Headlines

ಬ್ರೇಕಪ್ ಗೆ ಒಪ್ಪದ ಪ್ರಿಯಕರನನ್ನು ಕೊಲೆಗೈದ ಪ್ರಕರಣ: 24 ವರ್ಷದ ಗ್ರೀಷ್ಮಾಗೆ ಗಲ್ಲು ಶಿಕ್ಷೆಗೆ..!

ತಿರುವನಂತಪುರಂ: ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2022 ರಲ್ಲಿ ತನ್ನ ಬಾಯ್ ಫ್ರೆಂಡ್ ಶರೋನ್ ರಾಜ್‌ಗೆ ಮಾರಕ ಕಳೆನಾಶಕ ಬೆರೆಸಿದ ಆಯುರ್ವೇದ ಮಿಶ್ರಣವನ್ನು ಕುಡಿಸಿ ಕೊಲೆ ಮಾಡಿದ್ದಳು. ನ್ಯಾಯಮೂರ್ತಿ ಎ ಎಂ ಬಶೀರ್ ಅವರು ವಾದ ವಿವಾದ ಆಲಿಸಿದ ನಂತರ ತೀರ್ಪು ನೀಡಿ, ಇದು ಅಪರೂಪದ ಪ್ರಕರಣ, ಸರಿಯಾಗಿ ಪೂರ್ವನಿಯೋಜಿತವಾಗಿ ನಡೆಸಿದ ಅಪರಾಧ ಕೃತ್ಯವಾಗಿದೆ…

Read More

ಹಾಡ ಹಗಲೇ ಮತ್ತೊಂದು ದರೋಡೆ: ಕಾರನ್ನು ಅಡ್ಡಗಟ್ಟಿ ಹಣ ಲೂಟಿ ಮಾಡಿ ಪರಾರಿಯಾದ ಗ್ಯಾಂಗ್

ರಾಜ್ಯದಲ್ಲಿ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದರ್ ನಲ್ಲಿ ಬ್ಯಾಂಕ್ ದರೋಡೆ, ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಗಳ ಬೆನ್ನಲ್ಲೇ ಇದೀಗ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಹಾಡ ಹಗಲೇ ದರೋಡೆಕೋರರು ಕಾರನ್ನು ಅಡ್ಡಗಟ್ಟಿ ಹಣ ದರೋಡೆ ಮಾಡಿಕೊಂಡು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಉದ್ಯಮಿಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದ ಮುಸುಕುಧಾರಿ ದರೋಡೆಕೋರರ ಗ್ಯಾಂಗ್ ಕಾರನ್ನು ಅಡ್ದಗಟ್ಟಿ ಹಣ ಕಸಿದುಕೊಂಡು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದಾರೆ.

Read More

ಮಹಿಳೆಯ ಮೇಲೆ ‘ಲೈಂಗಿಕ ದೌರ್ಜನ್ಯ’ : ಮಧುಗಿರಿ `DYSP ರಾಮಚಂದ್ರಪ್ಪ’ ಮತ್ತೆ ಅರೆಸ್ಟ್.!

ತುಮಕೂರು : ದೂರು ನೀಡಲು ಬಂದಂತಹ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತುಮಕೂರು ಜಿಲ್ಲೆಯ ಮಧುಗಿರಿ ಠಾಣೆಯ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಇದೀಗ ಡಿವೈಎಸ್ಪಿ ರಾಮಚಂದ್ರಪ್ಪ ಮತ್ತೆ ಅರೆಸ್ಟ್ ಆಗಿದ್ದಾರೆ. ಮತ್ತೊರ್ವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿತ್ತು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಹಿಳೆ ಒಬ್ಬರು, ವ್ಯಕ್ತಿ ಒಬ್ಬ ಹಣ ಪಡೆದು ವಂಚಿಸಿದ್ದ…

Read More

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ- ಒಂದು ಕಾರಿನಲ್ಲಿ ಬಂದ ತಂಡ ಎರಡು ಕಾರುಗಳಲ್ಲಿ ಎಸ್ಕೇಪ್

ಮಂಗಳೂರು: ನಗರದ ತಲಪಾಡಿಯ ಕೆ.ಸಿ. ರೋಡ್‌‌ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಶುಕ್ರವಾರ ನಡೆದ ದರೋಡೆ ಪ್ರಕರಣದಲ್ಲಿ ಆರು ಮಂದಿಯಿದ್ದ ತಂಡದಲ್ಲಿ ಜೊತೆಯಾಗಿ ಬಂದವರು ದರೋಡೆ ಬಳಿಕ ಇಬ್ಭಾಗವಾಗಿ ಎರಡು ತಂಡಗಳಾಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಹಳೆಯ ಫಿಯೇಟ್ ಕಾರಿನಲ್ಲಿ ದರೋಡೆಗೆ ಬಂದವರು ಮಾರ್ಗಮಧ್ಯೆ ಶವರ್ಲೇಟ್ ಕಾರಿನಲ್ಲಿ ಗೋಣಿ ತುಂಬಾ ಇದ್ದ ಕದ್ದ ಚಿನ್ನ ಸಾಗಿಸಿದ್ದಾರೆ ಎನ್ನಲಾಗಿದೆ. ಇವರು ಮಂಗಳೂರಿನಲ್ಲಿ ಮೊಬೈಲ್ ಎಸೆದು ಬಂಟ್ವಾಳ ಕಡೆಗೆ ತೆರಳಿರುವ ಶಂಕೆಯಿದೆ. ಆದರೆ ಬಿ.ಸಿ‌.ರೋಡ್‌ನಲ್ಲಿ…

Read More

ಯುವ ಪ್ರತಿಭೆ Aashiqui ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

ಮಂಗಳೂರು : ಕಲಾಸಕ್ತರ ಸಂಭ್ರಮಕ್ಕೆ ಹೊಸ ಹಾದಿ ತೆರೆದಿರುವ ಯುವ ಪ್ರತಿಭೆ ಆಕಾಶ್ ಅಜಿತ್ ಕುಮಾರ್ (ಆಶಿಕಿ ) ಅವರು ತಮ್ಮ ಮೊದಲ ಆಲ್ಬಮ್ “Tu Hi Hai” ಮೂಲಕ ಸಂಗೀತ ಪ್ರಪಂಚದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಇವರ ಈ ಪ್ರಯತ್ನವು ಕೇವಲ ಹೊಸ ಅನುಭವವೇ ಅಲ್ಲ, ಆದರೆ ಸಂಗೀತ ಪ್ರಿಯರ ಹೃದಯವನ್ನು ಗೆಲ್ಲುವ ಮಹತ್ವಾಕಾಂಕ್ಷೆಯ ಪ್ರಯತ್ನವಾಗಿದೆ. ಈ ಆಲ್ಬಮ್‌ವು ಪ್ರೀತಿ, ಬಾಂಧವ್ಯ, ಭಾವನೆ ಮತ್ತು ಬದುಕಿನ ಬಣ್ಣವನ್ನು ಚಿತ್ರಿಸುವ ಮೂಲಕ ಶ್ರೋತೃಗಳ ಮನಸ್ಸಿನಲ್ಲಿ ಹೊಸ ದೃಷ್ಟಿಕೋನವನ್ನು ಮೂಡಿಸುವ…

Read More

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆಗೆ ಮುಂದಾದ ಸುನಿಲ್ ಕುಮಾರ್

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಗೆ ಸರ್ಕಸ್‌ ನಡೆಯುತ್ತಿರುವುದರ ಮಧ್ಯೆಯೇ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಪಕ್ಷದ ಹಿರಿಯರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಲವು ದಿನಗಳ ಹಿಂದೆಯೇ ಅವರು ಪಕ್ಷದ ಪ್ರಮುಖರು ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಲ್ಲಿ ಮೌಖಿಕವಾಗಿ ಕೋರಿಕೊಂಡಿದ್ದರು ಎನ್ನಲಾಗುತ್ತಿದೆ. ಸುನಿಲ್‌ ಅವರ ಈ ವಿಮುಖತೆಗೆ ಬಣ ರಾಜಕಾರಣ ಕಾರಣವಲ್ಲ, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಳ್ಳುವುದು ಕಷ್ಟವಾಗುತ್ತಿರುವುದರಿಂದ…

Read More

ಹಸೆಮಣೆ ಏರಬೇಕಿದ್ದವಳು ಮಸಣಕ್ಕೆ : 2 ಬೈಕ್ ಗಳ ಮಧ್ಯ ಭೀಕರ ಅಪಘಾತ

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ನರೇಗಾ ಎಂಜಿನಿಯರ್ ಆಗಿದ್ದ ಶರಣ್ಯ ಗೌಡ (25) ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದವಳಾದ ಶರಣ್ಯಾ ಗೌಡ, ಕಳೆದ ಒಂದು ವರ್ಷದಿಂದ ಕನಕಪುರ ವಿಭಾಗದಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು.ಕನಕಪುರ ತಾಲೂಕಿನ ಸಾತನೂರು ಪಂಚಾಯಿತಿಯಲ್ಲಿ ನರೇಗಾ ಇಂಜಿನಿಯರ್…

Read More

ಮಂಗಳೂರು: ಅಕ್ರಮ ವಿದೇಶಿ ಮದ್ಯ ಸಾಗಾಟ- ಓರ್ವ ವಶಕ್ಕೆ

ಮಂಗಳೂರು ನಗರದ ಟಿ.ವಿ. ರಮಣ್‌ ಪೈ ಕನ್ವೆನ್ಶನ್‌ ಸೆಂಟರ್‌ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಿದೇಶಿ ಮದ್ಯ ಸಹಿತ ಓರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ದಿನಕರ ಪಾಂಡೇಶ್ವರ ಬಂಧಿತ ಆರೋಪಿ. ಯಾವುದೇ ದಾಖಲಾತಿ ಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ತೆರಿಗೆ ಪಾವತಿಸದ 6 ಲೀ. ಮದ್ಯವನ್ನು ಆತನಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 83,140 ರೂ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ…

Read More

ಚಾಯ್ ವಾಲಾ ಡಾಲಿ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಗೆ ಚಾಲನೆ

ಮಂಗಳೂರು : ದ.ಕ. ಜಿಲ್ಲಾಡಳಿತದ ಸಹಕಾರದೊಂದಿಗೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಕ್ಕೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್‌ರ ಉಪಸ್ಥಿತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿ ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಸೆಲ್ಫಿಗೆ…

Read More

ಪೊಲೀಸರ ಸೋಗಿನಲ್ಲಿ ಕಂಟ್ರ್ಯಾಕ್ಟರ್‌ಗೆ ಹನಿಟ್ರ್ಯಾಪ್ ನಯನಾ ಸೇರಿ 4 ಜನರ ಬಂಧನ

ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಯನಾ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಯನಾ, ಅಜಯ್, ಸಂತೋಷ್, ಜಯರಾಜ್ ಬಂಧಿತರು. ಪ್ರಕರಣ ದಾಖಲಾದಾಗಿನಿಂದ ಕಿಂಗ್ ಪಿನ್ ನಯನಾ ಬೆಂಗಳೂರಿನ ವಿವಿಧೆಡೆಗಳಲ್ಲಿ ತಲೆಮರೆಸಿಕೊಂಡಿದ್ದಳು. ಇದೀಗ ನಯನಾ ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ. ನಯನಾ ತನ್ನ ಸ್ನೇಹಿತನ ಮೂಲಕ 57 ವರ್ಷದ ಸಿವಿಲ್ ಕಂಟ್ರ್ಯಾಕ್ಟರ್ ಪರಿಚಯ ಮಾಡಿಕೊಂಡಿದ್ದಾಳೆ. ಬಳಿಕ ಆರ್ಥಿಕ ಸಂಕಷ್ಟ, ಸಮಸ್ಯೆ ಇದೆ ಎಂದು ಆಗಾಗ ಐದು-ಹತ್ತು ಸಾವಿರ ಹಣ…

Read More