ಮಂಗಳೂರು: ಕಾರು ಢಿಕ್ಕಿಯಾಗಿ ಸ್ಕೂಟರ್ ಸವಾರ ಸಾವು
ಮಂಗಳೂರು: ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ನಗರ ಮಾರ್ನಮಿಕಟ್ಟೆ ಸಮೀಪ ಸಂಭವಿಸಿದೆ. ಸಾವನ್ನಪ್ಪಿದ ಯುವಕ ಸಚಿನ್ (29) ಎಂದು ತಿಳಿಯಲಾಗಿದೆ. ತನ್ನ ಸಂಬಂಧಿ ನಿರೀಕ್ಷ್ (14)ನನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಶಕ್ತಿನಗರದಿಂದ ಮಂಗಳಾದೇವಿ ಕಡೆಗೆ ಹೋಗಿದ್ದಾರೆ. ರಾತ್ರಿ 9.10ರ ವೇಳೆಗೆ ಮಾರ್ನಮಿಕಟ್ಟೆಯ ಪೋಸ್ಟ್ ಆಫೀಸ್ ಸಮೀಪ ತಲುಪುತ್ತಿದ್ದಂತೆ ಎದುರುಗಡೆಯಿಂದ ಕಾರೊಂದನ್ನು ಅದರ ಚಾಲಕನು ನಿರ್ಲಕ್ಷ್ಯತನದಿಂದ ಅತಿ ವೇಗವಾಗಿ ಚಲಾಯಿಸುತ್ತಾ ರಸ್ತೆಯ ತೀರಾ ಬಲ ಭಾಗಕ್ಕೆ ಬಂದು ಸ್ಕೂಟರಿಗೆ ಢಿಕ್ಕಿ ಹೊಡೆದು ಸ್ಥಳದಿಂದ…

