Headlines

ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ…

Read More

ಮಂಗಳೂರು: ಲವ್ ಜಿಹಾದ್, ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ..!

ಮಂಗಳೂರು: ನಾಪತ್ತೆಯಾಗಿದ್ದ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ   ಮುಸ್ಲಿಂ ಯುವಕನ ಜತೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ  ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಾಪತ್ತೆಯಾಗಿದ್ದ ಯುವತಿನ್ನು ಪತ್ತೆ ಹಚ್ಚುವಲ್ಲಿ ಪಾಂಡೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮ್ಮದ್ ಅಶ್ಪಕ್ ಎಂಬಾತನ ಜೊತೆ ಈ ಹಿಂದೂ ಯುವತಿ ಪತ್ತೆಯಾಗಿದ್ದು, ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಯುವತಿಯ…

Read More

ಬೆಳ್ತಂಗಡಿ: ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ 3.30 ಲಕ್ಷ ರೂ. ವಂಚನೆ..!

ಬೆಳ್ತಂಗಡಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ ಬೆಳ್ತಂಗಡಿಯ ವ್ಯಕ್ತಿಯೊಬ್ಬರಿಂದ ವಂಚಕರು 3,30,000 ರೂ. ವಂಚಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್‌ಸ್ಟಗ್ರಾಮ್‌ನಲ್ಲಿ ಬಂದ ಲಿಂಕ್ ಮೂಲಕ ವಾಟ್ಸ್ ಆ್ಯಪ್ ಗ್ರೂಪಿಗೆ ಸೇರಿದ ವ್ಯಕ್ತಿಗೆ ಅಲ್ಲಿ ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಅವರು ಕಳುಹಿಸಿದ ಲಿಂಕ್ ಮುಖಾಂತರ ಎ.ಸಿ.ಮಾಕ್ಸ್ JOHCM ಎಂಬ ಎರಡು ಆಪ್ ಗಳನ್ನು ಡೌನ್‌ಲೋಡ್ ಮಾಡಿದ್ದಾರೆ. ಬಳಿಕ ಈ ಆಪ್‌ಗಳ ಮೂಲಕ ದೂರುದಾರರ ಖಾತೆಯಿಂದ…

Read More

ವಾಲ್ಮೀಕಿ ನಿಗಮ ಹಗರಣ ಕೇಸ್‌ : ʻEDʼಯಿಂದ ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಹರೀಶ್‌ ಅರೆಸ್ಟ್‌

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್‌ ನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಪಿಎ ಹರೀಶ್‌ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ…

Read More

ಪುರುಷನಾಗಿ ಲಿಂಗ ಬದಲಿಸಿಕೊಂಡ ಮಹಿಳಾ IRS ಅಧಿಕಾರಿ; UPSC ಇತಿಹಾಸದಲ್ಲೇ ಇದೇ ಮೊದಲು!

ನವದೆಹಲಿ: ಲಿಂಗ ಬದಲಾವಣೆ ಪ್ರಕರಣಗಳ ಇತ್ತೀಚೆಗೆ ಹೆಚ್ಚಾಗಿದೆ. ಹದಿಹರೆಯದವರು ಮಾತ್ರವಲ್ಲ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವವರು ಕೂಡ ತಮ್ಮ ಬಯಕೆಯಂತೆ ಲಿಂಗ ಬದಲಾವಣೆಗೆ ಮುಂದಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಈ ಪ್ರಕರಣ. ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿ ಪುರುಷನಾಗಿ ಲಿಂಗ ಹಾಗೂ ಹೆಸರನ್ನು ಬದಲಿಸಿಕೊಂಡಿದ್ದಾರೆ. ಭಾರತೀಯ ನಾಗರಿಕ ಸೇವೆಗಳಲ್ಲೇ ಇದು ಮೊದಲನೇ ಪ್ರಕರಣ ಎನಿಸಿಕೊಂಡಿದೆ. ಹೈದರಾಬಾದ್​​ನ ಐಆರ್​ಎಸ್​ ಅಧಿಕಾರಿ ಎಂ ಅನುಸೂಯಾ ಎಂಬುವವರು ಲಿಂಗ ಬದಲಿಸಿಕೊಂಡು ಎಂ ಅನುಕತಿರ್ ಸೂರ್ಯ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ಅನುಕತಿರ್ ಸೂರ್ಯ…

Read More

ಇಂದಿನಿಂದ 6 ದಿನಗಳ ಕಾಲ ಉಳ್ಳಾಲ ರೈಲು ನಿಲ್ದಾಣ ಬಳಿಯ ಸೋಮೇಶ್ವರ ರೈಲ್ವೇಗೆಟ್ ಬಂದ್

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಿಂದ ಕೋಟೆಕಾರು ಮಾರ್ಗವಾಗಿ ಸೋಮೇಶ್ವರ ದೇವಸ್ಥಾನ ಸಹಿತ ಉಳ್ಳಾಲ ನಗರ ಪಂಚಾಯತ್‌ ಅನ್ನು ಸಂಪರ್ಕಿಸುವ ಉಳ್ಳಾಲ ರೈಲು ನಿಲ್ದಾಣ ಬಳಿಯ ಸೋಮೇಶ್ವರ ರೈಲ್ವೇಗೇಟನ್ನು ಜುಲೈ 10ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಜುಲೈ 16ರ ಮಂಗಳವಾರದವರೆಗೆ ತುರ್ತು ಹಳಿ ನಿರ್ವಹಣೆಗಾಗಿ ಮುಚ್ಚಲಾಗುತ್ತದೆ ಎಂದು ದಕ್ಷಿಣ ರೈಲ್ವೇಯ ಸೆಕ್ಷನ್‌ ಎಂಜಿನಿಯರಿಂಗ್‌ ವಿಭಾಗದ ಪ್ರಕಟನೆ ತಿಳಿಸಿದೆ.

Read More

ಮಂಗಳೂರು: ಮಹಜರು ವೇಳೆ ‘ಚಡ್ಡಿಗ್ಯಾಂಗ್’ ಆರೋಪಿಗಳು ಪರಾರಿಗೆ ಯತ್ನ – ಇಬ್ಬರಿಗೆ ಗುಂಡೇಟು

ಮಂಗಳೂರು: ಸ್ಥಳ ಮಹಜರು ನಡೆಸಲು ಚಡ್ಡಿಗ್ಯಾಂಗ್‌ನ ಆರೋಪಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿರುವ ಘಟನೆ ನಗರದ ಮುಲ್ಕಿ ಸಮೀಪದ ಪಡು ಪಣಂಬೂರು ಬಳಿ ನಡೆದಿದೆ. ಮಂಗಳವಾರ ನಸುಕಿನ ವೇಳೆ ಚಡ್ಡಿಗ್ಯಾಂಗ್‌ನ ನಾಲ್ವರಿದ್ದ ತಂಡ ಮಂಗಳೂರಿನ ಕೋಟೆಕಣಿಯ ಮನೆಯೊಂದಕ್ಕೆ ನುಗ್ಗಿ ದಂಪತಿಯನ್ನು ಬೆದರಿಸಿ 14ಲಕ್ಷ ಮೌಲ್ಯದ ಸೊತ್ತು ದರೋಡೆ ಮಾಡಿ ಪರಾರಿಯಾಗಿತ್ತು. ಬಳಿಕ ಕಾರನ್ನು ಮುಲ್ಕಿ ಬಳಿ ತೊರೆದು, ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಮತ್ತೆ ಮಂಗಳೂರಿಗೆ ಬಂದು ಬೆಂಗಳೂರಿಗೆ ಪರಾರಿಯಾಗಲೆತ್ನಿಸಿತ್ತು. ಅಷ್ಟರಲ್ಲಿ ಅಲರ್ಟ್ ಆದ…

Read More

ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೃತ್ಯ ನಡೆದು ಐದೇ ಗಂಟೆಗಳಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್…!!

ಮಂಗಳೂರು : ನಗರದ ಮನೆಯೊಂದರಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ನಡೆಸಿ ಪರಾರಿಯಾಗಿತ್ತು.ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್…

Read More

ಕೇಂದ್ರ ಸರ್ಕಾರದಿಂದ ಬಡಜನತೆಗೆ ಸಿಹಿ ಸುದ್ದಿ – ವರ್ಷಕ್ಕೆ ಪ್ರತಿ ಕುಟುಂಬಕ್ಕೆ 10 ಲಕ್ಷ ರೂ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ NDA ಸರ್ಕಾರವು ಸಮಾಜದ ಬಡವರು ಮತ್ತು ದುರ್ಬಲ ವರ್ಗದವರನ್ನು ಆಕರ್ಷಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲು ಸಜ್ಜಾಗುತ್ತಿದೆ. ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಡ ಸಮುದಾಯಗಳ ಕಲ್ಯಾಣಕ್ಕಾಗಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಕೇಂದ್ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನಾ ನಿಧಿಯನ್ನು 6,000 ರೂ.ಗಳಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂದು ಈಗಾಗಲೇ ವರದಿಗಳು ಬಂದಿವೆ. ಕೇಂದ್ರ ಸರ್ಕಾರವು ಮತ್ತೊಂದು ವಿಷಯದ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಿದೆ. ಇದು ಪ್ರತಿ ಕುಟುಂಬಕ್ಕೆ 10 ಲಕ್ಷ…

Read More

14 ಉತ್ಪನ್ನಗಳ ಮಾರಾಟ ಸ್ಥಗಿತ: ಸುಪ್ರೀಂಕೋರ್ಟ್ ಗೆ ಪತಾಂಜಲಿ ಲಿ. ಸ್ಪಷ್ಟನೆ..!

ಈ ವರ್ಷದ ಏಪ್ರಿಲ್ನಲ್ಲಿ ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರವು ಉತ್ಪಾದನಾ ಪರವಾನಗಿಗಳನ್ನು ಅಮಾನತುಗೊಳಿಸಿದ 14 ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಈ ಉತ್ಪನ್ನಗಳನ್ನು ಹಿಂತೆಗೆದುಕೊಳ್ಳುವಂತೆ 5,606 ಫ್ರ್ಯಾಂಚೈಸ್ ಅಂಗಡಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಕಂಪನಿ ಉನ್ನತ ನ್ಯಾಯಾಲಯಕ್ಕೆ ತಿಳಿಸಿದೆ. ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವಂತೆ ಮಾಧ್ಯಮ ವೇದಿಕೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅದು ಹೇಳಿದೆ. ಜಾಹೀರಾತುಗಳನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ ಮಾಡಿದ ಮನವಿಯನ್ನು ಪೂರೈಸಲಾಗಿದೆಯೇ ಅಥವಾ…

Read More