ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಭೂ ಮಾಫಿಯಾ ಶಂಕೆ- ಉನ್ನತ ಮಟ್ಟದ ತನಿಖೆಗೆ ಆದೇಶ
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭೂ ಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಪಾಯದ ಅಂಚಿನಲ್ಲಿರುವ ಕೆತ್ತಿಕಲ್ ರಾ.ಹೆದ್ದಾರಿಯಲ್ಲಿ ಗುಡ್ಡವನ್ನು ಶುಕ್ರವಾರ ಬೆಳಗ್ಗೆ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಕೆತ್ತಿಕಲ್ ನಲ್ಲಿ ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ….

