ಮಂಗಳೂರು:ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತ..! ಕಾರ್ಕಳದಲ್ಲಿ ಕುಸಿದ ಮನೆಯಂಗಳದಲ್ಲಿದ್ದ ಬಾವಿ
ಮಂಗಳೂರಿನ ಕಾವೂರು ಸೂಜಿಕಲ್ ನಲ್ಲಿ ಗುಡ್ದ ಕುಸಿದು ಬಿದ್ದಿದ್ದು, 6 ಮನೆಗಳಿಗಳಿಗೆ ಅಪಾಯ ತಂದೊಡ್ಡಿದೆ. ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತಗೊಂಡಿದ್ದು, 6 ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಖಾಸಗಿ ಕಟ್ಟಡ ನಿರ್ಮಾಣಕ್ಕಾಗಿ ಗುಡ್ಡ ಅಗೆಯಲಾಗಿತ್ತು ಎನ್ನಲಾಗಿದ್ದು, ಇದೀಗ ಸಂಪೂರ್ಣ ಗುಡ್ಡ ಕುಸಿದಿದ್ದು, ಸುತ್ತಮುತ್ತಲಿನ ಮನೆಗಳಿಗೆ ಅಪಾಯವುಂಟಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುರುಗನ್ ಭೇಟಿ ನೀಡಿದ್ದು, ಮುಂಜಾಗೃತಾ ಕ್ರಮವಾಗಿ 6 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ಕಟ್ಟಡ…

