ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 6ಕೋಟಿಯ ಎಂಡಿಎಂಎನೊಂದಿಗೆ ನೈಜೀರಿಯಾ ಪ್ರಜೆ ಸೆರೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕದ್ರವ್ಯ ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಂಗಳೂರಿನ ದೊಮ್ಮಸಂದ್ರದ ವಿವೇಕಾನಂದ ನಗರದಲ್ಲಿ ವಾಸವಿರುವ ಪೀಟರ್ ಇಕೆಡಿ ಬೆಲೊನ್ವು(38) ಎಂಬ ನೈಜೀರಿಯಾ ಪ್ರಜೆ ಬಂಧಿತ ಆರೋಪಿ ಸೆಪ್ಟೆಂಬರ್ 29ರಂದು ನಗರದ ಪಂಪ್‌ವೆಲ್ ಬಳಿ ಎಂಡಿಎಂಎ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ತೊಕ್ಕೊಟ್ಟು,…

Read More

ಮೂಲ್ಕಿ : ಕಾರಿನಲ್ಲಿ ಆಕಸ್ಮಿಕ ಬೆಂಕಿ..! ಪ್ರಯಾಣಿಕರು ಅಪಾಯದಿಂದ ಪಾರು

ಮೂಲ್ಕಿ : ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ‌ಮುಂಭಾಗ ನಡೆದಿದೆ. ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೊರ್ವ ಮಹಿಳೆ‌ಮತ್ತು ಎರಡು‌ ಮಕ್ಕಳೊಂದಿಗೆ ಕಿನ್ನಿಗೋಳಿ‌ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ. ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು  ಕೂಡಲೇ ಸ್ಥಳೀಯರು…

Read More

ಅಕ್ಟೋಬರ್ 13ರಂದು ಪೊಸಳ್ಳಿ ಕುಲಾಲ ಭವನದಲ್ಲಿ ಪುದ್ದರ್ ಲೇಸ್ದ ಗೌಜಿ, ವಿದ್ಯಾರ್ಥಿವೇತನ ವಿತರಣೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಇಲ್ಲ್ ದಿಂಜಾವುನ ಪೊರ್ಲು, ಪುದ್ದರ್ ಲೇಸ್ದ ಗೌಜಿ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಅಕ್ಟೋಬರ್ 13ರಂದು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.ಬೆಳಿಗ್ಗೆ ತುಳುನಾಡಿನ ಸಂಪ್ರದಾಯವಾದ ಭತ್ತದ ತೆನೆಗೆ ಪೂಜೆ ಮಾಡಿ ಮನೆ ತುಂಬಿಸುವ ಕಾರ್ಯಕ್ರಮ ಇಲ್ಲ್ ದಿಂಜಾವುನ ಪೊರ್ಲು ನಡೆಯಲಿದೆ. ನಂತರ ನಡೆಯುವ ನಡೆಯುವ ಸಭಾಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ, ನಿರಂತರ ವಿದ್ಯಾರ್ಥಿ ವೇತನ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ…

Read More

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್‌ ಬಾವಾ ಸಹೋದರನ ಶವ ಪತ್ತೆ..!

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ ನಗರದ ಖಾಸಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ…

Read More

ಗುರುಪುರ ಫಲ್ಗುಣಿ ನದಿಗೆ ಹಾರಿದ ರಮೇಶ್ ಕುಲಾಲ್ ರವರ ಮೃತದೇಹ ಪತ್ತೆ…!

ಮಂಗಳೂರು: ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ನಿವಾಸಿ ರಮೇಶ್ ಕುಲಾಲ್ ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಇಂದು ಮೃತದೇಹ ಪತ್ತೆಯಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ ಗುರುಪುರ ಸೇತುವೆ ಬಳಿ ಆಗಮಿಸಿ ಸೇತುವೆ ಮೇಲೆ ಮೊಬೈಲ್ ಮತ್ತು ಚಪ್ಪಲಿಯನ್ನಿಟ್ಟು ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ನಡೆಸಿದರು. ರಮೇಶ್ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಗುರುಪುರ ಫಲ್ಗುಣಿ ನದಿಗೆ ಹಾರಿರುವ ಶಂಕೆ: ಬಡಗ ಎಡಪದವು ನಿವಾಸಿ ರಮೇಶ್ ಕುಲಾಲ್ ನಾಪತ್ತೆ..!

ಮಂಗಳೂರು: ವ್ಯಕ್ತಿಯೊಬ್ಬರು ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಈ ಬಗ್ಗೆ  ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ ಗುರುಪುರ ಸೇತುವೆ ಬಳಿ ಆಗಮಿಸಿ ಸೇತುವೆ ಮೇಲೆ ಮೊಬೈಲ್ ಮತ್ತು ಚಪ್ಪಲಿಯನ್ನಿಟ್ಟು ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.  ರಮೇಶ್ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಬಜ್ಪೆ ಪೊಲೀಸ್…

Read More

ಮಂಗಳೂರು: ಖಾಸಗಿ ಬಸ್ಸಿಗೆ “ಇಸ್ರೇಲ್ ಟ್ರಾವೆಲ್ಸ್ “ಹೆಸರು – ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಮುಲ್ಕಿ ಮೂಡುಬಿದ್ರೆ ರೂಟ್‌ನಲ್ಲಿ ಸಂಚರಿಸುತ್ತಿರುವ ಕಟೀಲು ಮೂಲದ ಲೆಸ್ಟರ್ ಟ್ರಾವೆಲ್ಸ್ ತಮ್ಮ ನೂತನ ಬಸ್ಸಿಗೆ “ಇಸ್ರೇಲ್” ಎಂಬ ನಾಮಫಲಕ ಹಾಕಿದ್ದು ವಿವಾದಕ್ಕೆ ಕಾರಣವಾಗಿ ಒಂದು ವರ್ಗದ ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಬಸ್ಸಿನ ಯಜಮಾನ ಏಕಾಏಕಿ ಮರುದಿನವೇ ಬತ್ತಿನ ನಾಮಫಲಕವನ್ನು ಜೆರುಸಲೇಮ್‌ಗೆ ಬದಲಾಯಿಸಿದ್ದಾರೆ. ಬ್ರಿಟಿಷರು ಬಿಟ್ಟು ಹೋದ ಇಸ್ರೇಲ್ ಭಾಗಕ್ಕಾಗಿ ಪ್ಯಾಲೆಸ್ತೀನ್ ಹಾಗೂ ಇಸ್ರೇಲ್ ನಡುವೆ ಆಗಾಗ ಸಂಭವಿಸುತ್ತಿದ್ದು, ಈ ಬಗ್ಗೆ ಭಾರತದಲ್ಲಿ ರಾಜಕೀಯ ಚರ್ಚೆ ಕೂಡ ಕಳೆದ ಬಾರಿ ವಿಪರೀತಕ್ಕೆ…

Read More

ಅರುಣ್ ಉಳ್ಳಾಲ್ ಮೇಲೆ ಕೇಸು ದಾಖಲಿಸಿದ  ಕೆಲವು ಕ್ರಿಶ್ಚಿಯನ್ ಸಂಸ್ಥೆಗಳ ನಡವಳಿಕೆ ಖಂಡನೀಯ- ಸತೀಶ್ ಕುಂಪಲ

ಮಂಗಳೂರು : ಅರುಣ್ ಉಳ್ಳಾಲ್ ಮೇಲೆ ಕೇಸು ದಾಖಲಿಸಿದ  ಕೆಲವು ಕ್ರಿಶ್ಚಿಯನ್ ಸಂಸ್ಥೆಗಳ ನಡವಳಿಕೆ ಖಂಡನೀಯವಾಗಿವೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಇತ್ತೀಚೆಗೆ ಉಳ್ಳಾಲದಲ್ಲಿ ಅನೇಕ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜೊತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಅತ್ಯಂತ ಮುಗ್ಧ ಸ್ವಭಾವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಅರುಣ್ ಉಳ್ಳಾಲ್ ರವರು ನವದಂಪತಿಗಳ ಸಮಾವೇಶದಲ್ಲಿ ಹಿಂದೂ ವಿಚಾರ ಪದ್ಧತಿಗಳ ಮತ್ತು…

Read More

ಮಂಗಳೂರು ಕುಡುಪು ಬಳಿ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ನ ದಾಸ್ ಓಲ್ಡ್ ಏಜ್ ಹೆಲ್ತ್ ಕೇರ್ ಹೋಮ್ ಶುಭಾರಂಭ

ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ನ ಮೂಲಕ ಕಳೆದ 12 ವರ್ಷಗಳಿಂದ ಸೇವಾ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಟ್ರಸ್ಟ್ ನ ವತಿಯಿಂದ ನಡೆಸಲ್ಪಡುವ ಎರಡನೇ ಸೇವಾ ಯೋಜನೆ ದಾಸ್ ಒಲ್ಡ್ ಏಜ್ ಹೆಲ್ತ್ ಕೇರ್ ಹೋಂ ಇದೀಗ ಕುಡುಪುವಿನ ಕಮಲ ನಿವಾಸ ಕಟ್ಟಡದಲ್ಲಿ ಪೂಜ್ಯ ಶ್ರೀ ಶ್ರೀ ಶ್ರೀ ಮೋಹನ್ ದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಮಾಣಿಲ ಇವರ ದಿವ್ಯ ಆಶೀರ್ವಚನದೊಂದಿಗೆ ಹಾಗೂ ಜಿಲ್ಲಾ ಲಯನ್ಸ್ ಗವರ್ನರ್ ಶ್ರೀ ಬಿ ಎಂ ಭಾರತಿರವರ ದಿವ್ಯ…

Read More

ಸುಳ್ಯ: ಆಸ್ಪತ್ರೆಯಿಂದ ವಾರಂಟ್ ಆರೋಪಿ ಪರಾರಿ..!

ಸುಳ್ಯ: ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾದ ತಮಿಳುನಾಡು ಮೂಲದ ಕಾರ್ತಿಕ್ ಪರಾರಿಯಾಗಿರುವ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿಯನ್ನು ಸುಳ್ಯದ ಇಬ್ಬರು ಪೊಲೀಸ್ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆದೊಯ್ದಿದ್ದು, ಈ ವೇಳೆ ಒರ್ವ ಸಿಬ್ಬಂದಿ ಚೀಟಿ ಮಾಡಿಸಲು ತೆರಳಿದ್ದ ಸಂದರ್ಭದಲ್ಲಿ ಇನ್ನೋರ್ವ ಸಿಬ್ಬಂದಿಯೊಂದಿಗಿದ್ದ ಆರೋಪಿ…

Read More