ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ..!

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನವದುರ್ಗೆ ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 13 ರಂದು ಸಂಜೆ 4 ಗಂಟೆಯಿಂದ ಶಾರಾದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಕುದ್ರೋಳಿ ಆಡಳಿತ ಮಂಡಳಿ…

Read More

ಮಂಗಳೂರು: ದಸರಾ ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯಕ್ಕೆ ಅವಕಾಶ ಬೇಡ..! VHP

ಮಂಗಳೂರು: ದಸರಾ ಧಾರ್ಮಿಕ ದಾಂಡಿಯಾ ಹೆಸರಿನಲ್ಲಿ ಮಾದಕದ್ರವ್ಯ ಸೇವನೆ ಮಾಡಿ ಅಸಭ್ಯ ನೃತ್ಯ ಕಾರ್ಯಕ್ರಮಗಳನ್ನು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದೆ. ಯುವಕ -ಯುವತಿಯರು ಇದರಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ವಿಎಚ್‌ಪಿ ದುರ್ಗಾವಾಹಿನಿ ಮಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ. ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿಯ ಹೆಸರಿನಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ. ಕರಾವಳಿಯ ಪರಶುರಾಮ ಸೃಷ್ಟಿಯ ಈ ಪವಿತ್ರ ಭೂಮಿಯಲ್ಲಿ ಧಾರ್ಮಿಕ ಹೆಸರಿನಲ್ಲಿ ಅಸಭ್ಯ ಕಾರ್ಯಕ್ರಮಕ್ಕೆ…

Read More

ಮಂಗಳೂರಿನಲ್ಲಿ ಸೆಂಟ್ ಆಗ್ನೆಸ್‌ನ “ಅಗ್ನೇಶಿಯಾ 2K24” ಉತ್ಸವಕ್ಕೆ ಭರ್ಜರಿ ಸಿದ್ಧತೆ

ಮಂಗಳೂರು: ಸೆಂಟ್ ಆಗ್ನೆಸ್ ಕಾಲೇಜು (ಸ್ವಾಯತ್ತ), ಮಂಗಳೂರು ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಐಟಿ ಮತ್ತು ಮ್ಯಾನೇಜ್‌ಮೆಂಟ್ ಉತ್ಸವ “ಅಗ್ನೇಶಿಯಾ 2024” ಅನ್ನು ಅಕ್ಟೋಬರ್ 3ರ ಗುರುವಾರ ಮತ್ತು ಅಕ್ಟೋಬರ್ 4ರ ಶುಕ್ರವಾರ ಸೆಂಟ್ ಆಗ್ನೆಸ್ ಕ್ಯಾಂಪಸ್‌ನಲ್ಲಿ ಆಯೋಜಿಸಿದೆ. ಕಂಪ್ಯೂಟರ್ ಅಪ್ಲಿಕೇಶನ್ಸ್ (ಎಂಸಿಎ) ವಿಭಾಗವು “ಆವಿರ್ಭಾವ್” ಎಂಬ ಹೆಸರಿನ ಅಡಿಯಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ಐಟಿ ಉತ್ಸವವನ್ನು, ಮತ್ತು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ವಿಭಾಗವು “ಯೂಫೋರಿಯಾ” ಎಂಬ ಹೆಸರಿನ ಅಡಿಯಲ್ಲಿ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗಾಗಿ ಮ್ಯಾನೇಜ್‌ಮೆಂಟ್ ಉತ್ಸವವನ್ನು…

Read More

ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರುತ್ತಿದ್ದ ಐವರು ಸಿಸಿಬಿ ಬಲೆಗೆ..!

ಮಂಗಳೂರು: ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು ಮಂಜೇಶ್ವರ, ಕುಂಜತ್ತೂರು, ಉದ್ಯಾವರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆಯ ಕೊರಂಗಾಡ್, ಪಯ್ಯನೂರು, ಪೆರಿಂಗಾಂವ್‌ ನಿವಾಸಿ ರಿಯಾಜ್ ಎ.ಕೆ(31), ಕಾಸರಗೋಡು ವರ್ಕಾಡಿಯ ಪಾವೂರು ನಿವಾಸಿ ಮೊಹಮ್ಮದ್ ನೌಷಾದ್(22), ಕಾಸರಗೋಡು ಮಂಜೇಶ್ವರ, ಕುಂಜತ್ತೂರು ನಿವಾಸಿ ಯಾಸೀನ್ ಇಮ್ರಾಜ್(35) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಮಂಗಳೂರಿನಲ್ಲಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು…

Read More

ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವು!

ಪುಣೆ : ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ದುರಂತವೊಂದು ಸಂಭವಿಸಿದ್ದು, ಹೆಲಿಕಾಪ್ಟರ್ ವೊಂದು ಪತನಗೊಂಡು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುಣೆ ಜಿಲ್ಲೆಯ ಬವ್ದಾನ್ ಬಳಿಯ ಅರಣ್ಯ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಸರ್ಕಾರಿ ಹೆಲಿಕಾಪ್ಟರ್ ಅಥವಾ ಖಾಸಗಿ ಹೆಲಿಕಾಪ್ಟರ್ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಪುಣೆಯ ಬವ್ಧಾನ್ ಬುದ್ರುಕ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ…

Read More

ಬೆಳ್ತಂಗಡಿ : ಮನೆ ಅಂಗಳದಲ್ಲಿ ಕಾರು ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ ಸಾವು..!

ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನವಾಫ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ನವಾಫ್ ಇಸ್ಮಾಯಿಲ್ ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಕಾರಿನ ಹಿಂಬದಿ ನಿಂತಿದ್ದ ನವಾಫ್ ಮೇಲೆ ಕಾರು ಹರಿದಿದೆ. ಈ…

Read More

ದ.ಕ ಜಿಲ್ಲಾ ವಿಧಾನ ಪರಿಷತ್‌ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ವರಿಷ್ಟರು ವಿಧಾನಪರಿಷತ್‌‌ನ ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಿಶೋರ್ ಕುಮಾರ್ ಪುತ್ತೂರು ಅವರ ಹೆಸರನ್ನು ಅಂತಿಮಗೊಳಿಸಿದೆ. ಕಿಶೋರ್ ಕುಮಾರ್ ಬೊಟ್ಯಾಡಿ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯಾಗಿದ್ದು,…

Read More

ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

Read More

ಉಡುಪಿ: ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ- ಅಧಿಕಾರಿಗಳಿಂದ 5 ಕ್ವಿಂಟಾಲ್ ವಶ

ಉಡುಪಿ: ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದೆ. ಉಡುಪಿ ಎಪಿಎಂಸಿಯಲ್ಲಿಯೂ ಚೀನೀ ಬೆಳ್ಳುಳ್ಳಿ ಪತ್ತೆಯಾಗಿದೆ. ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ನಗರಸಭೆ ಮುಖ್ಯ ಆಯುಕ್ತ ರಾಯಪ್ಪ ದಿಢೀರ್ ದಾಳಿ ನಡೆಸಿ 5 ಕ್ವಿಂಟಾಲ್ ಬೆಳ್ಳುಳ್ಳಿಯನ್ನು ಪತ್ತೆ ಮಾಡಿದ್ದಾರೆ. ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಈ ದಾಳಿ ನಡೆಯಿತು. ಚೀನಿ ಬೆಳ್ಳುಳ್ಳಿ ಮಾರಾಟದ ವಿರುದ್ಧಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಮಾರಕ ರೋಗಗಳಿಗೆ ಕಾರಣವಾಗುವ ಚೀನಿ ಬೆಳ್ಳುಳ್ಳಿ ಮಾರಾಟಗಾರರ…

Read More

ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 20 ರೂ. ಇಳಿಕೆ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಲವೇ ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಬಹುಬೇಗ ಜನರು ಪೆಟ್ರೋಲ್ ಅವಲಂಬಿತರಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ದೇಶದ ಬಹುತೇಕ ಪೆಟ್ರೋಲ್ ಪಂಪ್‌ಗಳಲ್ಲಿ ಶೀಘ್ರದಲ್ಲೇ ಎಥೆನಾಲ್ ಮಿಶ್ರಿತ ಪೆಟ್ರೋಲ್ ಲಭ್ಯವಾಗಲಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದರ ಬೆಲೆ ಸಾಮಾನ್ಯ…

Read More