ದ.ಕ. ಜಿಲ್ಲೆಯಲ್ಲಿ ಪಡಿತರ ವಿತರಣೆ ಆರಂಭ..!

ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆಅಕ್ಟೋಬರ್‌ ತಿಂಗಳ ಪಡಿತರ ವಿತರಣೆಯು ಆರಂಭಗೊಂಡಿದೆ.ಸರ್ವರ್‌ ಅಳವಡಿಕೆಯಿಂದಾಗಿ ಈ ತಿಂಗಳ ಪಡಿತರ ವಿತರಣೆಯು ವಿಳಂಬವಾಗಿತ್ತು. ಈ ತಿಂಗಳ ಪಡಿತರವನ್ನು ಅ.31 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಳ್ಳದೆ ಆಧಾರ್‌ ಬಯೋಮೆಟ್ರಿಕ್‌ ಮೂಲಕ ಪಡಿತರ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.    

Read More

ಹಮಾಸ್‌ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ಹಾರ್‌ ಹತ್ಯೆ..!

ಗುರುವಾರ ಗಾಜಾದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್‌ ನ ಹಮಾಸ್‌ ಉಗ್ರ ಸಂಘಟನೆ, ರಾಜಕೀಯ ಬ್ಯೂರೋದ ನಾಯಕ ಯಾಹ್ಯಾ ಸಿನ್ವಾರ್ ಕೊಲ್ಲಲ್ಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಇಸ್ರೇಲಿ ಸೇನೆಯು ಹೇಳಿದೆ. ಗಾಜಾ ಪಟ್ಟಿಯಲ್ಲಿ ಐಡಿಎಫ್ ಯೋಧರು ನಡೆಸಿದ ಚಟುವಟಿಕೆಯಲ್ಲಿ ಮೂವರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಐಡಿಎಫ್ ಮತ್ತು ಶಿನ್ ಬೆಟ್ ಭಯೋತ್ಪಾದಕರಲ್ಲಿ ಒಬ್ಬರು ಯಾಹ್ಯಾ ಸಿನ್ವಾರ್ ಆಗಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ, ಭಯೋತ್ಪಾದಕರ ಗುರುತನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲಿ ರಕ್ಷಣಾ ಪಡೆ…

Read More

ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ- ಮಗುವಿನ ಡಿಎನ್ಎ ರಿಪೋರ್ಟ್ ನಲ್ಲಿ ತಿಳಿದು ಬಂತು ಅಸಲಿ ಸತ್ಯ..!

ಮಂಗಳೂರು: ಎರಡು ತಿಂಗಳ ಹಿಂದೆ ಮಂಗಳೂರಿನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡಿದ್ದು, ಮಗುವಿನ ಡಿಎನ್ಎ ರಿಪೋರ್ಟ್ ಸಲ್ಲಿಕೆಯಾಗಿದ್ದು, ಸಂತ್ರಸ್ತೆಯ ಮಗು ಅದೇ ಅನ್ನುವುದು ಇದೀಗ ಡಿಎನ್ಎ ವರದಿಯಲ್ಲಿ ಬಹಿರಂಗವಾಗಲಿದೆ. ಅಕ್ಟೋಬರ್ 18 ರಂದು ಪಾಣೆಮಂಗಳೂರು ನಿವಾಸಿ, ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ ಎರಡನೇ ಹೆರಿಗೆಗಾಗಿ ಲೇಡಿಗೋಷನ್ ಆಸ್ಪತ್ರೆಗೆ ದಾಖಲಾಗಿದ್ದರು. ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ವೇಳೆ ಆಸ್ಪತ್ರೆಯ ವೈದ್ಯರು ಮಗು ನಾರ್ಮಲ್ ಆಗಿದೆ ಎಂದು…

Read More

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ – ಬಿಹಾರ ಮೂಲದ ಆರೋಪಿ ಅರೆಸ್ಟ್, 1.50ಕೆಜಿ ಗಾಂಜಾ ವಶಕ್ಕೆ

ಮಂಗಳೂರು: ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು ತಿರುಗಾಡುತ್ತಿದ್ದರು‌. ಈ ವೇಳೆ ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನು ಪೊಲಿಸ್ ಜೀಪ್ ಅನ್ನು ಕಂಡ ತಕ್ಷಣ ಓಡಲು ಯತ್ನಿಸಿದ್ದಾನೆ‌‌. ಆತನನ್ನು ಪೊಲೀಸರು ಹಿಡಿದು ವಿಚಾರಿಸಿದರೆ, ಆತನು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ. ಓಡಿ…

Read More

ಹಿಂದೂಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ – ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅರೋಪ

ಮಂಗಳೂರು: ಕಾಂಗ್ರೆಸ್ ಸರಕಾರದಿಂದ ಪೊಲೀಸರನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರನ್ನ ಹೆದರಿಸುವ ಪ್ರಯತ್ನ ರಾಜ್ಯದಲ್ಲಿ ಆರಂಭವಾಗಿದ್ದು ಹಿಂದೂಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಪೊಲೀಸ್ ಅಧಿಕಾರಿಯಿಂದಲೂ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ಇತ್ಯರ್ಥವಾಗುವ ಹೊತ್ತಲ್ಲಿ ಪೊಲೀಸ್ ಅಧಿಕಾರಿ ನೇರವಾಗಿ ಹಿಂದೂ ಕಾರ್ಯಕರ್ತನ ಮೇಲೆ ಕೈ ಮಾಡಿದ್ದಾರೆ. ಪೊಲೀಸ್ ಠಾಣೆಯ ಒಳಗಡೆ ಕೂಡ ಯಾರಿಗೂ ಸುರಕ್ಷತೆ ಇಲ್ಲದ…

Read More

ಉಳ್ಳಾಲ: ಇನ್‌ಸ್ಪೆಕ್ಟರ್ ಕೊಠಡಿಯೊಳಗಡೆಯೇ ಬಜರಂಗದಳ ಮುಖಂಡನಿಗೆ ಅನ್ಯ ಮತೀಯನಿಂದ ಹಲ್ಲೆ- ಆರೋಪಿ ಅರೆಸ್ಟ್

ಉಳ್ಳಾಲ: ವಾಹನಗಳ ನಡುವೆ ನಡೆದ ಅಪಘಾತದಲ್ಲಿ ವಿಭಿನ್ನಕೋಮಿನ ಚಾಲಕರಿಬ್ಬರ ಮಧ್ಯೆ ನಡೆದ ಹೊಯ್ ಕೈ ಪ್ರಕರಣವು ಉಳ್ಳಾಲ ಠಾಣೆಯ ಮೆಟ್ಟಿಲೇರಿತ್ತು. ಇದರ ಮಾತುಕತೆಗೆ ತೆರಳಿದ್ದ ಬಜರಂಗದಳ ಮುಖಂಡನ ಮೇಲೆ ಪೊಲೀಸ್ ಇನ್ಸ್‌ಪೆಕ್ಟ‌ರ್ ಕೊಠಡಿಯೊಳಗೆ ಅನ್ಯಮತೀಯನೊಬ್ಬ ಹಲ್ಲೆಗೈದ ಘಟನೆ  ಬುಧವಾರ ರಾತ್ರಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಜರಂಗದಳದ ಉಳ್ಳಾಲ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಹಲ್ಲೆಗೊಳಗಾದವರು. ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಂಬಾರು ಸರಕಾರಿ ಶಾಲೆಯ ಬಳಿಯ ನಿವಾಸಿ ಮಹಮ್ಮದ್ ಆಸಿಫ್(33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ….

Read More

ಹಿಂದೂ ಹುಡುಗಿಯರ ಬಗ್ಗೆ ಅವಹೇಳನ ಹೇಳಿಕೆ: ಮತ್ತೆ ನಾಲಿಗೆ ಹರಿಯಬಿಟ್ಟ ಅರಣ್ಯಾಧಿಕಾರಿ ಸಂಜೀವ ಪೂಜಾರಿ- ದೂರು ದಾಖಲು

ಮಂಗಳೂರು: ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂದು ಹೇಳಿಕೆ ನೀಡಿರುವ ಕಾಣಿಯೂರಿನ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ದ ಹಿಂದೂ ಜಾಗರಣ ವೇದಿಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅರಣ್ಯಧಿಕಾರಿಯಾಗಿ ಪಂಜದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂಜೀವ ಪೂಜಾರಿ ಹಿಂದೂ ಸಮಾಜದ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ…

Read More

‘ಕಾನೂನು ಕುರುಡಲ್ಲ’ ಎಂಬ ಸಂದೇಶ ಸಾರಿದ ಸುಪ್ರೀಂ : ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆ ಅನಾವರಣ

ನವದೆಹಲಿ: ಲೇಡಿ ಆಫ್ ಜಸ್ಟಿಸ್ ನ್ಯಾಯದೇವತೆ ಪ್ರತಿಮೆಯ ಮೇಲಿನ ಕಣ್ಣಿಗೆ ಪಟ್ಟಿಯನ್ನು ತೆಗೆದುಹಾಕಲಾಗಿದೆ. ಆಕೆಯ ಎಡಗೈಯಲ್ಲಿ ಕತ್ತಿಯ ಬದಲಾಗಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ. ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆಯ ಪ್ರತಿಮೆಯ ಬದಲು ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆಯನ್ನು ಸುಪ್ರೀಂ ಕೋರ್ಟ್​ನಲ್ಲಿ ಅನಾವರಣಗೊಳಿಸಲಾಗಿದೆ. ಈ ಹಿಂದಿನ ಪ್ರತಿಮೆಯ ಕೈಯಲ್ಲಿದ್ದ ಕತ್ತಿಯ ಬದಲಾಗಿ ಹೊಸ ನ್ಯಾಯದೇವತೆಯ ಕೈಯಲ್ಲಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ. ಕಾನೂನು ಕುರುಡಲ್ಲ ಎಂಬ ಸಂದೇಶ ಸಾರುವ ಸಲುವಾಗಿ ಈ ಹೊಸ ಪ್ರತಿಮೆ ನಿರ್ಮಿಸಲಾಗಿದೆ ಎಂದು…

Read More

‘ಪೌರತ್ವ ಕಾಯ್ದೆ’ 1955ರ ಸೆಕ್ಷನ್ 6ಎ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್.!

‘ಪೌರತ್ವ ಕಾಯ್ದೆ 1955ರ ಸೆಕ್ಷನ್ 6ಎ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಸ್ಸಾಂ ಒಪ್ಪಂದವನ್ನು ಅಂಗೀಕರಿಸಿದ ಪೌರತ್ವ ಕಾಯ್ದೆ 1955 ರ ಸೆಕ್ಷನ್ 6 ಎ ಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಇಂದು 4:1 ಬಹುಮತದಿಂದ ಎತ್ತಿಹಿಡಿದಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಂ.ಎಂ.ಸುಂದರೇಶ್, ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಿದೆ. ನ್ಯಾಯಮೂರ್ತಿ ಪರ್ಡಿವಾಲಾ ಅವರು ಸೆಕ್ಷನ್ ೬ ಎ ಅನ್ನು ಅಸಾಂವಿಧಾನಿಕ…

Read More

ಕಾರ್ಕಳ: ಮತ್ತೆ ಇಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ಪೊಲೀಸರ ವಶಕ್ಕೆ- ಎಸ್ಪಿ ಡಾ। ಅರುಣ್

ಕಾರ್ಕಳ: ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಯುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಓರ್ವನನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವ ಮಾಹಿತಿ ಬಂಧಿತರಿಂದ ಸಿಕ್ಕಿದ್ದು, ಅದರಂತೆ ತೀವ್ರ ವಿಚಾರಣೆ ನಡೆಯುತ್ತಿದೆ. ಕಾರ್ಕಳದಲ್ಲಿ ವಶಕ್ಕೆ ಪಡೆದವರನ್ನು…

Read More