Headlines

ಸಾವನ್ನಪ್ಪಿದ್ದ ಮಹಿಳೆ: 3 ವರ್ಷದ ಬಳಿಕ ಪ್ರಿಯಕರನ ಜೊತೆ ಜೀವಂತ ಪ್ರತ್ಯಕ್ಷ..!

ಲಕ್ನೋ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸತ್ತ ಮಹಿಳೆ ಬದುಕಿ ಬಂದಿದ್ದಾಳೆ. ಆಕೆಯ ಹೆತ್ತವರು, ಸಂಬಂಧಿಕರು ಸತ್ತೋಗಿದ್ದಾಳೆ ಎಂದುಕೊಂಡಿದ್ರೆ, ಆಕೆ ಲವರ್ ಜೊತೆ ಜೀವಂತವಾಗಿ ಪ್ರತ್ಯಕ್ಷವಾಗಿದ್ದಾಳೆ. ಲಕ್ನೋದಲ್ಲಿ ಪ್ರಿಯತಮ ಸತ್ಯನಾರಾಯಣ್ ಗುಪ್ತಾ ಜೊತೆ ನೆಮ್ಮದಿಯಾಗಿ ಜೀವನ ನಡೆಸುತ್ತಿದ್ದಳು. ಗೊಂಡಾ ಜಿಲ್ಲೆಯ ವಿನಯ್ ಜೊತೆ 2017 ರಂದು ಕವಿತಾ ಮದುವೆಯಾಗಿದ್ದರು. ನಾಲ್ಕು ವರ್ಷದವರೆಗೂ ಇಬ್ಬರ ಸಂಸಾರದಲ್ಲಿ ಸಣ್ಣ ಬಿರುಕು ಇರಲಿಲ್ಲ. ಆದ್ರೆ, 2021 ಮೇ5ರಂದು ಇದ್ದಕ್ಕಿದ್ಹಾಗೆ ಮನೆಯಿಂದ ಕವಿತಾ ನಾಪತ್ತೆಯಾಗಿದ್ದಳು. ತಕ್ಷಣ ವಿನಯ್ ಕುಮಾರ್ ಕವಿತಾ ಪೋಷಕರಿಗೆ ಪತ್ನಿ…

Read More

 ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 39,481 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್ಸಿ) ಜಿಡಿ ಕಾನ್ಸ್ಟೇಬಲ್ 2025 ನೇಮಕಾತಿ ಡ್ರೈವ್ಗೆ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿಗಳು ಈಗ ಮುಕ್ತವಾಗಿವೆ ಮತ್ತು ಸೆಪ್ಟೆಂಬರ್ 5 ರಿಂದ ಅಕ್ಟೋಬರ್ 14, 2024 ರವರೆಗೆ ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳು ನೋಂದಣಿ ಪ್ರಕ್ರಿಯೆಗಾಗಿ ಎಸ್‌ಎಸ್ಸಿಯ ಅಧಿಕೃತ ವೆಬ್ಸೈಟ್ಗೆ ಅಂದರೆ ssc.gov.in ಭೇಟಿ ನೀಡಬಹುದು. ಎಸ್‌ಎಸ್ಸಿ ಜಿಡಿ 2025 ಅಧಿಸೂಚನೆ: ಖಾಲಿ ಹುದ್ದೆಗಳ ವಿವರ: ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅರೆಸೈನಿಕ ಸಂಸ್ಥೆಗಳಲ್ಲಿ ಒಟ್ಟು 39,481…

Read More

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಆಯಿಷಾ ಸಹಿತ 3 ಮಂದಿಯ ಬಂಧನ

ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ…

Read More

ಪುತ್ತೂರು: ಹಾಲುಮಡ್ಡಿ ಅಕ್ರಮ ಸಾಗಾಟ- ನಾಲ್ವರ ಬಂಧನ

ಪುತ್ತೂರು: ಹಾಲುಮಡ್ಡಿ ಶೇಖರಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ಕು ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳುಬಂಧಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ * ಬಾಯಬೆ ನಿವಾಸಿ ಉಮರ್ ಫಾರೂಕ್ (44), ಪಾಟ್ರಕೋಡಿ ನಿವಾಸಿಗಳಾದ ಅಲಿ ಹೈದರ್ ಎಂ.ಕೆ.(24), ಮುಹಮ್ಮದ್ ಹಸೈನಾರ್(30) ಮತ್ತು ತಾಳಿಪಡ್ಪು ನಿವಾಸಿ ಉಮರ್ ಪಾರೂಕ್ (26) ಎಂದು ಗುರುತಿಸಲಾಗಿದೆ. ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದ ದೂಪದ ಮರದಿಂದ ಹಾಲುಮಡ್ಡಿ ಸಂಗ್ರಹಿಸಿದ್ದರು.ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ್ದ ಆಟೊ ರಿಕ್ಷಾ…

Read More

ತೈಲ ಸೋರಿಕೆಯಿಂದ ದ್ವಿಚಕ್ರ ವಾಹನಗಳು ಸ್ಕಿಡ್- ಸವಾರರಿಗೆ ಗಾಯ

ಉಡುಪಿ: ಅಪರಿಚಿತ ವಾಹನದಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ತೈಲ ಸೋರಿಕೆಯಿಂದ ರಸ್ತೆ ಜಾರುತ್ತಿತ್ತು, ಪರಿಣಾಮ ಏಳೆಂಟು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ರಸ್ತೆಯಿಂದ ತೈಲವನ್ನು ತೆರವುಗೊಳಿಸಲು ನೀರು ಸಿಂಪಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಗ್ನಿಶಾಮಕ ದಳದ ಪದ್ಮನಾಭ ಕಾಂಚನ್, ದಿವಾಕರ್ ಮತ್ತು ಅರುಣ್, ಸಮಾಜ ಸೇವಕ ನಿತ್ಯಾನಂದ…

Read More

ಬಂಟ್ವಾಳ: ಆಯತಪ್ಪಿ ನದಿಗೆ ಬಿದ್ದ ವೃದ್ಧ – ಜೀವದ ಹಂಗು ತೊರೆದು ರಕ್ಷಿಸಿದ ಇಬ್ಬರು ಯುವಕರು

ಬಂಟ್ವಾಳ: ಉಕ್ಕಿ ಹರಿಯುತ್ತಿದ್ದ ನದಿಗೆ ಆಯತಪ್ಪಿ ಬಿದ್ದ ವೃದ್ಧರೋರ್ವರನ್ನು ಯುವಕರಿಬ್ಬರು ಜೀವದ ಹಂಗು ತೊರೆದು ರಕ್ಷಿಸಿರುವ ಘಟನೆ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಉಮ್ಮರ್ (70) ಎಂಬವರು ರಕ್ಷಿಸಲ್ಪಟ್ಟ ವ್ಯಕ್ತಿ. ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ದಾರಿಯಾಗಿ ಉಮ‌ರ್ ಅವರು ಸಂಚರಿಸುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದಿದ್ದರಿಂದ ಅವರು ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಆ ತಕ್ಷಣ ಅಲ್ಲಿಯೇ ಇದ್ದ ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್‌ ಹಾಗೂ ಸುರೇಶ್…

Read More

ಮಂಗಳೂರು: ಅಸಭ್ಯ ವರ್ತನೆ- ಕೆಲಸದಿಂದ ಕಿತ್ತು ಹಾಕಿದ ಮಾಲಕರು

ಮಂಗಳೂರು,: ನಗರದ ಹೊರವಲಯದ ಕೂಳೂರಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕ ಅಂಗಡಿಗೆ ಬರುತ್ತಿದ್ದ ಮಹಿಳೆಯೋರ್ವರಿಗೆ ವೀಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ಆ ಯುವಕನನ್ನು ಅಂಗಡಿಯವರು ಕೆಲಸದಿಂದ ತೆಗೆದು ಹಾಕಿದ್ದಾರೆ. ರಾತ್ರಿ 11.30ಕ್ಕೆ ಮಹಿಳೆಗೆ ವೀಡಿಯೋ ಕರೆ ಮಾಡಿದ್ದ ಯುವಕ ಅಸಭ್ಯವಾಗಿ ವರ್ತಿಸಿದ್ದ ಇದರಿಂದ ಆಕ್ರೋಶಗೊಂಡ ಇಬ್ಬರು ಮಹಿಳೆಯರು ಅಂಗಡಿಗೆ ಬಂದು ಯುವಕನನ್ನು ತರಾಟೆಗೆ ತೆಗೆದುಕೊಂಡು ಕೈಯಿಂದ ಹಲ್ಲೆ ನಡೆಸಿದ್ದರು. ಮಹಿಳೆಯರು ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ‘ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕ…

Read More

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 6ಕೋಟಿಯ ಎಂಡಿಎಂಎನೊಂದಿಗೆ ನೈಜೀರಿಯಾ ಪ್ರಜೆ ಸೆರೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕದ್ರವ್ಯ ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಂಗಳೂರಿನ ದೊಮ್ಮಸಂದ್ರದ ವಿವೇಕಾನಂದ ನಗರದಲ್ಲಿ ವಾಸವಿರುವ ಪೀಟರ್ ಇಕೆಡಿ ಬೆಲೊನ್ವು(38) ಎಂಬ ನೈಜೀರಿಯಾ ಪ್ರಜೆ ಬಂಧಿತ ಆರೋಪಿ ಸೆಪ್ಟೆಂಬರ್ 29ರಂದು ನಗರದ ಪಂಪ್‌ವೆಲ್ ಬಳಿ ಎಂಡಿಎಂಎ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ತೊಕ್ಕೊಟ್ಟು,…

Read More

ಮೂಲ್ಕಿ : ಕಾರಿನಲ್ಲಿ ಆಕಸ್ಮಿಕ ಬೆಂಕಿ..! ಪ್ರಯಾಣಿಕರು ಅಪಾಯದಿಂದ ಪಾರು

ಮೂಲ್ಕಿ : ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ‌ಮುಂಭಾಗ ನಡೆದಿದೆ. ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೊರ್ವ ಮಹಿಳೆ‌ಮತ್ತು ಎರಡು‌ ಮಕ್ಕಳೊಂದಿಗೆ ಕಿನ್ನಿಗೋಳಿ‌ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ. ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು  ಕೂಡಲೇ ಸ್ಥಳೀಯರು…

Read More

ಅಕ್ಟೋಬರ್ 13ರಂದು ಪೊಸಳ್ಳಿ ಕುಲಾಲ ಭವನದಲ್ಲಿ ಪುದ್ದರ್ ಲೇಸ್ದ ಗೌಜಿ, ವಿದ್ಯಾರ್ಥಿವೇತನ ವಿತರಣೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಇಲ್ಲ್ ದಿಂಜಾವುನ ಪೊರ್ಲು, ಪುದ್ದರ್ ಲೇಸ್ದ ಗೌಜಿ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಅಕ್ಟೋಬರ್ 13ರಂದು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.ಬೆಳಿಗ್ಗೆ ತುಳುನಾಡಿನ ಸಂಪ್ರದಾಯವಾದ ಭತ್ತದ ತೆನೆಗೆ ಪೂಜೆ ಮಾಡಿ ಮನೆ ತುಂಬಿಸುವ ಕಾರ್ಯಕ್ರಮ ಇಲ್ಲ್ ದಿಂಜಾವುನ ಪೊರ್ಲು ನಡೆಯಲಿದೆ. ನಂತರ ನಡೆಯುವ ನಡೆಯುವ ಸಭಾಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ, ನಿರಂತರ ವಿದ್ಯಾರ್ಥಿ ವೇತನ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ…

Read More