ಶಿವಸೇನಾ ಶಾಸಕನ ಘೋಷಣೆ ; ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ 11 ಲಕ್ಷ
ದೆಹಲಿ: ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳ ಬಗ್ಗೆ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ “ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದ”ವರಿಗೆ 11 ಲಕ್ಷ ನೀಡುತ್ತೇನೆ” ಎಂಬುವುದಾಗಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ನ ನಿಜವಾದ ಮುಖವನ್ನು ಬಯಲು ಮಾಡಲು ಮುಖ್ಯ ಕಾರಣವೆಂದರೆ ರಾಹುಲ್ ಗಾಂಧಿ ಅವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಮುಗಿಸಲು ಬಯಸುವುದಾಗಿ ಹೇಳಿದ್ದು. ಅಮೆರಿಕ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ್ದರು. ಇದು ಮೀಸಲಾತಿಯನ್ನು…

