ನ.28: “ಅಪರೇಷನ್ ಲಂಡನ್ ಕೆಫೆ”ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

ಮಂಗಳೂರು: “ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಟ ಅರ್ಜುನ್ ಕಾಪಿಕಾಡ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ…

Read More

ಉಡುಪಿ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ ಖಚಿತ- ರೋಡ್ ಶೋ ರದ್ದು

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ ದೆಹಲಿಯ ಏರ್ ಪೋರ್ಟ್ ನಿಂದ ಹೊರಡಲಿದ್ದಾರೆ. ಬೆಳಿಗ್ಗೆ 11.10ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.35ಕ್ಕೆ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಪ್ರಧಾನಿ ಅವರು ರಸ್ತೆ ಮಾರ್ಗದ ಮೂಲಕ…

Read More

7 ಕೋಟಿ ರೂ. ನಗದು ದರೋಡೆ ಪ್ರಕರಣ: 5 ಕೋ.ರೂ ವಶ, ಕಾನ್ಸ್ಟೇಬಲ್ ಸೇರಿ ನಾಲ್ವರ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ವಿಭಾಗದ ಪೊಲೀಸರು, ದರೋಡೆ ಮಾಡಲಾದ 7.11 ಕೋಟಿ ರೂಪಾಯಿಗಳಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳುವ ಮೂಲಕ ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಚೆನ್ನೈ ಮತ್ತು ಆಂಧ್ರಪ್ರದೇಶದಿಂದ ಪೊಲೀಸರು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಮಾಸ್ಟರ್ ಮೈಂಡ್ ಬೆಂಗಳೂರು ನಗರ ಪೂರ್ವ ವಿಭಾಗಕ್ಕೆ ಸೇರಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಕೇರಳದ ನಗದು…

Read More

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ NHAI ಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ…

Read More

ಬೆಳ್ತಂಗಡಿ: ದ್ವಿಚಕ್ರ ವಾಹನ ಕಳವು ಪ್ರಕರಣ- ಇಬ್ಬರು ಆರೋಪಿಗಳ ಬಂಧನ-ಬೈಕ್ ವಶ..!!

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ ಕೇಡಿ ನಿವಾಸಿ ಸಂಪತ್ ಕುಮಾರ್ (28) ಅವರು ದಿನಾಂಕ 10.11.2025 ರಂದು ರಾತ್ರಿ KA 18-J-6348 ನಂಬರಿನ ಬೈಕನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಬಳಿಕ ಬೈಕ್ ಕಳವುಗೊಂಡಿದ್ದು‌, ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಮೋ ಪ್ರಕರಣ ಸಂ 88/2025 ಕಲಂ 3೦3(2) ಬಿಎನ್‌…

Read More

ಮಾನವ ಬಾಂಬ್ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಡಾ.ಶಾಹೀನ್: ದುರ್ಬಲ ಮುಸ್ಲಿಂ ಹುಡುಗಿಯರೇ ಟಾರ್ಗೆಟ್

ಮುಸ್ಲಿಂ ಹುಡುಗಿಯರು ಮತ್ತು ಮಹಿಳೆಯರನ್ನು ಮಾನವ ಬಾಂಬ್ ಗಳನ್ನಾಗಿ ನೇಮಕ ಮಾಡುವ ಮತ್ತು ತರಬೇತಿ ನೀಡುವ ಪ್ರಯತ್ನಗಳನ್ನು ಮುನ್ನಡೆಸುತ್ತಿದ್ದ ಡಾ.ಶಾಹೀನ್ ಅವರನ್ನು ಒಳಗೊಂಡ ಭಯೋತ್ಪಾದಕ ಸಂಚು ಬಹಿರಂಗಪಡಿಸಿದೆ. ಮೂಲಗಳ ಪ್ರಕಾರ, ಶಾಹೀನ್ ಅವರ ಅಳಿಸಿದ ವಾಟ್ಸಾಪ್ ಚಾಟ್ಗಳಿಂದ ಏಜೆನ್ಸಿಗಳು ನಿರ್ಣಾಯಕ ಮಾಹಿತಿಯನ್ನು ಬಹಿರಂಗಪಡಿಸಿವೆ, ‘ಮುಜಾಹಿದ್ ಜಂಗ್ಜು’ ಎಂಬ ಕೋಡ್ ಹೆಸರಿನಲ್ಲಿ ಈ ಮಾರಣಾಂತಿಕ ದಾಳಿಗಳನ್ನು ರೂಪಿಸುವ ಅವರ ಯೋಜನೆಯನ್ನು ಬಹಿರಂಗಪಡಿಸಿದೆ. ನೇಮಕಾತಿ ಗುರಿಗಳು ಮತ್ತು ತರಬೇತಿ ವಿಚ್ಛೇದನ ಪಡೆದ ಅಥವಾ ತಮ್ಮ ಕುಟುಂಬಗಳಿಂದ ಬೇರ್ಪಟ್ಟ ಮುಸ್ಲಿಂ ಮಹಿಳೆಯರು…

Read More

ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು

ಬೆಂಗಳೂರು : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಖಡಕ್ ತೀರ್ಪು ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ಹೈಕೋರ್ಟ್ ಹೇಳಿತು. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್ ಗೋಡೆ…

Read More

ಮಂಗಳೂರು: ಕುಂಭ ಕಲಾವಳಿ – 2026 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಕರಾವಳಿ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ ಮತ್ತು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ಕುಂಭ ಕಲಾವಳಿ – 2026 ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಿ ದೇವಸ್ಥಾನ ಪಾಂಡೇಶ್ವರದಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಮಾಡಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕುಂಭ ಕಲಾವಳಿ ಕಾರ್ಯಕ್ರಮವು ದಿನಾಂಕ ಜನವರಿ 4 , 2026 ಆದಿತ್ಯ ವಾರ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಪದಗ್ರಹಣ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ…

Read More

ಉಡುಪಿ: ನೌಕಾ ಸೇನಾ ಹಡಗುಗಳ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ಹಂಚಿದ ಇಬ್ಬರ ಬಂಧನ

ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತ ಆರೋಪಿ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

Read More

7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!

ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ದರೋಡೆಯ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ. ದರೋಡೆ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ…

Read More