Headlines

ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ ಘೋಷಿಸಿದ ‘ಶಿಂಧೆ ಸೇನಾ’ ಶಾಸಕ

ಮುಂಬೈ: ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂ.ಗಳನ್ನು ನೀಡುವುದಾಗಿ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾನ್ಕುಲೆ ಅವರು ಶಾಸಕರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದರು. ಬಿಜೆಪಿ ರಾಜ್ಯದಲ್ಲಿ ಶಿವಸೇನೆ ನೇತೃತ್ವದ ಸರ್ಕಾರದ ಒಂದು ಭಾಗವಾಗಿದೆ. “ರಾಹುಲ್ ಗಾಂಧಿ ಅವರು ವಿದೇಶದಲ್ಲಿದ್ದಾಗ, ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಬಯಸುತ್ತೇನೆ ಎಂದು ಹೇಳಿದರು. ಇದು ಕಾಂಗ್ರೆಸ್ನ ನಿಜವಾದ ಮುಖವನ್ನು…

Read More

ಪ್ಯಾಲೆಸ್ಟೀನ್ ಬಾವುಟ ಹಿಡಿದು ಬೈಕ್‌ನಲ್ಲಿ ಸಂಚರಿಸುತ್ತಿದ್ದ 6 ಮಂದಿ ವಶಕ್ಕೆ..!

ಚಿಕ್ಕಮಗಳೂರು : ಪ್ಯಾಲೆಸ್ಟೀ ನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಪ್ಯಾಲೆಸ್ಟೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ಖಾಸಗಿ ಬಸ್ ನ ಸ್ಟೇರಿಂಗ್ ಕಟ್ ಆಗಿ ಮರಕ್ಕೆ ಢಿಕ್ಕಿ..!

ಮಂಗಳೂರು: ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆ ಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.

Read More

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ, ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

 ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಭಾನುವಾರ ಆಟವಾಡುತ್ತಿದ್ದ ಸಂದರ್ಭದಲ್ಲಿ ಟ್ರಂಪ್ ಅವರನ್ನು ಗುರುಯಾಗಿಸಿ ಗುಂಡಿನ ದಾಳಿ ನಡೆಸಲಾಗಿದ್ದು ಅದೃಷ್ಟವಶಾತ್ ಗುಂಡಿನ ದಾಳಿಯಿಂದ ಟ್ರಂಪ್ ಬಚಾವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಕಳೆದ ಒಂದು ತಿಂಗಳ ಹಿಂದೆಯಷ್ಟೇ ಗುಂಡಿನ ದಾಳಿ ನಡೆದಿತ್ತು ಈ ವೇಳೆ ಟ್ರಂಪ್ ಅವರ ಕಿವಿಗೆ ಗಾಯವಾಗಿತ್ತು. ಈ ನಡುವೆ ಭಾನುವಾರ…

Read More

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್‌ವೆಲ್‌‌‌

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್‌ವೆಲ್‌‌‌ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಶರಣ್ ಪಂಪ್‌ ವೆಲ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್‌ ಹಾಗೂ ಪುರಸಭೆಯ ಸದಸ್ಯ ಹಸೈನಾ‌ರ್ ಅವಾಚ್ಯ ಶಬ್ದದಿಂದ ಬೈದು ಸೋಮವಾರದಂದು ಈದ್‌ಮಿಲಾದ್ ಪ್ರಯುಕ್ತ ಬಿ.ಸಿ ರೋಡ್‌ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಡು,…

Read More

ಮಂಗಳೂರು: ದರ್ಶನ್ ಡಿ ಕೋಟ್ಯಾನ್ ಭೂ ಸೇನೆಯ ಹಾರ್ಮರ್ಡ್ ವಿಭಾಗದಲ್ಲಿ ಲೆಫ್ಟಿನೆಂಟ್ ಆಗಿ ನೇಮಕ

ಮಂಗಳೂರು: ಕರಾವಳಿ ಮೂಲದ ಯುವಕ ಭಾರತೀಯ ಭೂ ಸೇನೆಗೆ ಹಾರ್ಮಡ್ ವಿಭಾಗದಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಮೂಲತಃ ಅತ್ತಾವರ ಇವಾಗ ಕುಲಶೇಖರದ ನಿವಾಸಿಯಾಗಿರುವ ದಯಾನಂದ್ ಹಾಗೂ KMC ಯ ಸ್ಟಾಪ್ ನರ್ಸ್ ಯಶಪ್ರಭರವರ ಪುತ್ರ ದರ್ಶನ್ ಡಿ ಕೋಟ್ಯಾನ್ ಮಂಗಳೂರಿನ ರೋಶನಿ ನಿಲಯದಲ್ಲಿ ಪ್ರಾಥಮಿಕ ಶಿಕ್ಷಣಗೈದಯ ಕೆನಾರ ಹೈಸ್ಕೂಲಿನಲ್ಲಿ SSLC ಮತ್ತು ಅಲೋಶಿಯಸ್ ಕಾಲೇಜುನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದರು. ಇಂಜಿನಿಯರಿಂಗ್ ಮುಗಿಸಿ ಉತ್ತಮ ನೌಕರಿ ಪಡೆದಿದ್ದರು ದೇಶ ಕಾಯುವ ಸೇವೆಯನ್ನು…

Read More

ಬಂಟ್ವಾಳ : ಹಿಂದೂ ದೈವ ದೇವರುಗಳ ವ್ಯಂಗ್ಯವಾಗಿ ಚಿತ್ರಿಕರಿಸಿ ಅವಹೇಳನ-  ಕಠಿಣ ಕ್ರಮಕ್ಕೆ VHP ವತಿಯಿಂದ ಠಾಣೆಗೆ ದೂರು

ಬಂಟ್ವಾಳ :ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರಿಕರಿಸಿ, ಅವಹೇಳನಾಕಾರಿ ಪೋಸ್ಟ್ ಮಾಡಿದ ತಪ್ಪಿತಸ್ಥರಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಠಾಣೆಗೆ ದೂರು ನೀಡಲಾಗಿದೆ. ಹಿಂದೂ ಧರ್ಮದ ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರೀಕರಿಸಿ ಅಸಹ್ಯ ಹಾಡುಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ…

Read More

CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ನವದೆಹಲಿ : ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಎರಡು ದಿನಗಳ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಎರಡು ದಿನಗಳ ನಂತರ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ, ಜನರು ತೀರ್ಪು…

Read More

 ಪೊಲೀಸ್ ವ್ಯಾನ್ ನಲ್ಲಿ ಗಣೇಶ: ಪ್ರಧಾನಿ ಮೋದಿ, ಬಿಜೆಪಿ, VHP ಆಕ್ರೋಶ

ಬೆಂಗಳೂರು: ವಿಘ್ನಹರ್ತ ಅಥವಾ ಅಡೆತಡೆಗಳನ್ನು ನಿವಾರಿಸುವವನು ಎಂದು ಕರೆಯಲ್ಪಡುವ ಗಣೇಶನ ವಿಗ್ರಹವನ್ನು ಬೆಂಗಳೂರಿನಲ್ಲಿ ಪ್ರತಿಭಟನಾಕಾರರೊಂದಿಗೆ ಪೊಲೀಸ್ ವ್ಯಾನ್ ಒಳಗೆ ಕೂರಿಸಲಾಯಿತು. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ನಡೆದ ದಾಳಿಯನ್ನು ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಬಳಿ ಜಮಾಯಿಸಿದ ಬಂಧಿತ ಪ್ರತಿಭಟನಾಕಾರರನ್ನು ಸಾಗಿಸಲು ನಿಯೋಜಿಸಲಾಗಿದ್ದ ವಾಹನದೊಳಗೆ ವಿಗ್ರಹದ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ. ಭಾರತೀಯ ಜನತಾ ಪಕ್ಷ ಮತ್ತು ವಿಶ್ವ ಹಿಂದೂ ಪರಿಷತ್ ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ “ಬಂಧಿತರಲ್ಲಿ ದೇವರು ಕೂಡ ಇದ್ದಾನೆ” ಎಂದು…

Read More

 ಬಿಗ್ ಶಾಕ್ : `ನಂದಿನಿ ಹಾಲಿನ ದರ’ 2 ರೂ. ಏರಿಕೆ..!

ಬೆಂಗಳೂರು ; ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್, ಕೆಎಂಪ್ ನಂದಿನಿ ಹಾಲು ದರವನ್ನು ಪ್ರತಿ ಲೀಟರ್ ಗೆ 1 ರಿಂದ 2 ರೂ.ವರೆಗೆ ಹೆಚ್ಚಳ ಮಾಡಲು ಸಿದ್ಧತೆ ನಡೆಸಲಾಗಿದೆ. ನಂದಿನಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಪ್ರತಿ ಲೀಟರ್ ಹಾಳಿನ ದರವನ್ನು 1 ರಿಂದ 2 ರೂ.ವರೆಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಯಾವುದೇ…

Read More