“ಆಧಾರ್ ಕಾರ್ಡ್” ನವೀಕರಿಸಲು ಕೇಂದ್ರದಿಂದ ಪ್ರಮುಖ ನಿರ್ಧಾರ..! 

ಆಧಾರ್ ಕಾರ್ಡ್ ಸಂಬಂಧಿತ ಸೇವೆಗಳನ್ನು ಒದಗಿಸಲು ಕೇಂದ್ರ ಸರ್ಕಾರವು ದೇಶಾದ್ಯಂತ ಒಟ್ಟು 13,352 ಆಧಾರ್ ನೋಂದಣಿ ಮತ್ತು ನವೀಕರಣ ಕೇಂದ್ರಗಳನ್ನು ಸ್ಥಾಪಿಸಿದೆ. ಆದರೆ ಆಧಾರ್ ಕಾರ್ಡ್ ನವೀಕರಿಸಲು ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಹೊರಬರಲು ಅಂಚೆ ಕಚೇರಿಗಳಲ್ಲಿಯೂ ಆಧಾರ್ ಸಂಬಂಧಿತ ಸೇವೆಗಳನ್ನು ಪಡೆಯಬಹುದು ಎಂದು ಇಂಡಿಯಾ ಪೋಸ್ಟ್ ತಿಳಿಸಿದೆ. ಆಧಾರ್ ಕೇಂದ್ರದ ಕೊರತೆಯಿಂದ ಆಧಾರ್ ಕಾರ್ಡ್ ನವೀಕರಿಸಲು ಉದ್ದನೆಯ ಸರತಿ ಸಾಲಿನಲ್ಲಿ ಕಾಯಬೇಕಾಗಿದೆ. ಇದನ್ನು ತಡೆಯಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜನರ ಅನುಕೂಲವನ್ನು…

Read More

ಅನ್ಯಾಯವಾಗಿ ಬೀದಿ ಪಾಲಾದೆ, ನ್ಯಾಯ ಕೊಡಿ- ಮಹಿಳೆ ಮಂಜಿ ಕುಲಾಲ್

ಉಡುಪಿ : ನನ್ನ ಗಂಡ ತೀರಿಕೊಂಡಿದ್ದು, ನನ್ನ ಗಂಡನ ಆಸ್ತಿ ಭೂಮಿ ಅನ್ಯಾಯವಾಗಿ ಕುಟುಂಬದ ಪಾಲಾಗಿ ನಾನು ಬೀದಿ ಪಾಲಾಗಿದ್ದೇನೆ. ನನಗೆ ಆಶ್ರಯ ನೀಡಿ ಎಂದು ದುಃಖಿಸಿದ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ. ಮಹಿಳೆ ಮಂಜಿ ಕುಲಾಲ್(75) ಗಂಡ ಕಾಲ ಕುಲಾಲ್ ರಾಗಿಜೆಡ್ಡು ಬೆಳ್ಳಾಳ ಕುಂದಾಪುರ ಮೂಲದವರಾಗಿದ್ದು, ಉಡುಪಿ ಕರಾವಳಿ ಬೈಪಾಸ್ ರಸ್ತೆ ಬಳಿ ದುಃಖಿಸುತ್ತಿದ್ದ ಮಾಹಿತಿ ಪಡೆದ ವಿಶು ಶೆಟ್ಟಿ ರಕ್ಷಿಸಿದ್ದಾರೆ. ಮಹಿಳೆಯು ತನ್ನ ಒಪ್ಪಿಗೆ…

Read More

ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌ ಆರಂಭ, ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟನೆ ನೀಡಲಿ: ಆರ್.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ….

Read More

ಗೋಲ್ ಗಪ್ಪಾ ಪ್ರಿಯರಿಗೆ ಶಾಕ್ – ಶೀಘ್ರದಲ್ಲೇ ಬ್ಯಾನ್?

ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್. ಗೋಲ್ ಗಪ್ಪಾ ಮೇಲೂ ನಿರ್ಬಂಧ ಬರಲಿದೆಯಾ ಅನ್ನೋ ಶಂಕೆ ಶುರುವಾಗಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಡ್ರೈವ್ ಮುಂದುವರೆದಿದೆ. ಗೋಬಿ ಮಂಚೂರಿ, ರೆಡ್ ವೆಲ್ವೆಟ್ ಕೇಕ್ ಆಯ್ತು ಇದೀಗ ಗೋಲ್ ಗಪ್ಪಾದ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು ಬಿದ್ದಿದೆ. ಬೀದಿ ಬದಿ ಗೋಲ್ ಗಪ್ಪಾ ತಿನ್ನೋರಿಗೆ ಹುಷಾರ್, ಗೋಲ್ ಗಪ್ಪಾದ ಕ್ವಾಲಿಟಿ ಮೇಲೆ ಆರೋಗ್ಯ ಇಲಾಖೆಗೆ ಸಾಕಷ್ಟು ದೂರು ಬಂದಿದೆಯಂತೆ. ಈ ಹಿನ್ನೆಲೆ ಗೋಲ್ ಗಪ್ಪಾವನ್ನ ಪರೀಕ್ಷೆಗೆ ಒಳಪಡಿಸಲು…

Read More

ಮಂಗಳೂರು: SSLC ಪಾಸಾದವರಿಗೆ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ.! ನವೆಂಬರ್ 20 ಕೊನೆಯ ದಿನಾಂಕ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆಗಳು :* ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಮಂಡಳಿಯ 10ನೇ ತರಗತಿ ಪಾಸ್‌ ಆಗಿರಬೇಕು. * ಬಾಹ್ಯ / ಮುಕ್ತ ವಿವಿ /ಮುಕ್ತ ಶಾಲೆಯ 10ನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ. ಮೆಸ್ಕಾಂ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ವೇತನ ವಿವರ : ವೇತನ ಶ್ರೇಣಿ – ರೂ. 28,550- 63000. ಮೊದಲು 3 ವರ್ಷ ತರಬೇತಿ…

Read More

ಬಜಪೆ: ವ್ಯಕ್ತಿಯ ಸಂಶಯಾಸ್ಪದ ಸಾವು – ನೀರಿನ ಟಾಂಕಿ ಬಳಿ ಶವ ಪತ್ತೆ

ಬಜಪೆ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕಿ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ಗುರುತಿಸಲಾಗಿದೆ. ಮೃತ ತಾರಾನಾಥ ಕಟೀಲು ಪರಿಸರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಭಾನುವಾರ ಬೆಳಗಿನ ಜಾವ ಕೊಂಡೆಮೂಲ ನೀರಿನ ಟ್ಯಾಂಕಿ ಬಳಿ ಮೃತನ ಕುತ್ತಿಗೆಯಲ್ಲಿ ಬಟ್ಟೆ ಒಣಗಿಸುವ ಕೇಬಲ್ ವೈರ್ ಪತ್ತೆಯಾಗಿದ್ದು ಕೊಲೆಗೈದ ಸ್ಥಿತಿಯಲ್ಲಿ ಸಂಶಯಾತ್ಮಕ ರೀತಿಯಲ್ಲಿ ಶವ…

Read More

ಮಂಗಳೂರು : ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ..! ಓರ್ವ ವಶಕ್ಕೆ : ಮತ್ತೋರ್ವ ಪರಾರಿ

ಮಂಗಳೂರು: ಸುರತ್ಕಲ್ ಸಮೀಪ ವಿಶ್ವ ಹಿಂದೂ ಪರಿಷತ್ ಕಾಟಿಪಳ್ಳ ಘಟಕದ ಕಾರ್ಯಕರ್ತರು  ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ ನಡೆಸಿದ ಘಟನೆ ಸುರತ್ಕಲ್ ನ ಕಾಟಿಪಳ್ಳ ಸಮೀಪ ಇಂದು ಮುಂಜಾನೆ ಸಂಭವಿಸಿದೆ. ಟೀಮ್ ಕರ್ಣ ಹಾಗೂ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಮಾಂಸ ಅಡ್ಡೆಗೆ ಕಾಟಿಪಳ್ಳದಲ್ಲಿ ಇಂದು ಮುಂಜಾನೆ ದಾಳಿ ನಡೆಸಿ  ಓರ್ವ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.  ಕಾರ್ಯಾಚರಣೆ ವೇಳೆ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಜರಂಗದಳದ ಕಾಟಿಪಳ್ಳ ಘಟಕದ…

Read More

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವಂಚನೆ..! 50 ಲಕ್ಷ ರೂ. ಖಾತೆಗೆ ವರ್ಗಾವಣೆ

ಮಂಗಳೂರು : ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ, ಅಕ್ಟೋಬರ್ .11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ವಿನಯ ಕುಮಾರ ಎಂದು ಪರಿಚಯಿಸಿಕೊಂಡಿದ್ದ ಕಿರುಕುಳದ ಬಗ್ಗೆ ನಿಮ್ಮ ಮೇಲೆ ದೂರು ದಾಖಲಾಗಿದೆ. ಠಾಣೆಗೆ ಬರಬೇಕು ಎಂದು ತಿಳಿಸಿದ . ಬಳಿಕ ಆಕಾಶ ಕುಲ್ಲಹಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ತಾನು ಸಿಬಿಐನಿಂದ ಕರೆ…

Read More

`ಡಿಜಿಟಲ್ ಅರೆಸ್ಟ್’ ತಪ್ಪಿಸುವುದು ಹೇಗೆ..? ಮನ್ ಕಿ ಬಾತ್ ನಲ್ಲಿ ಟ್ರಿಕ್ಸ್ ಹೇಳಿಕೊಟ್ಟ ಪ್ರಧಾನಿ ಮೋದಿ!

ನವದೆಹಲಿ : ಮನ್ ಕಿ ಬಾತ್ ನ 115ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಬಹುದೊಡ್ಡ ಸಮಸ್ಯೆಯೊಂದನ್ನು ಪ್ರಸ್ತಾಪಿಸಿ, ಸರಿಯಾದ ಡೆಮೊ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ವಂಚಕರ ಕಾರ್ಯವೈಖರಿಯನ್ನು ವಿವರಿಸುವ ಮೂಲಕ ದೇಶಾದ್ಯಂತ ನಾಯಿಕೊಡೆಗಳಂತೆ ಹರಡುತ್ತಿರುವ ಡಿಜಿಟಲ್ ಬಂಧನ ಪ್ರಕರಣಗಳ ಕುರಿತು 140 ಕೋಟಿ ದೇಶವಾಸಿಗಳನ್ನು ಎಚ್ಚರಿಸುವ ಮೂಲಕ ಪ್ರಧಾನಿ ಮೋದಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈಗ ಪ್ರಧಾನಿ ಮೋದಿಯವರ ಮಾತುಗಳನ್ನು ಕೇಳಿದ ನಂತರ ಭಾರತದಲ್ಲಿ ಡಿಜಿಟಲ್ ಬಂಧನದ ಬಗ್ಗೆ ಜನರು ಜಾಗರೂಕರಾಗುತ್ತಾರೆ…

Read More

ಮುಲ್ಕಿ: ರೈಲಿನಲ್ಲಿ ಯುವಕನೋರ್ವನನ್ನು ಹಣಕ್ಕಾಗಿ ಸುಲಿಗೆ ಮಾಡಿ ಕೊಲೆ..!

ಮುಲ್ಕಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನನ್ನು ಹಣಕ್ಕಾಗಿ ಸುಲಿಗೆ ಮಾಡಿ ಕೊಲೆ ಮಾಡಿರುವ ಬಗ್ಗೆ ಶುಕ್ರವಾರ ಮುಲ್ಕಿಯಲ್ಲಿ ರೈಲ್ವೆ ಬೋಗಿಯ ಮ್ಯಾನೇಜರ್ ಪರಿಶೀಲನೆ ನಡೆಸುವಾಗ ಕಂಡುಬಂದಿದ್ದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಎಂಬುವರ ಪುತ್ರ ಮೌಜಾಮ್( 35) ಎಂದು ಗುರುತಿಸಲಾಗಿದೆ. ಮೃತ ಮೌಜಾಮ್ ಸೇಲ್ಸ್ ರೆಪ್ ಕೆಲಸ ಮಾಡುತ್ತಿದ್ದ, ಈತ ಬೆಂಗಳೂರಿನಿಂದ ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದುರುಳರು ಈತನ ಹಣ ಬ್ಯಾಗ್ ಮೊಬೈಲ್ ಸುಲಿಗೆ…

Read More