Headlines

ಮುಡಾ ಹಗರಣ ಒಪ್ಪಿಕೊಂಡ ಸರಕಾರ – ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ

ಬೆಂಗಳೂರು/ಮೈಸೂರು: ಕಾಂಗ್ರೆಸ್ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುವ ಮುಡಾ ಹಗರಣವನ್ನು ಬಯಲಿಗೆ ತಂದಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಎದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಗಂಗರಾಜು ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ . ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ….

Read More

ಬೆಳ್ತಂಗಡಿಯ ಯುವಕ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಅರೆಸ್ಟ್..!

ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ಗ್ರಾಹಕನಾಗಿ ತೆರಳಿದ್ದಾಗ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಶಾಸ್ತ್ರಿಯ ನಿಜಬಣ್ಣ ಬಯಲಾಗುತ್ತಿದ್ದಂತೆ ಶೀಘ್ರ ನಡೆಯಬೇಕಿದ್ದ ಈತನ ನಿಶ್ಚಿತಾರ್ಥ ರದ್ದುಗೊಂಡಿದೆ. ಪೊಲೀಸರು ಬಾಂಗ್ಲಾ ಮೂಲದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.

Read More

ಉಡುಪಿ: ವೈದ್ಯನಿಂದ ಯುವತಿಗೆ ಕಿರುಕುಳ -ಕುರಾನ್ ಪುಸ್ತಕ ಕೊಟ್ಟು ಮತಾಂತರಾಗಬೇಕು ಎಂದು ಒತ್ತಾಯಿಸಿದ್ದಾನೆ- ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಮಣಿಪಾಲದ ವೈದ್ಯ ವಿದ್ಯಾರ್ಥಿನಿಗೆ ಸಹಪಾಠಿ ವೈದ್ಯ ಲೈಂಗಿಕ ಕಿರುಕುಳ ನೀಡಿ ಮತಾಂತರಕ್ಕೆ ಒತ್ತಾಯಿಸಿದ್ದಾಗಿ ವೈದ್ಯ ವಿದ್ಯಾರ್ಥಿನಿಯೊಬ್ಬಳು ಉಡುಪಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ‌.ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ,ಉಡುಪಿ ಎಸ್ ಪಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. (ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್) ಆರೋಪಿಗೆ ಸೂಕ್ತ ಶಿಕ್ಷೆಯನ್ನು ನೀಡಬೇಕು. ಜಿಲ್ಲೆಯಾದ್ಯಂತ ಇರುವ ಡ್ರಗ್ಸ್ ಜಾಲದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಯುವತಿ ಸಂಸದರ ಮೂಲಕ ನನ್ನನ್ನು ಸಂಪರ್ಕ ಮಾಡಿದ್ದಾಳೆ…

Read More

ಉಡುಪಿ: ವೈದ್ಯನಿಂದ ಕಿರುಕುಳ ಆರೋಪ – ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದ ದೂರು

ಉಡುಪಿ: ವೈದ್ಯನೊಬ್ಬ ತನ್ನ ಸಹಪಾಠಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು ಈ ಸಂಬಂಧ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಿರುಕುಳ ನೀಡಿದ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಹೊರರಾಜ್ಯದವರಾದ ಇವರು ಪ್ರಾರಂಭದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗ ಡ್ಯಾನಿಷ್ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ ಎನ್ನಲಾಗಿದೆ. ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕ್ಯಾಂಪಸ್‌ನಲ್ಲಿ ಪರಿಚಯವಾಗಿತ್ತು. ನಂತರ 2024ರ ಜನವರಿ 22ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ…

Read More

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿದ್ದು ನಿಜ : ಇನ್ ಸ್ಟಾಗ್ರಾಂ ಸಂಸ್ಥೆಯಿಂದ ಸ್ಪೋಟಕ ಮಾಹಿತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎನ್ನಲಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಿತ್ರಾಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿದ್ದು ನಿಜ : ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ. ಇನ್ನು ರೇಣುಕಾ…

Read More

ಮಂಗಳೂರು: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕ ಸಾವು

ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್‌ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಯಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

Read More

‘ಬಿಜೆಪಿ ಸದಸ್ಯತ್ವ’ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ, 10 ಕೋಟಿ ಸದಸ್ಯರ ಸೇರ್ಪಡೆ ಗುರಿ

ನವದೆಹಲಿ:2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ಯುವಕರನ್ನು ಸಂಪರ್ಕಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಜೆಪಿಯ ರಾಷ್ಟ್ರವ್ಯಾಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು 18 ರಿಂದ 25 ವರ್ಷದೊಳಗಿನ ಯುವಕರು 2047 ರಲ್ಲಿ ಭಾರತದ ಬಗ್ಗೆ ನನ್ನ ಕನಸಿಗೆ ದೊಡ್ಡ ಶಕ್ತಿಯ ಮೂಲವಾಗಿದ್ದಾರೆ. ಆದ್ದರಿಂದ, ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಪೂರೈಸಲು ಅವುಗಳನ್ನು ಸಂಪರ್ಕಿಸಬೇಕಾಗಿದೆ. ಅವರು ರಾಷ್ಟ್ರ ಮೊದಲು ಎಂಬ ಕಲ್ಪನೆಯೊಂದಿಗೆ ಸಂಪರ್ಕ ಹೊಂದಿರಬೇಕು” ಎಂದು ಮೋದಿ ಹೇಳಿದರು, ಪಕ್ಷಕ್ಕೆ 10…

Read More

ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ : ಶಾಂತಿ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತರು

ಮಂಗಳೂರು: ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ ನಗರದಲ್ಲಿ ಶಾಂತಿ  ಕಾಪಾಡಬೇಕು ಮತ್ತು ಎಲ್ಲಾ ಧರ್ಮದ ಮುಖಂಡರು ಇದಕ್ಕೆ ಸಹಕರಿಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ತನ್ನ  ಕಚೇರಿಯಲ್ಲಿ ಸೋಮವಾರ ಶಾಂತಿ ಸಭೆ ನಡೆಸಿ ಧಾರ್ಮಿಕ ಮತ್ತು ಸಮಾಜದ ಮುಖಂಡರಿಗೆ ಕೆಲವೊಂದು ಸೂಚನೆಗಳನ್ನು ಆಯುಕ್ತರು ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64…

Read More

ಪುತ್ತೂರಿನಲ್ಲಿ ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ..!

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್‌ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಸೆ.2ರಂದು ಸಂಜೆ ನಡೆದಿದೆ. ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಜಯಪ್ರಕಾಶ್ ಎಂಬವರು ಚಲಾಯಿಸುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು…

Read More

‘SSLC’ ವಿದ್ಯಾರ್ಥಿನಿ ನೇಣಿಗೆ ಶರಣು : ಕಾರಣ ನಿಗೂಢ

ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆಯು ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ. ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್…

Read More