Headlines

ಉದ್ಯೋಗ ಮೀಸಲಾತಿ: ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್‌

ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ನೀಡಲಾಗಿದ್ದ ಸರ್ಕಾರದ ಉದ್ಯೋಗ ಮೀಸಲಾತಿ ಕರುಡು ವಿರುದ್ಧ ಮಾತನಾಡಿದ್ದ ಫೋನ್‌ಪೇ ಸಿಇಒ ಸಮೀರ್ ನಿಗಮ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಕರ್ನಾಟಕ ಮತ್ತು ಜನರನ್ನು ಅವಮಾನಿಸುವ ಉದ್ದೇಶ ನನ್ನದಲ್ಲ ಎಂದು ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌ ತಿಳಿಸಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಆದರೆ, ಖಾಸಗಿ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾದ್ದರಿಂದ ತಾತ್ಕಾಲಿಕವಾಗಿ ತಡೆ ಹಿಡಿದಿದೆ.ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ…

Read More

ಶಿಕ್ಷಕ ದಂಪತಿಗಳಿಗೆ ಶಿಕ್ಷಕರತ್ನ ಮತ್ತು ಸಾಧಕ ರತ್ನ ಪ್ರಶಸ್ತಿ ಪ್ರಧಾನ

ಸರಕಾರಿ ಪದವಿಪೂರ್ವ ಕಾಲೇಜು ವೇಣೂರು ಪ್ರೌಢಶಾಲಾ ವಿಭಾಗದಲ್ಲಿ ಸಮಾಜ ವಿಜ್ಞಾನ ಶಿಕ್ಷಕಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಶ್ರೀಮತಿ ಪ್ರೇಮ ಪ್ರಭಾಕರ್ ರವರಿಗೆ ಶಿಕ್ಷಕರತ್ನ ಪ್ರಶಸ್ತಿ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಪ್ರಭಾಕರ್ ನಾರಾವಿ ಇವರಿಗೆ ಆರ್‌ಪಿ ಕಲಾ ಸೇವಾ ಟ್ರಸ್ಟ್ ಪರವಾಗಿ ಸಾಧಕರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬಂಟ್ವಾಳ ತಾಲೂಕಿನ ಕೆಂತಲೆ, ಮಾವಿನ ಕಟ್ಟೆಯ ಶ್ರೀ ನೇಮು ಪೂಜಾರಿ ಹಾಗೂ ಗುಲಾಬಿ ದಂಪತಿಗಳ ಪುತ್ರಿ…

Read More

ಇನ್ಮುಂದೆ ಸರ್ಕಾರಿ ನೌಕರರು ʻRSSʼ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು : 58 ವರ್ಷಗಳ ಹಳೆಯ ಆದೇಶ ಹಿಂಪಡೆದ ಮೋದಿ ಸರ್ಕಾರ

ನವದೆಹಲಿ : ಸರ್ಕಾರಿ ನೌಕರರು ಈಗ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. 58 ವರ್ಷಗಳ ನಂತರ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬೀಳದಿದ್ದರೂ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ತಮ್ಮ ಎಕ್ಸ್ ಪೋಸ್ಟ್ಗಳಲ್ಲಿ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಹೇಳಿಕೊಂಡಿವೆ. ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಈಗಾಗಲೇ ಆರ್‌ಎಸ್‌ಎಸ್ಗೆ ಸಂಬಂಧಿಸಿದ…

Read More

ಲೆನ್ಸ್‌ ಧರಿಸಿ ಎಡವಟ್ಟು ಮಾಡಿಕೊಂಡ ಖ್ಯಾತ ನಟಿ..! ಮುಂದೇನಾಯ್ತು …

ಮುಂಬೈ: ಲೆನ್ಸ್ ಸರಿಯಾಗಿ ಧರಿಸದ ಕಾರಣ ಬಹುಭಾಷಾ ನಟಿ ಜಾಸ್ಮಿನ್ ಭಾಸಿನ್ ಅವರು ಎಡವಟ್ಟು ಮಾಡಿಕೊಂಡಿದ್ದು, ಇದೀಗ ದೃಷ್ಟಿ ಕಳೆದುಕೊಳ್ಳುವ ಹಂತಕ್ಕೆ ತಲುಪಿದೆ. ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಂಡಿರುವ ನಟಿ ಜಾಸ್ಮಿನ್ ಅವರು, ಲೆನ್ಸ್ ಸರಿಯಾಗಿ ಧರಿಸದ ಕಾರಣ ಕಣ್ಣು ಕಾಣಿಸುತ್ತಿಲ್ಲ. ನು ತುಂಬಾ ನೋವು ಅನುಭವಿಸುತ್ತಿದ್ದೇನೆ. ನಾನು ಮುಂದಿನ ನಾಲ್ಕೈದು ದಿನಗಳಲ್ಲಿ ಚೇತರಿಸಿಕೊಳ್ಳಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಲೆನ್ಸ್ ಸರಿಯಾಗಿ ಧರಿಸದ ಕಾರಣ ಜಾಸ್ಮಿನ್ ಭಾಸಿನ್ ಕಾರ್ನಿಯಲ್ ಗೆ ಹಾನಿಯುಂಟಾಗಿದ್ದು, ನಟಿಯ ಕಣ್ಣಿಗೆ ಬ್ಯಾಂಡೇಜ್ ಹಾಕಲಾಗಿದೆ….

Read More

ಬೆಳ್ತಂಗಡಿ ತಾI ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆ ಮತ್ತು ಕೈಗೊಂಡ ಪ್ರಮುಖ ನಿರ್ಣಯಗಳು

ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಪ್ರಮುಖ ನಿರ್ಣಯಗಳು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ಹರೀಶ್ ಕಾರಿಂಜ ಅವರ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ನಡೆಯಿತು. ಪ್ರಮುಖ ನಿರ್ಣಯಗಳುಜು. 28ರಂದು ಶಾಸಕರಾದ ಹರೀಶ್ ಪೂಂಜ ಇವರ ಉಪಸ್ಥಿತಿಯಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರನ್ನು ಅಭಿನಂದಿಸುವುದು ಮತ್ತು ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ, ಮತ್ತು ಪಿಯುಸಿಯಲ್ಲಿ ಡಿಸ್ಟಿಂಕ್ಷನ್ (85% ಮತ್ತು ಅಧಿಕ…

Read More

ರುಚಿಕರವಾದ ಪನ್ನೀರ್ ಪುಲಾವ್ ಮಾಡುವ ವಿಧಾನ

ಪನ್ನೀರ್ ಬಳಸಿ ಸುಲಭವಾಗಿ ಒಂದು ಪುಲಾವ್ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಪನ್ನೀರ್-200 ಗ್ರಾಂ, ಬಾಸುಮತಿ ಅಕ್ಕಿ-1 ಕಪ್, ತುಪ್ಪ-3 ಟೇಬಲ್ ಸ್ಪೂನ್, ಜೀರಿಗೆ-1 ಟೀ ಸ್ಪೂನ್, ಎಣ್ಣೆ, 1 ಟೇಬಲ್ ಸ್ಪೂನ್, ಈರುಳ್ಳಿ-3 ಹದಗಾತ್ರದ್ದು ಉದ್ದಕ್ಕೆ ಸೀಳಿಕೊಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್-1 ಟೇಬಲ್ ಸ್ಪೂನ್, ಚಕ್ಕೆ-1 ಸಣ್ಣ ತುಂಡು, ಏಲಕ್ಕಿ-2, ಲವಂಗ-2, ಪಲಾವ್ ಎಲೆ-1, ಹಸಿಮೆಣಸು 3 ಉದ್ದಕ್ಕೆ ಸೀಳಿಕೊಂಡಿದ್ದು, ಕ್ಯಾರೆಟ್-1 ಸಣ್ಣಗೆ ಕತ್ತರಿಸಿಕೊಂಡಿದ್ದು, ಸ್ವಲ್ಪ-ಕೊತ್ತಂಬರಿಸೊಪ್ಪು, ಸ್ವಲ್ಪ-ಪುದೀನಾ ಸೊಪ್ಪು, ನೀರು-2 ಕಪ್, ರುಚಿಗೆ…

Read More

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ : ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ..!

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕವಿಕಲ್‌ ಗಂಡಿ ಬಳಿ ಗುಡ್ಡ ಕುಸಿದ ಪರಿಣಾಮ ರಸ್ತೆ ಮೇಲೆ ಮಣ್ಣು, ಮರಗಳು ಬಿದ್ದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಚಂದ್ರದೋಣ ಪರ್ವತ ಸಾಲುಗಳಲ್ಲಿ ಭೂಕುಸಿತ ಸಂಭವಿಸಿದೆ. ದತ್ತಪೀಠ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್‌ ಆಗಿದ್ದು, ಮುಂಜಾಗೃತ ಕ್ರಮವಾಗಿ ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು,…

Read More

ಮಂಗಳೂರು : ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನ, ಮನೆಯಜಮಾನನ ಬೊಬ್ಬೆಗೆ ಕಾಲ್ಕಿತ್ತ ಕಳ್ಳರು..!

ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ  ಮನೆಯ ಕಡೆ ಬಂದ ನಾಲ್ವರ ತಂಡ  ಗೇಟಿನ ಬೀಗ  ಮುರಿದು ಮನೆಯ ಮುಂಬಾಗಿಲ ಬೀಗವನ್ನು ರಾಡಿನಿಂದ ಮುರಿಯಲು ಯತ್ನಿಸಿದ್ದಾರೆ. ಈ ಸಂದರ್ಭ ಮನೆ ಯಜಮಾನರಿಗೆ ಎಚ್ಚರಿಕೆಯಾಗಿ ಬೊಬ್ಬೆ ಹಾಕಿದಾಗ ಕಳ್ಳರು ಕಾಲ್ಕಿತ್ತಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸ್…

Read More

ʻಐಸ್‌ ಕ್ರೀಂʼ ಪ್ರಿಯರೇ ಎಚ್ಚರ : ಈ ತಪ್ಪು ಮಾಡಿದ್ರೆ ಬರಬಹುದು ಅಪಾಯಕಾರಿ ʻಕಾಯಿಲೆʼಗಳು..!

ರಾತ್ರಿ ರೊಮ್ಯಾಂಟಿಕ್ ರೈಡ್ ಹೋಗಿ ಐಸ್ ಕ್ರೀಂ ತಿನ್ನುವವರೇ ಹೆಚ್ಚು. ಮಳೆಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದು ವಿಶೇಷವಾಗಿ ಖುಷಿಯಾಗುತ್ತದೆ. ಆದ್ರೆ, ನಿಮ್ಮ ಈ ಪ್ರಣಯ ಅನುಭವವು ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ ಎಂಬುದನ್ನ ನೆನಪಿಡಿ. ಯಾಕಂದ್ರೆ, ರಾತ್ರಿ ಐಸ್ ಕ್ರೀಮ್ ತಿನ್ನುವುದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ರಾತ್ರಿ ಐಸ್ ಕ್ರೀಂ ತಿಂದರೆ ಆಗುವ ಆರೋಗ್ಯ ಸಮಸ್ಯೆಗಳೇನು ಎಂಬುದನ್ನು ಇಲ್ಲಿ ತಿಳಿಯೋಣ. ಐಸ್ ಕ್ರೀಂನಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ. ವಿಶೇಷವಾಗಿ ರಾತ್ರಿಯಲ್ಲಿ ಹೆಚ್ಚು ಐಸ್ ಕ್ರೀಮ್ ತಿನ್ನುವುದು…

Read More

ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಓರ್ವ ಸಾವು- 4 ಮಂದಿ ಆಸ್ಪತ್ರೆಗೆ ದಾಖಲು

ಬಂಟ್ವಾಳ : ಶಾಮಿಯಾನ  ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕದ ಸಲುವಾಗಿ ಈ ಶಾಮಿಯಾನ ಹಾಕುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದಾನೆ. ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ…

Read More