Headlines

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಬಾಂಗ್ಲಾಪ್ರಜೆ – ಉಡುಪಿಯಲ್ಲಿ ಅಕ್ರಮವಾಗಿ ಪಾಸ್‌ಪೋರ್ಟ್ ಮಾಡಿದ್ದ ನುಸುಳುಕೋರ

ಮಂಗಳೂರು: ಭಾರಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ಉಳಿದುಕೊಂಡಿದ್ದಲ್ಲದೇ, ಅಕ್ರಮ ಪಾಸ್‌ಪೋರ್ಟ್ ಮಾಡಿಸಿ ದುಬೈಗೆ ಹಾರಲೆತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿ ಮಾಣಿಕ್ ಹುಸೈನ್ (26) ಬಂಧಿತ ಆರೋಪಿ. ಮಾಣಿಕ್ ಹುಸೈನ್ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಬಳಿಕ, ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಿತನೊಬ್ಬನ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು…

Read More

ಕರ್ನಾಟಕ ರಕ್ಷಣಾ ವೇದಿಕೆ ಕಚೇರಿಯಲ್ಲಿ ನವರಾತ್ರಿ ಸಂಭ್ರಮ..!!

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ  ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಳರವರ ಅಧ್ಯಕ್ಷತೆಯಲ್ಲಿ  ನವರಾತ್ರಿ ಹಬ್ಬದ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಹಾಗೂ ತಾಲೂಕು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರೆಲ್ಲರೂ 9 ಬಣ್ಣದ ಸೀರೆಯನ್ನುಟ್ಟು ಉಡುಪಿ ಜಿಲ್ಲಾ ಕಛೇರಿಯಲ್ಲಿ ನವರಾತ್ರಿ ಹಬ್ಬ ಆಚರಿಸಿದರು. ಉಡುಪಿಗೆ ಪ್ರವಾಸಕ್ಕೆಂದು ಆಗಮಿಸಿದ ಬೆಂಗಳೂರು  ರಾಜ್ಯದ ಪತ್ರಿಕಾ ಕಾರ್ಯದರ್ಶಿಯಾದ ಗೋಮೂರ್ತಿ ಯಾದವ್, ಬೆಂಗಳೂರು ನಗರ  ಉಪಾಧ್ಯಕ್ಷರಾದ…

Read More

ಉಡುಪಿ: 9 ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

ಉಡುಪಿ: ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ನಡೆದಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದನು. ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ….

Read More

ಮೈಸೂರು ದಸರಾ : ಐತಿಹಾಸಿಕ 415ನೇ ಜಂಬೂ ಸವಾರಿಗೆ ಕ್ಷಣಗಣನೆ

ಇಂದು ವಿಜಯದಶಮಿ ನಾಡಿನೆಲ್ಲೆಡೆ ಕಳೆಗಟ್ಟಿದೆ. ಅದರಲ್ಲೂ 415ನೇ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. 5ನೇ ಬಾರಿ ಕ್ಯಾಪ್ಟನ್​​​ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಇನ್ನು, ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸ್ತಬ್ಧಚಿತ್ರಗಳು, ಕಲಾತಂಡಗಳ ಪ್ರದರ್ಶನ ಮೆರಗು ನೀಡಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು  ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ…

Read More

ಈ ಹಣ್ಣುಗಳನ್ನು ತಿಂದ ಕೂಡಲೇ ನೀರು ಕುಡಿಯಬೇಡಿ.?

ನಾವು ಬದುಕಲು ಆಹಾರ ಎಷ್ಟು ಮುಖ್ಯವೋ, ನೀರು ಕೂಡ ಅಷ್ಟೇ ಮುಖ್ಯ. ದಿನಕ್ಕೆ ಕನಿಷ್ಠ ನಾಲ್ಕು ಲೀಟರ್ ನೀರು ಕುಡಿಯಬೇಕು ಎನ್ನುತ್ತಾರೆ ತಜ್ಞರು. ಆದರೆ ಕೆಲವು ಬಗೆಯ ಆಹಾರಗಳನ್ನು ತಿಂದ ಮೇಲೆ ನಾವು ಅಪ್ಪಿತಪ್ಪಿಯೂ ನೀರು ಕುಡಿಯಬಾರದು. ಹಣ್ಣುಗಳು ಫ್ರಕ್ಟೋಸ್ ಅಂದರೆ ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತವೆ, ಆದ್ದರಿಂದ ನೀವು ಫ್ರಕ್ಟೋಸ್ ಹೊಂದಿರುವ ನೀರನ್ನು ಸೇವಿಸಿದರೆ ಅದು ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದ್ದರಿಂದ ಹಣ್ಣುಗಳನ್ನು ತಿನ್ನುವ 1 ಗಂಟೆಯ ಮೊದಲು ಅಥವಾ 1 ಗಂಟೆಯ ನಂತರ ನೀರನ್ನು ಕುಡಿಯಿರಿ…

Read More

ನಾಳೆ (ಅ.12)ರಂದು ಪಡೀಲ್ ನಲ್ಲಿರುವ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಎದುರಿನ ಮೈದಾನದಲ್ಲಿ ಜಗದಂಬಾ ಹುಲಿ ಇವರಿಂದ ಹುಲಿವೇಷ ಕುಣಿತ

ಮಂಗಳೂರು: ಶಿವ ಫ್ರೆಂಡ್ಸ್ ಕ್ಲಬ್ (ರಿ.) ಕೊಡಕ್ಕಲ್ ಮತ್ತು ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಮಂಗಳೂರು ಇವರ ವತಿಯಿಂದ ದಿನಾಂಕ ಅ.12 ಶನಿವಾರದಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಂಗಳೂರಿನ ಪಡೀಲ್ ನಲ್ಲಿರುವ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಎದುರಿನ ಮೈದಾನದಲ್ಲಿ ಪಿಲಿಗೊಬ್ಬು 2 ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ವಿಜೇತ ಜಗದಂಬಾ ಹುಲಿ ಇವರಿಂದ ಹುಲಿವೇಷ ಕುಣಿತ ನಡೆಯಲಿದೆ.

Read More

ಉಡುಪಿ: ಪ್ರಧಾನಿ ಕಾರ್ಯಾಲಯದ ಅಧಿಕಾರಿ ಸೋಗಿನಲ್ಲಿ ಆಗಮಿಸಿ ಶ್ರೀಕೃಷ್ಣಮಠಕ್ಕೆ ವಂಚನೆ : ದೂರು ದಾಖಲು…!!

ಉಡುಪಿ : ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್‌ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದರು. ಅನುಮಾನ…

Read More

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮ

ಧರ್ಮಸ್ಥಳದ ಸಮೀಪವಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮವು ಜರುಗಲಿದ್ದು, ವಾಟ್ಸಪ್ ಮೂಲಕ ಗೂಗಲ್ ಫಾರಂ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 15 ರಿಂದ 24 ರವರೆಗೆ 10 ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತರಬೇತಿ, 21 ರಿಂದ 30 ರವರೆಗೆ ರಬ್ಬರ್ ಟ್ಯಾಪಿಂಗ್ ತರಬೇತಿ, ನವೆಂಬರ್ 6 ರಿಂದ ಡಿಸೆಂಬರ್ 5 ರವರೆಗೆ ಕಂಪ್ಯೂಟರ್‌ ಅಕೌಂಟಿಂಗ್, ನವೆಂಬರ್ 11 ರಿಂದ 20 ರವರೆಗೆ ಜೇನು ಕೃಷಿ…

Read More

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಮೃತ ದುರ್ದೈವಿ.ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು…

Read More

ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ. ಕಿರಣ್ ಡಿಸೋಜ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ. ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, 10 ಗ್ರಾಂ ತೂಕದ 30,000 ರೂ. ಮೌಲ್ಯದ ಎಂಡಿಎಂಎ, ಸ್ಕೂಟರ್ ಮತ್ತು ಮೊಬೈಲ್ ಫೋನ್‌ಅನ್ನು…

Read More