Headlines

ಪ್ರತಿಭಾ ಕುಳಾಯಿ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆ: ಭರತ್ ಶೆಟ್ಟಿ ಪ್ರತಿಕ್ರೀಯೆ

ಮಂಗಳೂರು :  ಬಿಲ್ಲವ ನಾಯಕಿ, ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಯ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆಗೆ ಶಾಸಕ ಶಾಸಕ ಭರತ್ ಶೆಟ್ಟಿ ಅವರು ತೀಕ್ಷ ಪ್ರತಿಕ್ರೀಯೆ ನೀಡಿದ್ದಾರೆ. ಇದು ಸಮಾಜ ಒಡೆಯುವ ಪ್ರಯತ್ನವಾಗಿದ್ದು, ಹಿಂದೂ ಸಮಾಜವನ್ನು ಒಡೆಯಬೇಕೆಂಬ ಕುತಂತ್ರ ಇದರ ಹಿಂದೆ ಇದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿಂದೂ ಪರಂಪರೆಯಲ್ಲಿ ಸನಾತನ ಧರ್ಮದಲ್ಲಿ ದೇವರನ್ನ ಅರ್ಥ ಮಾಡ್ಕೊಳ್ಳಿಕ್ಕೆ, ದೇವರನ್ನು ಮುಟ್ಟಲು ಹಲವಾರು ಮಾರ್ಗಗಳಿವೆ. ಧ್ಯಾನ ಮಾರ್ಗ ಕರ್ಮದ ಮಾರ್ಗನೂ ಇದೆ…

Read More

ಕಾರು, ಟ್ರ್ಯಾಕ್ಟರ್​​ ಇದ್ದೂ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ

ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ…

Read More

ಸುರತ್ಕಲ್: ಎಂಜಿನಿಯರಿಂಗ್ ವಿದ್ಯಾರ್ಥಿ ಸಮುದ್ರಪಾಲು..!

ಸುರತ್ಕಲ್,: ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಶಿವಮೊಗ್ಗದ ತಿಲಕ್ (21) ಸಮುದ್ರ ಪಾಲಾದ ವಿದ್ಯಾರ್ಥಿ. ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಸಂಜೆ ವಿಹಾರಕ್ಕೆಂದು ತೆರಳಿದ್ದರು. ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ತರಲಾಯಿತು.

Read More

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ  ಬೆಂಗಳೂರಿಗೆ ತೆರಳಿದ್ದ   ಅವರಿಗೆ ಇಂದು  ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ  ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ  ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ  ನಿಧನ ಹೊಂದಿದ್ದಾರೆ . ಬೆಂಗಳೂರಿನ  ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು  ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುವುದು ಎಂಬ…

Read More

ಮಂಗಳೂರು: ಮದುವೆ ನಿಶ್ಚಯವಾಗಿದ್ದ ಯುವತಿ ಅಪಘಾತಕ್ಕೆ ಬಲಿ.!

ಮಂಗಳೂರು : ನಂತೂರು ಸಮೀಪದ ಬಜ್ಜೋಡಿ ಬಳಿ ಸ್ಕೂಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಕೋಡಿಕಲ್‌ನ ಕ್ರಿಸ್ಟಿ ಕ್ರಾಸ್ತಾ (27) ಮೃತಪಟ್ಟ ಯುವತಿ ಕ್ರಿಸ್ಟಿ ಕ್ರಾಸ್ತಾ, ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದರು.ಮದುವೆ ನಿಶ್ಚಯವಾಗಿ, ನವೆಂಬರ್ 23 ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಹೊಸ ಬದುಕಿನ ಕನಸು ಹೊತ್ತ ಯುವತಿ ವಿಧಿಯಾಟಕ್ಕೆ ಬಲಿಯಾಗಿದ್ದಾಳೆ. ರವಿವಾರ ಸಂಜೆ ಆಸ್ಪತ್ರೆಯತ್ತ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ನಂತೂರು ಜಂಕ್ಷನ್ ಸಮೀಪದ ಬಜ್ಜೋಡಿ…

Read More

ಕಾರ್ಕಳ : ಬೈಕ್ ಕಾರು ನಡುವೆ ಅಪಘಾತ – ಬೈಕ್ ಸವಾರರಿಬ್ಬರು ಗಂಭೀರ

ಕಾರ್ಕಳ : ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮುದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು. ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು…

Read More

ಮಂಗಳೂರು: Whatsapp ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..!

ಮಂಗಳೂರು:  ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ  ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ತಾನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಂಡೆ. ನಂತರ ಗ್ರೂಪ್ ಅಡ್ಮಿನ್ ಕಳುಹಿಸಿದ ಲಿಂಕ್ ಒತ್ತಿ ಅದಕ್ಕೂ ಜಾಯಿನ್ ಆದೆ. ಸೆಪ್ಟಂಬರ್ 1ರಿಂದ…

Read More

ತೊಕ್ಕೊಟು: ರೈಲ್ವೆ ಹಳಿ ಮೇಲೆ ಜಲ್ಲಿಕಲ್ಲು..! ಕಿಡಿಗೇಡಿಗಳ ಹೇಯ ಕೃತ್ಯದಿಂದ ತಪ್ಪಿದ ಬಾರಿ ಅನಾಹುತ

ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯರ ಮನೆಗಳಲ್ಲಿ ಕಂಪನದ ಅನುಭವ ಉಂಟಾಗಿದ್ದು, ಜನರು ಭಯಕ್ಕೆ ಕಾರಣವಾಗಿದೆ. ಬಾರಿ ಸದ್ದು ಉಂಟಾಗಿದ್ದರಿಂದ ಸ್ಥಳೀಯರು ಟಾರ್ಚ್ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ….

Read More

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

Read More

ಈ ಸಂದರ್ಭದಲ್ಲಿ ತಂದೆ-ತಾಯಿಯ ಆಸ್ತಿಯಲ್ಲಿ ಮಕ್ಕಳಿಗೆ ಹಕ್ಕು ಇರುವುದಿಲ್ಲ : ಹೊಸ ಷರತ್ತುಗಳೇನು ತಿಳಿಯಿರಿ

ನವದೆಹಲಿ : 2024 ರಲ್ಲಿ ಆಸ್ತಿ ಕಾನೂನುಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ, ಪುತ್ರಿಯರಿಗೆ ಪೂರ್ವಜರ ಆಸ್ತಿಯಲ್ಲಿ ಪುತ್ರರಂತೆ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಪೋಷಕರ ಸ್ವ-ಸ್ವಾಧೀನದ ಆಸ್ತಿಯ ಮೇಲಿನ ಮಕ್ಕಳ ಹಕ್ಕು ರದ್ದುಗೊಳಿಸಲಾಗಿದೆ ಮತ್ತು ಅವರ ಆಸ್ತಿಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಪೋಷಕರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಒದಗಿಸಲಾಗಿದೆ. ಶತಮಾನಗಳಿಂದ ಭಾರತದಲ್ಲಿ ಕುಟುಂಬ ಮತ್ತು ಆಸ್ತಿಯ ವಿಷಯಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಸಾಮಾಜಿಕ ಮತ್ತು ಕಾನೂನು ದೃಷ್ಟಿಕೋನದಿಂದ, ಆಸ್ತಿ ಹಕ್ಕುಗಳು ಕುಟುಂಬ ಸಂಬಂಧಗಳಲ್ಲಿ ಬಿರುಕುಗಳನ್ನು ಬಲಪಡಿಸಲು ಅಥವಾ ಕೆಲವೊಮ್ಮೆ ಬಿರುಕುಗಳನ್ನು…

Read More