BIG NEWS: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾಗೆ ನಾಲ್ಕು ಮಕ್ಕಳು ಬಲಿ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಲರ್ಟ್ ಘೋಷಣೆ
ಮಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ನೇಗ್ಲೇರಿಯಾ ಪೌಲೇರಿ ಹೆಸರಿನ ಅಪರೂಪ, ಅಪಾಯಕಾರಿ ಸೂಕ್ಷ್ಮಾಣು ಜೀವಿ ಮೆದುಳು ತಿನ್ನುವ ಅಮೀಬಾ ಆಗಿದೆ. ಮಳೆ ನೀರು, ಕಲುಷಿತ ನೀರಿನ ಹೊಂಡಗಳಲ್ಲಿ ಈಜುವಾಗ ಎಚ್ಚರವಹಿಸುವ ಅಗತ್ಯವಿದೆ. ಕಲುಷಿತ ನೀರಿನಲ್ಲಿ ಈಜುವಾಗ ಈ ಸೋಂಕು ಹರಡುವ…

