Headlines

ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ..!ನಾಲ್ವರು ಅರೆಸ್ಟ್, ಇಬ್ಬರು ಅಪ್ರಾಪ್ತೆ ಬಾಲಕಿಯರ ರಕ್ಷಣೆ

ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ನೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು…

Read More

ಪುತ್ತೂರು: ಬಾಲಕಿಯ ಮೃತದೇಹ ಕೊಂಡೊಯ್ದುತ್ತಿದ್ದ ಆಂಬ್ಯುಲೆನ್ಸ್ ಗೆ ರಸ್ತೆ ಮಧ್ಯೆ ತಡೆದು ಅಡ್ಡಿ- FIR ದಾಖಲು

ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE 3033 ನಂಬರಿನ ಅಂಬುಲೆನ್ಸ್‌ ಶವ ಸಾಗಿಸುತ್ತಿರುವ ವೇಳೆ, KA 19 AE 7322 ನಂಬರಿನ ಬೊಲೆರೋ ವಾಹನವು ಹಿಂಬದಿಯಿಂದ ಓವರ್‌ಟೇಕ್ ಮಾಡಿ ರಸ್ತೆಗೆ ಅಡ್ಡಗಟ್ಟಿ ಅಕ್ರಮವಾಗಿ ತಡೆದಿದೆ ಎಂದು ತಿಳಿದು ಬಂದಿದೆ. ಅಂಬುಲೆನ್ಸ್‌ನಲ್ಲಿ ಮೃತಪಟ್ಟ…

Read More

RSS ಸಂಘವನ್ನು ನಿಷೇಧ ಮಾಡುವುದು ಸರಿಯಲ್ಲ- ಪೇಜಾವರ ಶ್ರೀ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. RSS ನಿಷ್ಪಕ್ಷಪಾತವಾಗಿ ದೇಶ ಸೇವೆ ಮಾಡುತ್ತಿದೆ. ಪ್ರಾಕೃತಿಕ ವಿ ಕೋಪ ಗಳ ಸಂದರ್ಭದಲ್ಲಿ RSS ನೀಡುವ ಸೇವೆಯನ್ನು ಯಾರೂ ಅಲ್ಲಗಳೆಯುವುದು ಅಸಾಧ್ಯ. ಯಾವುದೇ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳುವ ಮೊದಲು ಸರ್ಕಾರ ಅದರ ಲಾಭ ನಷ್ಟಗಳನ್ನು, ಸಾಧಕ ಬಾಧಕಗಳನ್ನು ಆಲೋಚನೆ ಮಾಡಬೇಕು. ಯಾವ ಸಚಿವರೇ ತಮ್ಮ ಅಭಿಪ್ರಾಯ ಮಂಡನೆ ಮಾಡಲಿ. ಆದರೆ ಅಂತಿಮವಾಗಿ ಸಿ…

Read More

ಮಂಗಳೂರು: ಹೈಡ್ರೋಫೋನಿಕ್‌ ಗಾಂಜಾ ಸಾಗಾಟ- ಆರೋಪಿಯ ಬಂಧನ

ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಫ್ ಸಿಬ್ಬಂದಿಗಳು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅ.14ರಂದು ಸಂಜೆ 6:30ಕ್ಕೆ ಮುಂಬೈನಿ0ದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. 

Read More

ಕಾರ್ಕಳ: ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುದೀಪ್ ಭಂಡಾರಿ ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ಪತ್ನಿ, ಸಹೋದರಿಯ ವಿಚಾರಣೆ

ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಹಾಗೂ ಚಿನ್ನಯ್ಯನ ಸಹೋದರಿ ರತ್ನಾ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಚಿನ್ನಯ್ಯನಿಗೆ ಸಂಬ0ಧಿಸಿದ ಕೆಲ ಮಾಹಿತಿಗಳನ್ನು ಕಲೆ ಹಾಕಲು, ಹಣ ವರ್ಗಾವಣೆಗೆ ಸಂಬ0ಧಿಸಿದ0ತೆ ಹಾಗೂ ಇತರ ವಿಚಾರಗಳ ಬಗ್ಗೆ ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಅವರಿಬ್ಬನ್ನು ಕರೆಸಿದ್ದಾರೆ ಎನ್ನಲಾಗಿದೆ. ಚಿನ್ನಯ್ಯನು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ತೆರಳಿದ ವೇಳೆ ಆತನೊಂದಿಗೆ ಪತ್ನಿಯೂ ಇದ್ದಳು ಎಂದು ಸೌಜನ್ಯಾ ಪರ ಹೋರಾಟಗಾರರು ಹೇಳಿಕೆ…

Read More

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆ.!!

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆಯಾದ ಯುವತಿಯರು ಎಂದು ಗುರುತಿಸಲಾಗಿದೆ. ಇವರಿಬ್ಬರೂ ಮಂಡ್ಯದಲ್ಲಿ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ವರದಿಯ ಪ್ರಕಾರ, ಇವರಿಬ್ಬರೂ ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದು, ಅಂದಿನಿಂದ ನಾಪತ್ತೆಯಾಗಿದ್ದಾರೆ. ಈ ಇಬ್ಬರೂ ಯುವತಿಯರು ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

Read More

ವಿಟ್ಲ: ಹನಿಟ್ರ್ಯಾಪ್ ಮಾಡಿ ಹಣ ವಸೂಲಿ- 7 ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ :ಹನಿಟ್ರ್ಯಾಪ್ ಮಾಡಿ 45 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಆರೋಪದಲ್ಲಿ ಏಳು ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 53 ವಯಸ್ಸಿನ ಕೇರಳ ಮೂಲದ ಸಂತ್ರಸ್ತ ವ್ಯಕ್ತಿಯೊಬ್ಬರು ನೀಡಿದ ದೂರಿನನ್ವಯ ಬಷೀರ್ ಕಡಂಬು, ಆಯಿಷಾತುಲ್ ಮಿಶ್ರಿಯ,ಸಫೀಯ ಮಾಣಿ, ಸಫೀಯ ಕೇರಳ,ಸರಫುದ್ದೀನ್ ವಿಟ್ಲ, ಹಾಗೂ ಇತರೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯ ವಿವರ :ಸಂತ್ರಸ್ತ ಪ್ರಾಯ 53 ವರ್ಷ ರವರು ಸೌದಿ ಅರೆಬಿಯಾದಲಿ ಸ್ವಂತ ಉದ್ಯೋಗದಲ್ಲಿದ್ದು ಅವರ ಹೆಂಡತಿಯ ಅನಾರೋಗ್ಯದಿಂದ ಮದುವೆಯಾಗುವುದಾಗಿ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಪ್ರಕರಣ: ಆರೋಪಿಗಳ ಬಂಧನ..!!

ಮಂಗಳೂರು : ಕಾವೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡಮಾನವಿರಿಸಿ 6.24 ಲಕ್ಷ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಕಾಶಭವನ ನಿವಾಸಿ ಹಾರಿಫ್ ಅಬುಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ (34), ಪುತ್ತೂರು ಬೆಳಂದೂರು ನಿವಾಸಿ ಅಬ್ದುಲ್ ರಮೀಜ್ (33) ಬಂಧಿತರು. ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನವನ್ನು ಅಡವಿಟ್ಟು ಇವರು ಆತ್ಮಶಕ್ತಿ ಸಹಕಾರಿ ಸಂಘದಲ್ಲಿ 6.24 ಲಕ್ಷ ರು. ಸಾಲ ಪಡೆದಿದ್ದರು. ನಕಲಿ ಚಿನ್ನದ…

Read More

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಕಚೇರಿ ಉದ್ಘಾಟಿಸಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಹರಿನಾರಾಯಣ ಆಸ್ರಣ್ಣ ಕಟೀಲು

ಮಂಗಳೂರು: ಕುಲಾಲರಿಂದಲೂ ವಂಶಾಭಿವೃದ್ಧಿ ಸಾಧ್ಯ. ಕುಲ ಕಸುಬಿಗೆ ಒತ್ತು ನೀಡಬೇಕು . ಕುಲ ಕಸುಬನ್ನು ಬಿಟ್ಟರೆ ದೇವರಿಗೂ ಅದು ಇಷ್ಟವಾಗದು. ದೇವರ ಆಶೀರ್ವಾದದಿಂದ ಸಮಾಜಕ್ಕಾಗಿ ಇರುವ ಸಂಘ ಇನ್ನಷ್ಟು ಬೆಳಗಲಿ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಹರಿನಾರಾಯಣ ಆಸ್ರಣ್ಣ ಕಟೀಲು ಹೇಳಿದರು. ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಕಚೇರಿ ಉದ್ಘಾಟನೆ ಮತ್ತು ದಾಸ್ ಚಾರಿಟೇಬಲ್…

Read More