ಶಬರಿಮಲೆ ಅಯ್ಯಪ್ಪನ 18 ಮೆಟ್ಟಿಲುಗಳಿಗೆ ಪೊಲೀಸರ ಅಪಚಾರ..! ಹಿಂದೂ ಸಂಘಟನೆಗಳಿಂದ ಭಾರೀ ಆಕ್ರೋಶ

ಇಡೀ ದೇಶದಲ್ಲಿ ಬಹಳ ಭಕ್ತಿಭಾವದಿಂದ ಲಕ್ಷಾಂತರ ಭಕ್ತರು ದೇವರ ಸನ್ನಿಧಿಗೆ ತೆರಳುವ ಪವಿತ್ರ ಕ್ಷೇತ್ರಗಳಲ್ಲಿ ಶಬರಿಮಲೆಯೂ ಒಂದು. ಅಯ್ಯಪ್ಪನ ದಿವ್ಯ ಸಾನಿಧ್ಯಕ್ಕೆ ಹೋಗಲು ಭಕ್ತರು ಕಟ್ಟುನಿಟ್ಟಿನ ವ್ರತಗಳನ್ನ ಆಚರಣೆ ಮಾಡುತ್ತಾರೆ. ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆಯಲು ಭಕ್ತರು ಹಾತೊರೆಯುತ್ತಾರೆ. ಅದಕ್ಕೆ ಬಹುಮುಖ್ಯ ಕಾರಣ ಪವಿತ್ರ ಕ್ಷೇತ್ರದ ಮೇಲಿರುವ ಭಕ್ತಿಭಾವ. ಆದರೆ ಶಬರಿಮಲೆಯ ಪವಿತ್ರವಾದ 18 ಮೆಟ್ಟಿಲುಗಳ ಮೇಲೆ ನಿಂತು ಪೊಲೀಸರು ಪೋಸ್ ಕೊಟ್ಟಿದ್ದು ಹೊಸ ವಿವಾದಕ್ಕೆ ಗುರಿಯಾಗಿದೆ. ಶಬರಿಮಲೆ ದೇವಾಲಯದ 18 ಮೆಟ್ಟಿಲುಗಳು ಅಯ್ಯಪ್ಪನ ಭಕ್ತರಿಗೆ…

Read More

ಬೆಳ್ತಂಗಡಿ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ..!

ಬೆಳ್ತಂಗಡಿ: ವ್ಯಕ್ತಿಯೋರ್ವರು ಸಾಲಬಾಧೆ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕೆಂಗುಡೇಲು ನಿವಾಸಿ ಪೂವಣಿ ಗೌಡ (54) ಎಂದು ಗುರುತಿಸಲಾಗಿದೆ. ಇವರು ನ. 24ರಂದು ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂವಣಿ ಗೌಡ ಅವರು ಸಾಲದ ಬಾಧೆಯಿಂದ ನೊಂದಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ, ಪುತ್ರ, ಮತ್ತು ಪುತ್ರಿಯನ್ನು ಅಗಲಿದ್ದಾರೆ.

Read More

ಉಜಿರೆಯಿಂದ ಧರ್ಮಸ್ಥಳಕ್ಕೆ ಲಕ್ಷ ದೀಪೋತ್ಸವ ಪ್ರಯುಕ್ತ ಭಕ್ತರ ಪಾದಯಾತ್ರೆ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಯುಕ್ತ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸನ್ನಿಧಿಗೆ ಭಕ್ತರು ಸಾಮೂಹಿಕವಾಗಿ ನಡೆಸುತ್ತಿರುವ ಭಕ್ತಿ ಭಜನೆಯ 12ನೇ ವರ್ಷದ ಪಾದಯಾತ್ರೆಗೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಹಲವು ಸಹಸ್ರಾರು ಮಂದಿ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಪಾದಯಾತ್ರೆಯುದ್ದಕ್ಕೂ ಓಂ ನಮಃ ಶಿವಾಯ ಹರ ಹರ ಮಹಾದೇವ ಭಕ್ತಿ ಘೋಷಣೆ ಹಾಗೂ ಭಜನೆ ನಡೆಯಿತು. ಶ್ರೀ ಜನಾರ್ದನ ದೇವರ…

Read More

ಬೆಳ್ತಂಗಡಿ: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಶ್ವಿ(17) ವಿಷ ಸೇವಿಸಿ ಮೃತಪಟ್ಟವಳು. ಋಶ್ವಿ ಬೆಳ್ತಂಗಡಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. 2 ದಿನಗಳ ಹಿಂದೆ ಈಕೆ ವಿಷ ಸೇವಿಸಿದ್ದಳು. ಪರಿಣಾಮ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋಶ್ವಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ…

Read More

ಮಂಗಳೂರು: ಲೇಡಿಗೋಶನ್ ಆಸ್ಪತ್ರೆ ಸಿಬ್ಬಂದಿ ತನ್ನ ಶಿಶು ಮಾರಾಟ ಮಾಡಿದ್ದಾರೆಂಬ ಮಹಿಳೆಯ ಆರೋಪ‌ ನಿರಾಧಾರ – ಆಸ್ಪತ್ರೆ ಸ್ಪಷ್ಟನೆ

ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಶಿಶು ಮಾರಾಟವಾಗಿದೆ ಎಂಬ ಮಹಿಳೆಯ ಆರೋಪ ನಿರಾಧಾರ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. 2024ರ ಆಗಸ್ಟ್ 18ರಂದು ಪೂರ್ವಾಹ್ನ ಗಂಟೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಎಂಬ ಮಹಿಳೆ ಹೆಣ್ಣುಶಿಶುವಿಗೆ ಜನ್ಮವಿತ್ತಿರುತ್ತಾರೆ. ಬಳಿಕ ಶಿಶುವಿಗೆ ಒಂದು ಕಣ್ಣುಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ್ದಾರೆ. ಆ ಬಳಿಕದಿಂದ ಭವ್ಯಾ ಹಾಗೂ ಆಕೆಯ ಕುಟುಂಬಸ್ಥರು ಆ ಶಿಶುವು ತಮ್ಮದಲ್ಲವೆಂದು ಹೇಳುತ್ತಿದ್ದಾರೆ. ಮಾತ್ರವಲ್ಲ…

Read More

ಮುಲ್ಕಿ ರೈಲು ಪ್ರಯಾಣಿಕನ ಹತ್ಯೆ ಸೇರಿದಂತೆ ನಾಲ್ಕು ರಾಜ್ಯಗಳ ಸೀರಿಯಲ್‌ ಕಿಲ್ಲರ್‌ ಕೊನೆಗೂ ಪೊಲೀಸ್ ವಶಕ್ಕೆ..!

ಅಹ್ಮದಾಬಾದ್‌ : ಮೂಲ್ಕಿ ರೈಲು ನಿಲ್ದಾಣದ ಸಮೀಪ ರೈಲು ಪ್ರಯಾಣಿಕರೊಬ್ಬರ ಹತ್ಯೆಯೂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಸರಣಿ ಹತ್ಯೆ ಮತ್ತು ಅತ್ಯಾಚಾರಗಳನ್ನು ಮಾಡಿದ್ದ ಸೀರಿಯಲ್‌ ಕಿಲ್ಲರ್‌ನನ್ನು ಗುಜರಾತ್‌ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. ಅತ್ಯಾಚಾರ ಹಾಗೂ ಹಲವು ಕೊಲೆ ಪ್ರಕರಣಗಳಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಹಂತಕ ಈತ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರ್ಯಾಣದ ರೋಹಟಕ್‌ನ ರಾಹುಲ್ ಜಾಟ್ ಸೆರೆಯಾಗಿರುವ ಸೀರಿಯಲ್‌ ಕಿಲ್ಲರ್‌….

Read More

ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ..!

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಸೋಮವಾರ ಸೇವೆಯಾಟದೊಂದಿಗೆ ಆರಂಭವಾಯಿತು. ದೇಗುಲದ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ ಅವರು ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸುವ ಮೂಲಕವಾಗಿ ತಿರುಗಾಟಕ್ಕೆ ಚಾಲನೆ ನೀಡಿದರು. ಮೊಕ್ತೇಸರ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು, ಆರೂ ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ ,…

Read More

ಡಾ. ಕುಲಾಲ್ ಗೆ ಮಂಗಳೂರು ಐಎಂಎ ಯ ಚೊಚ್ಚಲ ರಾಜ್ಯೋತ್ಸವ ಜೀವಮಾನದ ಸಾಧನಾ ಪುರಸ್ಕಾರ

ಮಂಗಳೂರು: ವೈದ್ಯಕೀಯ ಸೇವೆಯ ಜೊತೆಗೆ ನಾಡು ನುಡಿ ನೆಲ ಜಲ ಪರಿಸರ ಪ್ರಕೃತಿಯ ಉಳಿವಿಗಾಗಿ ಸಾಹಿತ್ಯ ಸಂಘಟನೆ ಹಾಗೂ ಜನಜಾಗೃತಿಯ ಮೂಲಕ ಮಾಡಿದ ಜೀವಮಾನದ ಸಾಧನೆಗೆ ಮಂಗಳೂರು ವೈದ್ಯಕೀಯಸಂಘ( ಐಎಂಎ) ದ ವತಿಯಿಂದ ಚೊಚ್ಚಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ದಕ ಮತ್ತು ಉಡುಪಿ ಜಿಲ್ಲೆಯ ಗಣ್ಯರಾದ ಡಾ. ಶಾಂತರಾಮ್ ಶೆಟ್ಟಿ, ನಾಡೋಜ ಜಿ ಶಂಕರ್, ಬಹುಭಾಷಾ ಚಿತ್ರನಟ ಸುಮನ್ ತಲ್ವಾರ್, ನಿಟ್ಟೆ ವಿವಿಯ ಡಾ ಸತೀಶ್ ಭಂಡಾರಿ, ಆಕಾಶವಾಣಿಯ ವಸಂತ್ ಪೆರ್ಲ, ಕನ್ನಡ ಸಾಹಿತ್ಯ ಪರಿಷತ್ ನ…

Read More

ಬಾಂಗ್ಲಾದಲ್ಲಿ ಹಿಂದೂಗಳ ಧ್ವನಿಯಾಗಿದ್ದ ಇಸ್ಕಾನ್‌ನ ಚಿನ್ಮಯ್‌ ಕೃಷ್ಣ ದಾಸ್ ಅರೆಸ್ಟ್‌

ಢಾಕಾ: ಬಾಂಗ್ಲಾದೇಶದಲ್ಲಿ ನೆಲೆಸಿರುವ ಮತ್ತು ಹಿಂದೂ (Hindu) ಅಲ್ಪಸಂಖ್ಯಾತರ ಪ್ರಮುಖ ವಕೀಲ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಬಾಂಗ್ಲಾ ತೊರೆಯಲು ಮುಂದಾಗುತ್ತಿದ್ದಾಗ ಸೋಮವಾರ(ನ.25) ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದರು ಮತ್ತು ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿದೆ. ಇವರ ಬಂಧನ ಬಗ್ಗೆ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಬಾಂಗ್ಲಾದೇಶ ರಾಜಧಾನಿಯಲ್ಲಿ ಹಿಂದೂಗಳನ್ನು ಸೇರಿಸಿ ಬೃಹತ್‌ ಪ್ರತಿಭಟನೆ…

Read More

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ; ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರಿದ್ದರು. ಕಳೆದ ವಿಚಾರಣೆಯಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೇ, ತನಿಖಾ ಪ್ರಗತಿ ವರದಿಯನ್ನು ನೀಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಇಂದು ಹೈಕೋರ್ಟ್‌ ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ. ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ,…

Read More