ಉಡುಪಿ: ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ- SI ಸಹಿತ ಇಬ್ಬರ ಅಮಾನತು

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಚೇರ್ಕಾಡಿ ಗ್ರಾಮದ ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಿಜು ಮೋನು ಮೇಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ…

Read More

ಭರದಿಂದ ಸಾಗುತ್ತಿದೆ “90 ಎಮ್ ಎಲ್” ಚಿತ್ರೀಕರಣ

ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್ ಕುಮಾರ್ ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರುಹಾನಿ ಶೆಟ್ಟಿ ನಟಿಸುತ್ತಿದ್ದಾರೆ….

Read More

ಉಳ್ಳಾಲ: ಹಿಂದೂ ಮುಖಂಡನ ಹಲ್ಲೆ ಪ್ರಕರಣದ ಆರೋಪಿ ಮೇಲೆ ತಲವಾರ್ ದಾಳಿಗೆ ಯತ್ನ – FIR ದಾಖಲು..!

ಉಳ್ಳಾಲ: ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್ ಬಂಕ್ ಎಂಬಲ್ಲಿ ನಡೆದಿದ್ದು, ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲಿ ಠಾಣಾಧಿಕಾರಿಯ ಎದುರೇ ಹಿಂದೂ ಮುಖಂಡನಿಗೆ ಹಲ್ಲೆ ನಡೆಸಿ ಜೈಲು ಪಾಲಾಗಿ ಜಾಮೀನಿನ ಮೇಲೆ…

Read More

ಮಂಗಳೂರು : ನಿವೃತ್ತ ADGP ಸುರೇಶ್ ಬಾಬು ನಿಧನ..!

ಮಂಗಳೂರು :  ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP)  ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್‌ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ (ದಕ್ಷಿಣ ವಲಯ, ಮೈಸೂರು), ಐಜಿಪಿ (ಪಶ್ಚಿಮ ವಲಯ ಮಂಗಳೂರು) ಐಜಿಪಿ (ಗುಪ್ತಚರ), ಬೆಂಗಳೂರು ನಗರದಲ್ಲಿ ಜಂಟಿ ಪೊಲೀಸ್ ಕಮಿಷನರ್ (ಅಪರಾಧ) ಮತ್ತು ಮೈಸೂರಿನಲ್ಲಿರುವ ಪೊಲೀಸ್ ಅಕಾಡೆಮಿಯ ನಿರ್ದೇಶಕ ಸ್ಥಾನ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಸುರೇಶ್ ಬಾಬು ಅಲಂಕರಿಸಿದ್ದರು. 1999…

Read More

ಇಂದಿನಿಂದ 3 ದಿನ (ನ. 11 ರಿಂದ 13) ಉಳ್ಳಾಲ ಪ್ರೆಸ್ ಕ್ಲಬ್ (ತೊಕ್ಕೋಟ್ಟು) ನಲ್ಲಿ ಆಧಾರ್ ಶಿಬಿರ

ಮಂಗಳೂರು: ಇಂದಿನಿಂದ 3 ದಿನ (ನ. 11 ರಿಂದ 13) ಉಳ್ಳಾಲ ಪ್ರೆಸ್ ಕ್ಲಬ್ (ತೊಕ್ಕೋಟ್ಟು) ನಲ್ಲಿ ಆಧಾರ್ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಹೊಸ ಆಧಾರ್ ಕಾರ್ಡ್, ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್, ಇಮೇಲ್ ಐಡಿ, ವಿಳಾಸ ತಿದ್ದುಪಡಿ, ಪೊಟೊ ಅಪ್ಡೇಟ್, ಮಕ್ಕಳ 5 ವರ್ಷದ ಮತ್ತು 15 ವರ್ಷದ ಅಪ್ಡೇಟ್, ಪ್ರತಿ 10 ವರ್ಷಕ್ಕೊಮ್ಮೆ ಮಾಡಿಕೊಳ್ಳುವ ಅಪ್ಡೇಟ್ ಗಳನ್ನು ಮಾಡಲಾಗುವುದು. 2. ಉಳಿದ ಎಲ್ಲರೂ ಪ್ರತಿ 10 ವರ್ಷಕ್ಕೊಮ್ಮೆ ಆಧಾರ್ ನವೀಕರಿಸುವುದು…

Read More

ಮಂಗಳೂರು: ಭಾರತೀಯ ಸೇನೆಗೆ ಸೇರ ಬಯಸುವವರಿಗೆ ಸುವರ್ಣ ಅವಕಾಶ: ಆಯ್ಕೆಗೆ ಮಾರ್ಗದರ್ಶನ ಹಾಗೂ ತರಬೇತಿ

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಅಥವಾ ಇತರ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಿದೆ. ಉಚಿತವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ನ. 22 ಕೊನೆಯ ದಿನಾಂಕವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd. karnataka.gov.in ಅಥವಾ ಸಹಾಯವಾಣಿ…

Read More

ಭಾರತದ 51ನೇ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಮಾಣ ವಚನ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೇಯ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖನ್ನಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ. ಡಿ.ವೈ. ಚಂದ್ರಚೂಡ್ ಅವರು ಸಿಜೆಐ ಹುದ್ದೆಯಿಂದ ಭಾನುವಾರ ನಿವೃತ್ತರಾಗಿದ್ದಾರೆ. ಖನ್ನಾ ಅವರು 2025ರ ಮೇ 13ರವರೆಗೆ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ…

Read More

ಮಂಗಳೂರು: ಮಗುವಿನೊಂದಿಗೆ ಗುರುಪುರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಂದೆ..! ಸ್ಥಳೀಯರಿಂದ ರಕ್ಷಣೆ

ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು…

Read More

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಮಮತಾ ಅಣ್ಣಯ್ಯ ಕುಲಾಲ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ (ರಿ) ಪೋಲೀಸ್ ಲೈನ್ ಮಂಗಳೂರು ಇದರ ಮಹಿಳಾ ವಿಭಾಗದ 2024 – 2025 ನೇ ಸಾಲಿನ ಅಧ್ಯಕ್ಷೆಯಾಗಿ ಶ್ರೀಮತಿ ಮಮತಾ ಅಣ್ಣಯ್ಯ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು. ಇವರಿಗೆ ಲಯನ್ ಅನಿಲ್ ದಾಸ್ ಮಂಗಳೂರು, ಪುರುಷೋತ್ತಮ್ ಕಲ್ಪಾವಿ, ಜಯರಾಜ್ ಪ್ರಕಾಶ್, ದಯಾನಂದ ಅಡ್ಯಾರ್ , ರಾಜೇಂದ್ರ ಅಳಪೆ, ಗಂಗಾಧರ್ ಬಂಜನ್ , ಸುಧಾಕರ್ ಸುರತ್ಕಲ್, ದಿನಕರ್ ಅಂಚನ್, ಅಶೋಕ್ ಕುಲಾಲ್, ಮಹಾಬಲ ಮಾಸ್ಟರ್, ಶೇಷಪ್ಪ ಕುಲಾಲ್,…

Read More

ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ : ನ್ಯಾಯಾಂಗ ನಿಂದನೆ ಹಿನ್ನೆಲೆ ಕ್ರಮ ಕೈಗೊಳ್ಳಲು ಗವರ್ನರ್ ಸೂಚನೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಸಚಿವ ಜಮೀರ್ ಅಹ್ಮದ್ ಖಾನ್ ರಾಜಕೀಯ ತೀರ್ಪು ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿದ್ದಾರೆ. ಹೌದು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ…

Read More