ಮಂಗಳೂರು: ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಇಂದು ಮತ್ತೆ ಮೂವರನ್ನು ಬಂಧಿಸಿದ CCB ಪೊಲೀಸರು
ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್…

