ದ.ಕ. ಜಿಲ್ಲೆಯಲ್ಲಿ ಪಡಿತರ ವಿತರಣೆ ಆರಂಭ..!
ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆಅಕ್ಟೋಬರ್ ತಿಂಗಳ ಪಡಿತರ ವಿತರಣೆಯು ಆರಂಭಗೊಂಡಿದೆ.ಸರ್ವರ್ ಅಳವಡಿಕೆಯಿಂದಾಗಿ ಈ ತಿಂಗಳ ಪಡಿತರ ವಿತರಣೆಯು ವಿಳಂಬವಾಗಿತ್ತು. ಈ ತಿಂಗಳ ಪಡಿತರವನ್ನು ಅ.31 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಳ್ಳದೆ ಆಧಾರ್ ಬಯೋಮೆಟ್ರಿಕ್ ಮೂಲಕ ಪಡಿತರ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

