನು ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿಯನ್ನ ತಿವಿದರು. ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ…

Read More

ಕಟ್ಟಡ ಧ್ವಂಸ ಆರೋಪ : ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ಧ ದೂರು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಉಜಿರೆ ನಿವಾಸಿ ದಿ| ಜಯಶ್ರೀ ಹೊಳ್ಳ ಅವರ ಪುತ್ರ ವಿಜಯ ರಾಘವೇಂದ್ರ ದೂರು ನೀಡಿದವರು. ಇವರ ಅಜ್ಜ ವಿಷ್ಣಯ್ಯ ಹೊಳ್ಳ ಎಂಬವರಿಗೆ ದೇಗುಲದಿಂದ ಬಾಡಿಗೆಗೆ ನೀಡಿದ ಸ್ಥಳದಲ್ಲಿ ವಿಷ್ಣಯ್ಯ…

Read More

ನಾಳೆ (ಫೆ. 5) ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 5ರಂದು ಭೇಟಿ ನೀಡಲಿದ್ದಾರೆ. ಮಾಘ ಮಾಸದ ಅಷ್ಟಮಿಯಂದು ಅವರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಸ್ನಾನದ ನಂತರ ಸಂಗಮದಲ್ಲಿ ಗಂಗೆಯನ್ನು ಪೂಜಿಸಲಿದ್ದಾರೆ. ಪ್ರಧಾನಿ ನಾಳೆ ಬೆಳಗ್ಗೆ 10 ಗಂಟೆಗೆ ಮಹಾಕುಂಭವನ್ನು ತಲುಪಲಿದ್ದಾರೆ. ಅವರು ಅರೈಲ್ ಘಾಟ್ ನಿಂದ ದೋಣಿ ಮೂಲಕ ಸಂಗಮ್ ಗೆ ಹೋಗಲಿದ್ದಾರೆ. ಈ ಸಮಯದಲ್ಲಿ, ನಾವು ಸ್ನಾನ ಮಾಡಿ ಗಂಗೆಯನ್ನು ಪೂಜಿಸಿ ನಂತರ ಹಿಂತಿರುಗುತ್ತಾರೆ.ಮಹಾ…

Read More