ಉಜ್ವಲ್‌ ಯೋಜನೆ : ಬಿಪಿಎಲ್‌ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ

ಉಜ್ವಲ್‌ ಯೋಜನೆಯಡಿ, ಬಿಪಿಎಲ್‌ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಕೇಂದ್ರ ಹೊಂದಿದೆ.ಉಜ್ವಲ 2.0 ಅಡಿಯಲ್ಲಿ, ಕೇಂದ್ರ ಸರ್ಕಾರ ಬಡವರಿಗೆ ಸುಮಾರು 10 ಮಿಲಿಯನ್‌ ಅನಿಲ ಸಂಪರ್ಕಗಳನ್ನು ಉಚಿತ ರೀಫಿಲ್‌ ಮತ್ತು ಒಲೆಯೊಂದಿಗೆ ವಿತರಿಸಲಿದೆ. ಈ ಯೋಜನೆಯ ಲಾಭವನ್ನು ಪಡೆಯಲು ಪ್ರಮುಖ ದಾಖಲೆಗಳೆಂದರೆ, ಪಾಸ್‌ಪೋರ್ಟ್‌ ಫೋಟೋ, ಪಡಿತರ ಚೀಟಿ, ಸ್ವಯಂ ಘೋಷಿತ ಪ್ರಮಾಣ ಪತ್ರ, ಕುಟುಂಬ ಸದಸ್ಯರ ಆಧಾರ್‌, ಬ್ಯಾಂಕ್‌ ಖಾತೆ ಸಂಖ್ಯೆ ಮತ್ತು IFSC. ಇವೆಲ್ಲವನ್ನೂ ತೆಗೆದುಕೊಂಡು ನಿಮ್ಮ ಹತ್ತಿರ ಗ್ರಾಂ ಒನ್‌ ಕೇಂದ್ರಗಳಿಗೆ ಹೋಗಿ…

Read More

ಸ್ಪೇನ್‌ನಲ್ಲಿ ಭೂಕುಸಿತ ದುರಂತ: ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 205ಕ್ಕೆ ಏರಿಕೆ

ಮ್ಯಾಡ್ರಿಡ್: ಸ್ಪೇನ್‌ನಲ್ಲಿ ಭಾರಿ ಮಳೆಯಿಂದಾಗಿ ದಕ್ಷಿಣದ ಪ್ರಾಂತ್ಯಗಳಲ್ಲಿ ಉಂಟಾಗಿರುವ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 205ಕ್ಕೆ ಏರಿಕೆಯಾಗಿದೆ. ಭೂಕುಸಿತ ಹಾಗೂ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯುಂಟಾಗಿದೆ. ಪ್ರವಾಹದಿಂದಾಗಿ ವೆಲೆನ್ಸಿಯಾದಲ್ಲೇ ಬರೋಬ್ಬರಿ 202 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ಇಲ್ಲಿನ ಸುಮಾರು 75,000 ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಸ್ಥಳೀಯ ನಾಯಕ ಕಾರ್ಲೋಸ್ ಮಜಾನ್ ಮಾಹಿತಿ ನೀಡಿದ್ದಾರೆ.ನೆರೆಯ ಪ್ರಾಂತ್ಯಗಳಲ್ಲಿ ಮೂರು ಸಾವು ಸಂಭವಿಸಿವೆ. ಪ್ರವಾಹದಿಂದಾಗಿ ಮುಳುಗಡೆಯಾಗಿರುವ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಹಿನ್ನೆಲೆ ಸಾವಿನ ಸಂಖ್ಯೆ…

Read More

ಒಂದು ದಿನವೂ ರಾಷ್ಟ್ರಧ್ವಜ, ಕನ್ನಡ ಧ್ವಜಕ್ಕೆ ಗೌರವ ಕೊಟ್ಟಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ

ಮಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರ ಅಳು ಎಲ್ಲಾ ಬರೋದೇ ಎಲೆಕ್ಷನ್ ಟೈಮ್‌ನಲ್ಲಿ ಎಂದು ಡಿಕೆ ಶಿವಕುಮಾರ್ ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದಾದರೂ ಒಂದು ಗುರುತಿಸುವ ಕೆಲಸ ಚನ್ನಪಟ್ಟಣಕ್ಕೆ ಮಾಡಿರೋದನ್ನ ತೋರಿಸು. ಕೆರೆ ಮಾಡಿದ್ದು ಯೋಗೇಶ್ವರ್, ದುಡ್ಡು ಕೊಟ್ಟಿದ್ದು ನಾನು. ನೀನು ಮುಖ್ಯಮಂತ್ರಿ ಆಗಿದ್ದಾಗಲೇ ಮಾಡಿಲ್ಲ. ಎಂಎಲ್‌ಎ ಆಗಿದ್ದಾಗ ಬಿಜೆಪಿ ಜೊತೆಗೆ ಸಂಪರ್ಕ ಇತ್ತು. ಗುರುತು ಮಾಡೋ ಕೆಲಸ ಮಾಡಬೇಕಿತ್ತಲ್ಲ. ಸುಮ್ಮನೆ ವೋಟಿಗೋಸ್ಕರ ಬಂದು ಮಾತನಾಡೋದಲ್ಲ. ಅಭ್ಯರ್ಥಿಗೆ…

Read More

ಅಪ್ರಾಪ್ತ ಅನ್ಯಕೋಮಿನ ಯುವಕನಿಂದ 10ನೇ ತರಗತಿ ಬಾಲಕಿ ಜೊತೆ ಮೊಬೈಲ್ ಚಾಟ್..!, ಹಿಗ್ಗಾಮುಗ್ಗಾ ಥಳಿತ, ಆಸ್ಪತ್ರೆಗೆ ದಾಖಲು

ಶಾಲೆಗೆ ಹೋಗುವ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ ಎಂದು ಹತ್ತು ಹಲವು ಸಲ ಬೊಬ್ಬೆ ಹಾಕಿದರೂ ಏನೂ ಪ್ರಯೋಜನ ಆಗುತ್ತಿಲ್ಲ. ಅವರು ಮೊಬೈಲ್ ನಲ್ಲಿ ಏನು ಚಟುವಟಿಕೆ ಮಾಡುತ್ತಿದ್ದಾರೆ ಅನ್ನುವುದೇ ಗೊತ್ತಾಗುವುದಿಲ್ಲ. ಇದಕ್ಕೆ ಸಾಕ್ಷಿ ಎಂಬತೆ ಸುಳ್ಯದ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಎಲಿಮಲೆಯ ಹತ್ತನೇ ತರಗತಿ ಅಪ್ರಾಪ್ತ ಹಿಂದೂ ಹುಡುಗಿ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಈ ಚಾಟ್ ಕೆಲವರ ಗಮನಕ್ಕೆ ಬಂದಿದೆ. ಇದರಿಂದ ಪಿತ್ತ ನೆತ್ತಿಗೇರಿಸಿಕೊಂಡ ಕೆಲವು ಯುವಕರು ಆತನನ್ನು ನಿನ್ನೆ…

Read More

ಮಂಗಳೂರಿನ ಸಮಾಜ ಸೇವಕನಿಗೆ ಅವಮಾನ! ಸುವರ್ಣ ಮಹೋತ್ಸವ ಪ್ರಶಸ್ತಿಗೆಂದು ಕರೆಸಿ, ಬರಿಗೈಲಿ ವಾಪಸ್

ಬೆಂಗಳೂರು: ರಾಜ್ಯ ಸರ್ಕಾರದ ಎಡವಟ್ಟಿನಿಂದ ಸುವರ್ಣ ಮಹೋತ್ಸವ ಪ್ರಶಸ್ತಿಗಾಗಿ ಬಂದು ಸಮಾಜ ಸೇವಕರೋರ್ವರು ಬರಿಗೈಲಿ ವಾಪಸ್ ಆದ ಘಟನೆ ಜರುಗಿದೆ. ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕರೊಬ್ಬರಿಗೆ ಫೋನ್ ಕರೆ ಮಾಡಿ ಬೆಂಗಳೂರಿಗೆ ಕರೆಸಿಕೊಂಡಿದೆ. ಇನ್ನೇನು ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ನಿಮಗೆ ಪ್ರಶಸ್ತಿ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಮೂಲಕ ಮಂಗಳೂರಿನ ಸಮಾಜ ಸೇವಕ ಬಾಬು ಪಿಲಾರ್ ಅವಮಾನ ಮಾಡಿದ್ದಾರೆ. ಖುದ್ದು…

Read More

DCC ಬ್ಯಾಂಕ್ ನಲ್ಲಿ ಖಾಲಿ ಇರುವ 85 ಹುದ್ದೆಗಳ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಬ್ಯಾಂಕ್ ನಲ್ಲಿ ಕೆಲಸ ಮಾಡುವ ನಿರೀಕ್ಷೆಯಲ್ಲಿರುವವವರಿಗೆ DCC ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯ ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಇದೆ ರೀತಿಯ ಉದ್ಯೋಗ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ. ಹುದ್ದೆಗಳ ವಿವರ ಹೀಗಿದೆ:…

Read More

ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿ ಸಿಸಿಬಿ ಪೊಲೀಸರ ವಶಕ್ಕೆ

ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು…

Read More

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ‘ನಮೋ ಡ್ರೋನ್ ದೀದಿ ಯೋಜನೆ’ ಪ್ರಾರಂಭ

ನವದೆಹಲಿ: ಕೇಂದ್ರೀಯ ವಲಯದ ನಮೋ ಡ್ರೋನ್ ದೀದಿಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ 1261 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ಒದಗಿಸಲು ಈ ಕೇಂದ್ರ ವಲಯದ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯು 2024-25 ರಿಂದ 2025-2026 ರ ಅವಧಿಯಲ್ಲಿ 14,500 ಆಯ್ದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ….

Read More

GOOD NEWS: ಶೀಘ್ರವೇ ‘ಹೊಸ ರೇಷನ್ ಕಾರ್ಡ್’ಗಾಗಿ ಅರ್ಜಿ ಸಲ್ಲಿಕೆ ಆರಂಭ

ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಶೀಘ್ರವೇ ಪ್ರಾರಂಭಿಸಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬಯಸುವ…

Read More

ಉಳ್ಳಾಲ: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಅಯಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿ, 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ. ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರದ ಅಫ್ಸಾತ್ (37) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ದಾಳಿ ನಡೆಸಿ…

Read More