BREAKING NEWS: ಮುಡಾ ಕಡತ ನಾಪತ್ತೆ ಪ್ರಕರಣ: ಮತ್ತೊಂದು ದೂರು ದಾಖಲಿಸಿದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಹಾಗೂ ಹಿಂದಿನ ಲೋಕಾಯುಕ್ತ ಸಜಿತ್ ವಿರುದ್ಧ ದೂರು ದಾಖಲಿಸಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ.    

Read More

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ನಾಪತ್ತೆ!

ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ  ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ  ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ.ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ದಳ  ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಮುಮ್ತಾಜ್ ಅಲಿ ಚಲಾಯಿಸುತ್ತಿದ್ದ  ಬಿಎಂ ಡಬ್ಲ್ಯೂ ಕಾರು ಸೇತುವೆ ಮೇಲೆ ಮುಂಭಾಗ ಅಪಘಾತ ನಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ  ಮೊಬೈಲ್ ಫೋನ್  ಸ್ವಿಚ್ಡ್ ಆಫ್ ಆಗಿದೆ….

Read More

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ..!

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದೆ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ…

Read More

ಅ.8 : ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ದಸರಾ ಬಹುಭಾಷಾ ಕವಿಗೋಷ್ಠಿಯು ಅ.8ರ ಮಂಗಳವಾರ ಅಪರಾಹ್ನ 3.00 ಗಂಟೆಗೆ ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ನಡೆಯಲಿದೆ.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಮೂರನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ.ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ 12 ಭಾಷೆಗಳ ಕವಿಗಳು ಕವಿತೆ ವಾಚಿಸಲಿದ್ದಾರೆ.ಪ್ರಾಧ್ಯಾಪಕಿ ಹಾಗೂ ಸಾಹಿತಿ ಡಾ.ನಿಕೇತನ ಉಡುಪಿ…

Read More

ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು : ದೇಶಾದ್ಯಂತ 22 ಸ್ಥಳಗಳಲ್ಲಿ `NIA’ ದಾಳಿ

ನವದೆಹಲಿ : ಪಾಕಿಸ್ತಾನದ ಮಧ್ಯಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವವರ ವಿರುದ್ಧ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ 5 ರಾಜ್ಯಗಳ 22 ಪ್ರದೇಶಗಳಲ್ಲಿ ದಾಳಿ ನಡೆಸಿತು. ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ ಮತ್ತು ದೆಹಲಿಯಲ್ಲಿ ದಾಳಿ ನಡೆಸಲಾಗಿದೆ. ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿರುವ ಹೋಮಿಯೋಪತಿ ಕ್ಲಿನಿಕ್ ಮೇಲೆ ಎನ್‌ಐಎ ತಂಡ ದಾಳಿ ನಡೆಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಯೋತ್ಪಾದಕ ಹಣಕಾಸು ಮತ್ತು ಪಿತೂರಿಗೆ ಸಂಬಂಧಿಸಿದ ಪ್ರಮುಖ ಪ್ರಕರಣದಲ್ಲಿ…

Read More

ಬಂಟ್ವಾಳ: ಬ್ಯಾಂಕ್ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್, ನಗದು ವಶ

ಬಂಟ್ವಾಳ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.4 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.4 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿ ಎನ್ ಎಸ್ – 2023 ರಂತೆ ಪ್ರಕರಣ…

Read More

ಕೇಕ್ ತಿನ್ನೋರಿಗೆ ಶಾಕಿಂಗ್‌ ನ್ಯೂಸ್‌ : ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕಗಳ ಬಗ್ಗೆ FSSAI ಎಚ್ಚರಿಕೆ.!

ರಾಜ್ಯಾದ್ಯಂತ ಪರೀಕ್ಷಿಸಿದ 235 ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆ ನೀಡಿದೆ. ಪರೀಕ್ಷಿಸಿದ ಕೆಲವು ಕೇಕ್ ಮಾದರಿಗಳಲ್ಲಿ ಹಾನಿಕಾರಕ, ಕ್ಯಾನ್ಸರ್ ಉಂಟುಮಾಡುವ ವಸ್ತುಗಳನ್ನು ನಾವು ಪತ್ತೆ ಹಚ್ಚಿದ್ದೇವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಖಾಸಗಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಈ ಸೇರ್ಪಡೆಗಳನ್ನು 2006 ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಮತ್ತು 2011 ರಿಂದ ಸಂಬಂಧಿತ ಆಹಾರ ಸುರಕ್ಷತಾ ನಿಯಮಗಳ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ….

Read More

ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ – 23 ಬೋಟುಗಳು ವಶಕ್ಕೆ..!

ಮಂಗಳೂರು: ನಗರದ ಹೊರವಲಯದ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಶುಕ್ರವಾರ ದಾಳಿ ನಡೆಸಿ 3 ಬೋಟುಗಳನ್ನು ವಶಪಡಿಸಿಕೊಂಡಿದ್ದಾರೆ‌. ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ 23 ಬೋಟುಗಳನ್ನು ವಶಪಡಿಸಿದೆ. ಬೋಟುಗಳ ಒಟ್ಟು ಅಂದಾಜು ಮೌಲ್ಯ 46 ಲಕ್ಷ…

Read More

ನಿರುದ್ಯೋಗ ಸಮಸ್ಯೆ: ಯುವಕರಿಗೆ ಗುಡ್‌ನ್ಯೂಸ್‌ ನೀಡಿದ ಮೋದಿ ಸರ್ಕಾರ

ಭಾರತದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈಚೆಗೆ ಕೇಂದ್ರ ಸರ್ಕಾರವು ಮಂಡಿಸಿದ್ದ ಕೇಂದ್ರ ಮಧ್ಯಂತರ ಬಜೆಟ್‌ 2024ರಲ್ಲೂ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸಾಕಷ್ಟು ಆದ್ಯತೆ ನೀಡಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಭಾರತದಲ್ಲಿನ ನಿರುದ್ಯೋಗ ವಿಷಯ ಹಾಗೂ ಯುವ ನಿರುದ್ಯೋಗಿಗಳ ಸಮಸ್ಯೆ ಗಂಭೀರವಾಗಿ ಚರ್ಚೆಯಾಗಿತ್ತು. ಅಲ್ಲದೇ, ಬಿಜೆಪಿಗೆ ನಿರೀಕ್ಷಿತ ಪ್ರಮಾಣದಲ್ಲಿ ಸೀಟುಗಳನ್ನು ಗೆಲ್ಲುವಲ್ಲಿ ಹಿನ್ನಡೆಯಾಗುವುದಕ್ಕೆ ಭಾರತದಲ್ಲಿನ ನಿರುದ್ಯೋಗ ಸಮಸ್ಯೆಯೂ ಕಾರಣ, ಸರ್ಕಾರ ಈ ವಿಷಯವನ್ನು ನಿರ್ಲಕ್ಷಿಸಿತ್ತು ಎಂದು ವಿಶ್ಲೇಷಿಸಲಾಗಿತ್ತು. ಇದಾದ ಮೇಲೆ…

Read More

ಉಡುಪಿ: ಕಲುಷಿತ ನೀರು ಕುಡಿದು 1000ಕ್ಕೂ ಹೆಚ್ಚು ಜನರು ಅಸ್ವಸ್ಥ..!

ಉಡುಪಿ: ಕಲುಷಿತ ನೀರು ಸೇವಿಸಿ 1000ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಗಹ್ಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕರ್ಕಿಹಳ್ಳಿ ಹಾಗೂ ಮೆಡಿಕಲ್ ಗ್ರಾಮದ ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ಕರ್ಕಿಹಳ್ಳಿಯಲ್ಲಿ ಸುಮಾರು 500 ಜನ ಹಾಗೂ ಮೆಡಿಕಲ್ ಗ್ರಾಮದಲ್ಲಿ 600ರಷ್ಟು ಜನರು ಅಸ್ವಸ್ಥರಾಗಿದ್ದು, 80 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕ್ ನಿಂದ ಪೂರೈಕೆಯಾದ ಕಲುಷಿತ ನೀರು ಸೇವಿಸಿ…

Read More