Headlines

ಸಿಎಂ ರಾಜೀನಾಮೆ ನೀಡದಿದ್ದರೆ BJP ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ- ಶಾಸಕ ಸುನೀಲ್‌ ಕುಮಾರ್‌

ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚನೆ ನೀಡಿದ್ದರಿಂದ ಸಿದ್ದರಾಮಯ್ಯ ಅವರು ಯಾವುದೇ ಹುದ್ದೆಯಲ್ಲಿ ಇರಬಾರದು. ತಕ್ಷಣವೇ ರಾಜೀನಾಮೆ ನೀಡಿ, ತನಿಖೆ ಆಗುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು ಎಂದು ಮಾಜಿ ಸಚಿವ, ಶಾಸಕ ವಿ ಸುನೀಲ್‌ ಕುಮಾರ್‌ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಪಾಲರನ್ನು ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವು ಪ್ರಶ್ನೆ ಮಾಡುವ ಭಂಡತನ ತೋರಬಹುದು ಎಂದರು. ಸಿಎಂ ರಾಜೀನಾಮೆ ನೀಡದಿದ್ದರೆ ಒಂದೆರೆಡು ದಿನದಲ್ಲಿ ಬಿಜೆಪಿ ಜಿಲ್ಲೆ ಜಿಲ್ಲೆಗಳಲ್ಲಿ…

Read More

ಉಡುಪಿ: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು..!

ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದು ಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ತಿಳಿದುಬಂದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ…

Read More

ಸಿದ್ದರಾಮಯ್ಯನವರೇ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಜ್ಯ ಬಿಜೆಪಿ ಆಗ್ರಹ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತು ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ದಲಿತರಿಗೆ ದ್ರೋಹ ಬಗೆದು ಅಕ್ರಮವಾಗಿ ಮುಡಾ ಸೈಟುಗಳನ್ನು ಕಬಳಿಸಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯನವರೇ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಆಗ್ರಹಿಸಿದೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ…

Read More

BREAKING : `CM ಸಿದ್ದರಾಮಯ್ಯ’ಗೆ ಮತ್ತೊಂದು ಶಾಕ್ : ಪ್ರಾಸಿಕ್ಯೂಷನ್ ಗೆ ಕಾನೂನು ತಡೆಯಾಜ್ಞೆ ತರದಂತೆ ಹೈಕೋರ್ಟ್ ಗೆ `ಕೇವಿಯಟ್’ ಸಲ್ಲಿಕೆ

ಬೆಂಗಳೂರು : ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಮೊದಲ ದೂರುದಾರ ಪ್ರದೀಪ್ ಕುಮಾರ್, ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗುತ್ತಿದ್ದು, ಅವರು ತಡೆಯಾಜ್ಞೆ ತರುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ…

Read More

ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ಶನಿವಾರ (ಆ.17) ಬೆಳಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ. ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ…

Read More

ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಕೆಗೆ ಆ.31 ಲಾಸ್ಟ್ ಡೇಟ್!

ನವದೆಹಲಿ : ಕೇಂದ್ರದಲ್ಲಿ ಮೂರನೇ ಬಾರಿಗೆ ಎನ್ಡಿಎ ಸರ್ಕಾರ ರಚನೆಯಾಗುವುದರೊಂದಿಗೆ, ನಡೆಯುತ್ತಿರುವ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಅನುಕ್ರಮದಲ್ಲಿ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ನಡೆಯುತ್ತಿದೆ. ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಹೊಲಿಗೆ ಯಂತ್ರವೂ ಈ ರೀತಿಯ ಯಂತ್ರವಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಎಂಬ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ, ಹೊಲಿಗೆ ಯಂತ್ರವನ್ನು ಖರೀದಿಸಲು ಒಬ್ಬರು 15,000 ರೂ.ಗಳನ್ನು…

Read More

ಶಿರೂರು ಗುಡ್ಡ ಕುಸಿತ: ಈಶ್ವರ್​ ಮಲ್ಪೆಗೆ ನದಿಯಲ್ಲಿ ಪತ್ತೆಯಾದ ಸಾಮಾಗ್ರಿ ಅರ್ಜುನ್​ ಲಾರಿಯದ್ದಾ?

ಶಿರೂರು: ಗುಡ್ಡ ಕುಸಿತದಲ್ಲಿ ಕೇರಳದ ಲಾರಿ ಡ್ರೈವರ್​ ಅರ್ಜುನ್ ನಾಪತ್ತೆಯಾಗಿದ್ದರು. ಅಂದು ಗಂಗಾವಳಿ ನೀರಿನ ರಭಸ ಜೋರಿದ್ದ ಕಾರಣ ಅರ್ಜುನ್​ ಮತ್ತು ಲಾರಿಯನ್ನು ಹುಡುಕಲು ರಕ್ಷಣಾ ತಂಡಕ್ಕೆ ಸಾಧ್ಯವಾಗಿರಲಿಲ್ಲ. ಕೊನೆಗೆ ಮುಳುಗು ತಜ್ಞ ಈಶ್ವರ್​ ಮಲ್ಪೆ ನೀರಿಗೆ ಇಳಿದು ಅರ್ಜುನ್​ಗಾಗಿ ಹುಡುಕಾಡಿದರು. ಕೊಟ್ಟ ಮಾತಿಗೆ ತಪ್ಪದ ಈಶ್ವರ್​ ಮಲ್ಪೆ ಮತ್ತೆ ಗಂಗಾವಳಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಲಾರಿ ಜಾಕ್ ಜೊತೆಗೆ ಲೋಹದ ಸಾಮಾಗ್ರಿ ಪತ್ತೆಯಾಗಿದೆ. ಆದರೀಗ ಪತ್ತೆಯಾದ ಸಾಮಾಗ್ರಿ​​ ಕುರಿತಾಗಿ ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ಶುಕ್ರವಾರದಂದು…

Read More

“ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆ” : ‘ಪ್ರಧಾನಿ ಮೋದಿ’ಗೆ ಭರವಸೆ ನೀಡಿದ ‘ಮುಹಮ್ಮದ್ ಯೂನುಸ್’

ನವದೆಹಲಿ : ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆಯನ್ನು ರಕ್ಷಿಸುವುದಾಗಿ ಮತ್ತು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ತಮಗೆ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ನೆರೆಯ ದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ 140 ಕೋಟಿ ಭಾರತೀಯರು ಕಾಳಜಿ ವಹಿಸಿರುವುದರಿಂದ ಹಿಂಸಾಚಾರ ಪೀಡಿತ…

Read More

ಈ ಪ್ರಶಸ್ತಿ ‘ದೈವಕ್ಕೆ’ ಸಲ್ಲಬೇಕು : ರಾಷ್ಟೀಯ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಬಳಿಕ ರಿಷಬ್ ಶೆಟ್ಟಿ

ಬೆಂಗಳೂರು : 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನ ಘೋಷಿಸಲಾಗಿದ್ದು, 2022 ರಿಂದ ಚಿತ್ರರಂಗದಲ್ಲಿ ಅತ್ಯುತ್ತಮವಾದುದನ್ನ ಆಚರಿಸಲಾಗುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನವದೆಹಲಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿಜೇತರನ್ನು ಬಹಿರಂಗಪಡಿಸಿತು. ಕನ್ನಡಿಗ, ನಟ ರಿಶಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನು ಪ್ರಶಸ್ತಿ ಬಂದಿರುವ ಕುರಿತು ನಟ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿ ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿರುವುದು ಗೊತ್ತಾಗಿದೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ನಮ್ಮ ಸಿನಿಮಾ ತಂಡಕ್ಕೂ…

Read More

ಅಡ್ಡೂರು – ಪೊಳಲಿ ಸೇತುವೆಯಲ್ಲಿ ಘನ ವಾಹನ ಸಂಚಾರ ಬಂದ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಡ್ಡೂರು – ಪೊಳಲಿ ಸಂಪರ್ಕ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ಏಕಾಏಕಿ ನಿಷೇಧಿಸಿದ್ದು ಸಂಚಾರ ಹಾಗು ವಸ್ತುಗಳ ಸಾಗಾಟಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇವಲ ಎರಡು ದಿನಗಳ ಮುಂಚೆ ಅಧಿಕಾರಿಗಳು ಬೋರ್ಡ್ ಅಳವಡಿಸಿದ್ದು, ನಿನ್ನೆ ಪಿಲ್ಲರ್ ಹಾಕಿ ಇವತ್ತು ಘನವಾಹನಗಳ ಸಂಚಾರ ನಿಷೇಧಿಸಲು ಅಡ್ಡಲಾಗಿ ತಡೆ ಕಂಬ ಹಾಕಿದ್ದಾರೆ.ಏಕಾಏಕಿ ಈ ನಿರ್ಧಾರವನ್ನು ಜಿಲ್ಲಾಡಳಿತ ಏಕೆ ತೆಗೆದುಕೊಂಡಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿದೆ.

Read More