ಮಂಗಳೂರು: Whatsapp ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..!

ಮಂಗಳೂರು:  ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ  ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ತಾನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಂಡೆ. ನಂತರ ಗ್ರೂಪ್ ಅಡ್ಮಿನ್ ಕಳುಹಿಸಿದ ಲಿಂಕ್ ಒತ್ತಿ ಅದಕ್ಕೂ ಜಾಯಿನ್ ಆದೆ. ಸೆಪ್ಟಂಬರ್ 1ರಿಂದ…

Read More

ತೊಕ್ಕೊಟು: ರೈಲ್ವೆ ಹಳಿ ಮೇಲೆ ಜಲ್ಲಿಕಲ್ಲು..! ಕಿಡಿಗೇಡಿಗಳ ಹೇಯ ಕೃತ್ಯದಿಂದ ತಪ್ಪಿದ ಬಾರಿ ಅನಾಹುತ

ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯರ ಮನೆಗಳಲ್ಲಿ ಕಂಪನದ ಅನುಭವ ಉಂಟಾಗಿದ್ದು, ಜನರು ಭಯಕ್ಕೆ ಕಾರಣವಾಗಿದೆ. ಬಾರಿ ಸದ್ದು ಉಂಟಾಗಿದ್ದರಿಂದ ಸ್ಥಳೀಯರು ಟಾರ್ಚ್ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ….

Read More

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

Read More

ಈ ಸಂದರ್ಭದಲ್ಲಿ ತಂದೆ-ತಾಯಿಯ ಆಸ್ತಿಯಲ್ಲಿ ಮಕ್ಕಳಿಗೆ ಹಕ್ಕು ಇರುವುದಿಲ್ಲ : ಹೊಸ ಷರತ್ತುಗಳೇನು ತಿಳಿಯಿರಿ

ನವದೆಹಲಿ : 2024 ರಲ್ಲಿ ಆಸ್ತಿ ಕಾನೂನುಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ, ಪುತ್ರಿಯರಿಗೆ ಪೂರ್ವಜರ ಆಸ್ತಿಯಲ್ಲಿ ಪುತ್ರರಂತೆ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಪೋಷಕರ ಸ್ವ-ಸ್ವಾಧೀನದ ಆಸ್ತಿಯ ಮೇಲಿನ ಮಕ್ಕಳ ಹಕ್ಕು ರದ್ದುಗೊಳಿಸಲಾಗಿದೆ ಮತ್ತು ಅವರ ಆಸ್ತಿಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಪೋಷಕರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಒದಗಿಸಲಾಗಿದೆ. ಶತಮಾನಗಳಿಂದ ಭಾರತದಲ್ಲಿ ಕುಟುಂಬ ಮತ್ತು ಆಸ್ತಿಯ ವಿಷಯಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಸಾಮಾಜಿಕ ಮತ್ತು ಕಾನೂನು ದೃಷ್ಟಿಕೋನದಿಂದ, ಆಸ್ತಿ ಹಕ್ಕುಗಳು ಕುಟುಂಬ ಸಂಬಂಧಗಳಲ್ಲಿ ಬಿರುಕುಗಳನ್ನು ಬಲಪಡಿಸಲು ಅಥವಾ ಕೆಲವೊಮ್ಮೆ ಬಿರುಕುಗಳನ್ನು…

Read More

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ..!

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಮೇಲೆ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಆರ್‌ಟಿಐ ಕಾರ್ಯಕರ್ತ ಗಂಗರಾಜು ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್‌ 29 ರಂದು ಸಿಎಂ ಪತ್ನಿ ಪಾರ್ವತಮ್ಮ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ‌ ಸ.ನಂ 454ರ ಗಣೇಶ್ ದೀಕ್ಷಿತ್ ಎಂಬವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗ ಅದು. ಅದರಲ್ಲಿ 20 ಗುಂಟೆ…

Read More

ಉಡುಪಿ: ಮತ್ತೋರ್ವ ಬಾಂಗ್ಲಾ ಅಕ್ರಮ ಪ್ರಜೆ ಅರೆಸ್ಟ್..!

ಉಡುಪಿ ಜಿಲ್ಲೆಯಲ್ಲಿ ಮತ್ತೆ ಓರ್ವ ಅಕ್ರಮ ಬಾಂಗ್ಲಾ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ವ್ಯಕ್ತಿಯನ್ನು ಮಹಮ್ಮದ್ ಜಹಾಂಗೀರ್ ಆಲಂ ( 24) ಎಂದು ಗುರುತಿಸಲಾಗಿದೆ. ಆತನನ್ನು  ನ್ಯಾಯಾಧೀಶರ ಮುಂದೆ…

Read More

ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಗುಂಡಿಕ್ಕಿ ಕಡವೆ ಹತ್ಯೆ – ಕೋವಿ ಮತ್ತು ಮಾಂಸ ವಶಕ್ಕೆ

ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡ ಘಟನೆ ಸಂಭವಿಸಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ…

Read More

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ, ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ- ಇಬ್ಬರು ಆರೋಪಿಗಳ ಬಂಧನ..!

ಬೆಳ್ತಂಗಡಿ: ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಮದ್ದಡ್ಕದ ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದೆ. ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋಮಾತೆ ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದೆಂದು ಸುದ್ದಿ ಹರಡುತ್ತಿದೆ. ಬಂಧಿತ ಆರೋಪಿಗಳನ್ನು ಸಚಿನ್ ಬಣ್ಕಲ್‌‌‌ ಹಾಗೂ ಅಶ್ವತ್ ಎಂದು ಗುರುತುಸಲಾಗಿದೆ. ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು…

Read More

ಕಟ್ಟಡ ಕಾರ್ಮಿಕರೇ ಗಮನಿಸಿ : ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!

ಬೆಂಗಳೂರು : ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕರ ಕಾರ್ಡ್ ಗಳನ್ನು ನವೀಕರಿಸುವುದು ಕಡ್ಡಾಯವಾಗಿದ್ದು, ನವೀಕರಣಕ್ಕೆ ಕಾರ್ಮಿಕ ಇಲಾಖೆ ಅರ್ಜಿ ಆಹ್ವಾನಿಸಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಉದ್ಯೋಗ ದೃಢೀಕರಣ ಪತ್ರ, ಸ್ವಯಂ ದೃಢೀಕರಣ ಪತ್ರ, ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್, ಆಧಾರ್ ಕಾರ್ಡ್ ಪ್ರತಿಗಳನ್ನು ನೀಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು. ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣ ಮಾಡಿಕೊಳ್ಳಲು ಬೇಕಾದ ಅಗತ್ಯ ದಾಖಲೆಗಳು * ಉದ್ಯೋಗ ದೃಢೀಕರಣ ಪತ್ರ * ಸ್ವಯಂ ದೃಢೀಕರಣ…

Read More

ಪುತ್ತೂರು: ಬಡ ಮಹಿಳೆಯ ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು..! ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ

ಪುತ್ತೂರು: ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಸಾರಪುಣಿಪಾದಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ನ ನಿವಾಸಿ ಪದ್ಮಾವತಿ ಹಾಗೂ ಅವರ 8 ವರ್ಷದ ಪುತ್ರ ವಾಸ್ತವ್ಯವಿದ್ದ, ಶೀಟ್ ಅಳವಡಿಸಿರುವ ಗುಡಿಸಲು ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಅವಘಡದಿಂದ ಮನೆಯೊಳಗೆ ಬ್ಯಾಗ್‌ನಲ್ಲಿ ಇರಿಸಿದ್ದ 15 ಸಾವಿರ ನಗದು,  ಆಧಾರ್ ಕಾರ್ಡ್ ಸಹಿತ ದಾಖಲೆ ಪತ್ರಗಳು, ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಗೋಡೆ ಇಲ್ಲದ ಗುಡಿಸಲಿನ ಸುತ್ತ…

Read More