Headlines

ಪಡೀಲ್ ಅಂಡರ್ ಪಾಸ್ ನಲ್ಲಿ ನೀರು ನುಗ್ಗಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತ KSRTC ಬಸ್

ಮಂಗಳೂರು: ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್ ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಮಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಎಡೆಬಿಡದೆ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ಈ ನಡುವೆ ಮಂಗಳೂರಿನ ಪಡೀಲ್ ರೈಲ್ವೇ ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದು ಈ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಒಂದು ಸಿಕ್ಕಿಹಾಕಿಕೊಂಡಿದೆ….

Read More

ಶಿರಾಡಿ ಘಾಟ್‌ನಲ್ಲಿ ಭೂಕುಸಿತ: ಮಣ್ಣಿನಡಿ ಸಿಲುಕಿದ ವಾಹನಗಳು, ರಸ್ತೆ ಸಂಚಾರ ಸ್ಥಗಿತ

ಸಕಲೇಶಪುರ: ಸಕಲೇಶಪುರದ ದೊಡ್ಡತಪ್ಪಲುವಿನ ಬಳಿಯ ಶಿರಾಡಿ ಘಾಟ್‌ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ ಆತಂಕ ಎದುರಾಗಿದೆ. ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲಲು ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ. ಮುಂಜಾಗೃತಾ ಕ್ರಮವಾಗಿ ಘಾಟಿಯಲ್ಲಿ ವಾಹನ ಸಂಚಾರ ಪೂರ್ತಿ…

Read More

ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟಿನ ಹೆಲ್ತ್ ಕೇರ್ ಸೆಂಟರ್ ನ ವತಿಯಿಂದ ವಯೋವೃದ್ದೆ ಯೊಬ್ಬರ ಅಂತ್ಯಕ್ರಿಯೆಗೆ ಸಹಾಯ ಹಸ್ತ

ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಪ್ರವರ್ತಿಸುವ ಓಲ್ಡ್ ಏಜ್ ಹೆಲ್ತ್ ಕೇರ್ ಹೋಂ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿಮೆನ್ಶ್ಯಾ ಕಾಯಿಲೆ ಯಿಂದ ಬಳಲುತ್ತಿದ್ದ ಕೇರಳ ಮೂಲದ ವಸಂತಿ ನಾಯರ್ (ವಯಸ್ಸು.88 )ಇಂದು ಬೆಳಿಗ್ಗೆ ತೀವ್ರ ಅಸೌಖ್ಯ ಗೊಂಡು . ಆಸ್ಪತ್ರೆಗೆ ದಾಖಲಾದರು ತಕ್ಷಣದಲ್ಲಿ ಅವರ ಮಗ ಮುಂಬೈಯಿಂದ ಬರಲು ಅನಾನುಕೂಲವಾದ ಕಾರಣ. ದಾಸ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಲಯನ್ ಅನಿಲ್ ದಾಸ್ ತಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾತಿ ಮಾಡಿದರು. ಗೆಳೆಯರಾದ ಫೈಝಲ್ ಕೆನಡಾ ಹಾಗೂ…

Read More

 ಗುಡ್ಡ ಕುಸಿತ: ಉಪ್ಪಿನಂಗಡಿ ಸಂಪರ್ಕ ಸಂಪೂರ್ಣ ಕಡಿತ..!

ಉಪ್ಪಿನಂಗಡಿ: ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ. ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್…

Read More

ಮಂಗಳೂರು: ನಂತೂರು ಪದವು ಬಳಿ ರಸ್ತೆ ಅಪಘಾತ- ದ್ವಿಚಕ್ರ ಸವಾರ ಸಾವು

ಮಂಗಳೂರು ನಗರದ ನಂತೂರು ಪದವು ಬಳಿ  ಮಂಗಳವಾರ ಬೆಳಗ್ಗೆ  ನಡೆದ  ರಸ್ತೆ ಅಪಘಾತ (accident) ದಲ್ಲಿ ದ್ವಿಚಕ್ರ ಸವಾರನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ. ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ  ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಗೆ ಉರುಳಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎಂದು  ಹೇಳಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಹೆಚ್ಚನ ಮಾಹಿತಿ ತಿಳಿಯ ಬೇಕಷ್ಟೇ..

Read More

ವಯನಾಡಿನಲ್ಲಿ ಭಾರಿ ಮಳೆ, ಭೂಕುಸಿತ, 31 ಮಂದಿ ಮೃತ್ಯು,100 ಕ್ಕೂ ಅಧಿಕ ಸಿಲುಕಿರುವ ಶಂಕೆ

ವಯನಾಡು: ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ 4.30 ರ ಸುಮಾರಿಗೆ ಭಾರಿ ಭೂಕುಸಿತ ಸಂಭವಿಸಿದ್ದು, ಪ್ರಾರ್ಥಮಿಕ ಮಾಹಿತಿ ಪ್ರಕಾರ 31 ಜನ ಈಗಾಗಲೇ ಸಾವನ್ನಪ್ಪಿದ್ದು 100 ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ  ಇನ್ನೂ ಹೆಚ್ಚಾಗುವ ಸಂಭವಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ…

Read More

ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭೆ ಸಚೇತಕರಾಗಿ ನೇಮಕ

ಉಡುಪಿ: ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಸಚೇತಕರ ಪಟ್ಟಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿದೆ. ಡಾ| ಸಂಜಯ್ ಜೈಸ್ವಾಲ್ ಮುಖ್ಯ ಸಚೇತಕರಾಗಿದ್ದು, 16 ಮಂದಿ ಸಚೇತಕರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ.

Read More

ಬಜಪೆ : ದನದ ಮಾಂಸ ಸಾಗಾಟ – ಇಬ್ಬರ ಬಂಧನ

ಬಜಪೆ: ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿನ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದ್ರೆಯ ಹಂಡೇಲು ನಿವಾಸಿಗಳಾದ ಮೊಹಮ್ಮದ್ ಆರೀಫ್ (24) ಹಾಗೂ ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರೇವಣಸಿದ್ದಪ್ಪ ರವರು ಸಿಬ್ಬಂದಿಯೊಂದಿಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ ತಪಾಸಣೆ…

Read More

ನಿಫಾ ಸೋಂಕಿತನಿಗೆ ಆರೈಕೆ ಮಾಡುತ್ತಿದ್ದ ಕಡಬ ಮೂಲದ ನರ್ಸ್ ಯುವಕ-8 ತಿಂಗಳಿನಿಂದ ಕೋಮಾದಲ್ಲಿ

ಕಡಬ: ಕೇರಳದಲ್ಲಿ ನಿಫಾ ಸೋಂಕಿತನಿಗೆ ಆರೈಕೆ ಮಾಡುತ್ತಿದ್ದ ಕಡಬ ಮೂಲದ ನರ್ಸ್ ಯುವಕನಿಗೆ ನಿಫಾ ಸೋಂಕು ತಗುಲಿ 8 ತಿಂಗಳಿನಿಂದ ಕೋಮಾದಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ದಾಳ ಸಮೀಪದ ತುಂಬ್ಯ ನಿವಾಸಿ ಟಿಟ್ಟೋ ತೋಮಸ್(24) ಕೋಮಾದಲ್ಲಿರುವ ಯುವಕ. ಬಿಎಸ್‌ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಅವರು, ಕೇರಳದ ಕ್ಯಾಲಿಕಟ್‌ನಲ್ಲಿರುವ ಇಕ್ರಾ ಇಂಟರ್ ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಟಿಟ್ಟೋ ತೋಮಸ್ ನಿಫಾ ವೈರಸ್ ಬಾಧಿತನಿಗೆ…

Read More

ಕಾರ್ಕಳ : ಮಿಯ್ಯಾರಿನ ವೃದ್ಧ ಮಹಿಳೆ ನೇಣು‌ ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯ್ಯಾರಿನಲ್ಲಿ ಸಂಭವಿಸಿದೆ. ಗುಲಾಬಿ (63) ನೇಣಿಗೆ ಶರಣಾದವರು. ಕಳೆದ ಒಂದು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಸ್ವಸ್ಥೆಯಿಂದ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಜು.27ರಂದು ರಾತ್ರಿ 11.30 ರಿಂದ ಜು.28ರ ಬೆಳಿಗ್ಗೆ 6 ಗಂಟೆಯ ನಡುವೆ ಕುಂಟಿಬೈಲು ಪೊಸರುಗುಟ್ಟೆಯಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್…

Read More