ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಕೆಪಿಟಿ ಜಂಕ್ಷನ್ ಬಳಿ ಉಂಟಾದ ಹೊಂಡಗಳನ್ನು ಸಂಚಾರಿ ಪೊಲೀಸರೇ ಕಾಂಕ್ರೀಟ್ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ! ಮಂಗಳವಾರ ಬೆಳಗ್ಗೆ ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಈಶ್ವರ್ ಸ್ವಾಮಿ, ಸಿಬಂದಿ ಸಿದ್ದರಾಜು ಮತ್ತು ಮಂಜು ಅವರು ಕಾಂಕ್ರೀಟ್ನ್ನು ತರಿಸಿ ತಾವೇ ಹಾರೆ ಹಿಡಿದು ಹೊಂಡಕ್ಕೆ ಹಾಕಿ ಸಮತಟ್ಟುಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರ್ ಸ್ವಾಮಿಯವರು, ಇತ್ತೀಚೆಗೆ ಇಲ್ಲಿನ ರಸ್ತೆ ಹೊಂಡಕ್ಕೆ ಬಿದ್ದು ಸ್ಕೂಟರ್ ಸವಾರರಾದ ಹಿರಿಯ ನಾಗರಿಕರೋರ್ವರು…

