ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು ಹೇಳಿದೆ. ಅಲ್ಲದೇ 21 ದಿನದೊಳಗೆ…

Read More

ಬೆಳ್ತಂಗಡಿ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

ಬೆಳ್ತಂಗಡಿ: ಉಜಿರೆ-ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬಿಹಾರ ಮೂಲದ ರಾಕೇಶ್ ಕುಮಾರ್ (25) ಮೃತ ಕಾರ್ಮಿಕ. ಬೆಳ್ತಂಗಡಿ ತಾಲೂಕಿನ ಉಜಿರೆ-ಸೂರ್ಯ ರಸ್ತೆಯಲ್ಲಿ ಜ.31ರ ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದು, ರಾಕೇಶ್ ಕುಮಾ‌ರ್ ಮಣ್ಣಿನಡಿ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ಅವರನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ…

Read More

ಮಂಗಳೂರಿನ ಪೊಲೀಸರ ವಸತಿ ಗೃಹಕ್ಕೇ ನುಗ್ಗಿದ ಕಳ್ಳರು..!

ಮಂಗಳೂರಿನ ಪುರಭವನದ ಸಮೀಪವಿರುವ ಪೋಲಿಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ.  ಪೊಲೀಸ್ ಲೇನಿನ ಎ1 ಬ್ಲಾಕ್‌ನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಸ್ಥಳಕ್ಕೆ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ  ಕ್ರೈಂ ಸಿಬ್ಬಂದಿಗಳು…

Read More

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಡೈರಿಯಲ್ಲಿ ಇಬ್ಬರು ಪ್ರಭಾವಿ ಶಾಸಕರ ಹೆಸರು ಉಲ್ಲೇಖ!

ಬೆಂಗಳೂರು : ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಹೆದರಿ ಗುಂಡು ಹಾರಿಸಿಕೊಂಡು ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿರುವ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಅವರು ಬರೆದಿರುವ ಡೈರಿಯಲ್ಲಿ ಹಲವು ಸ್ಪೋಟಕ ಅಂಶಗಳು ಬರೆಯಲಾಗಿದ್ದು ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ. ಹೌದು ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರಾಯ್ ಅವರಿಗೆ ಡೈರಿ ಬರೆಯುವ ಅಭ್ಯಾಸ ಇತ್ತು. ಡೈರಿಯಲ್ಲಿ…

Read More

ರಸ್ತೆಯಲ್ಲಿ ಹಠಾತ್ ಅಡ್ಡ ಬಂದ ನಾಯಿ: ಸ್ಕೂಟರ್ ನಲ್ಲಿದ್ದ ಮಹಿಳೆ ಸಾವು

ಉಡುಪಿ: ರಸ್ತೆಯಲ್ಲಿ ಹಠಾತ್ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದಾರೆ. ಬ್ರಹ್ಮಾವರ ಕಾಡೂರು ಗ್ರಾಮದ ದುರ್ಗಾಪರಮೇಶ್ವರಿ ದೇವಾಲಯದ ಬಳಿ ಘಟನೆ ನಡೆದಿದೆ. ನಾಯಿ ಅಡ್ಡ ಬಂದಿದ್ದರಿಂದ ಸ್ಕೂಟರ್ ಬ್ರೇಕ್ ಹಾಕಲಾಗಿದೆ. ಈ ವೇಳೆ ಹಿಂಬದಿ ಕುಳಿತಿದ್ದ ಸುಮತಿ ಶೆಟ್ಟಿ ಅವರು ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಪತಿ ಕರುಣಾಕರ ಶೆಟ್ಟಿ ಸ್ಕೂಟರ್ ಚಾಲನೆ ಮಾಡುತ್ತಿದ್ದರು. ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸುಮತಿ ಅವರನ್ನು ಬ್ರಹ್ಮಾವರದ…

Read More

ಫೆ.1ರಿಂದ 6ರವರೆಗೆ ಕಾಪಿಕಾಡು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಅಷ್ಟ ಬಂಧ ಬ್ರಹ್ಮಕಲಶೋತ್ಸವ

ಮಂಗಳೂರು: ಉಳ್ಳಾಲ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಫೆ.1ರಿಂದ 6ರವರೆಗೆ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಂಗಳೂರಿನ ಶ್ರೀ ಶರವು ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದ ಬಳಿಕ ಹೊರೆಕಾಣಿಕೆ ಕೇಂದ್ರವನ್ನು ಉದ್ಘಾಟಿಸಲಾಯಿತು. ಶರವು ಕ್ಷೇತ್ರದ ಶಿಲೆ ಶಿಲೆ ಮೊಕ್ತೇಸರ ಶರವು ರಾಘವೇಂಧ್ರ ಶಾಸ್ತ್ರಿಗಳು ಗಣಪತಿ ದೇವರ ಮುಂಭಾಗದಲ್ಲಿ ಪ್ರಾರ್ಥನೆ ನೆರವೇರಿಸಿ ಪ್ರಸಾದ ವಿತರಣೆ ಮಾಡಿದರು. ಮಂಗಳೂರು ಭಾಗದ ಜನತೆಗೆ ಹೊರೆಕಾಣಿಕೆ ಅರ್ಪಣೆ ಮಾಡಲು ಅನುಕೂಲವಾಗುವಂತೆ ಕ್ಷೇತ್ರ ವಠಾರದಲ್ಲಿ ಹೊರೆಕಾಣಿಕೆ ಕೇಂದ್ರವನ್ನು…

Read More

ಬಸ್ ಗಳಿಗೆ ಬಾಗಿಲು ಅಳವಡಿಕೆಗೆ ಜೂ. 1ರವರೆಗೆ ಕಾಲಾವಕಾಶ: ಎಸ್ಪಿ

ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂ. 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ.  ಬಸ್ ಮಾಲಕರ ಸಂಘದೊಂದಿಗೆ ಇಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.  ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಬಸ್ಸುಗಳಿಗೆ ಡೋರ್‌ಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿರುತ್ತದೆ, ಆದರೆ ಮಾರ್ಚ್ ವರೆಗೆ…

Read More

ಮಂಗಳೂರು: ಕದ್ರಿ ಜೋಗಿ ಮಠದ ಕಚೇರಿಯಲ್ಲಿ ಬೆಳ್ಳಿ ,ಆಭರಣ, ನಗದು ಕಳ್ಳತನ

ಮಂಗಳೂರು : ಕದ್ರಿ ಜೋಗಿ ಮಠದ ಆವರಣದಲ್ಲಿರುವ ಜೋಗಿ ಮಠದ ನವೀಕರಣ ಮತ್ತು ನಿರ್ವಹಣಾ ಸಮಿತಿಯ ಕಚೇರಿಯಲ್ಲಿ ನಡೆದ ಕಳ್ಳತನದಲ್ಲಿ ದುಷ್ಕರ್ಮಿಗಳು ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ದೂರಿನಲ್ಲಿ ಹೇಳಿರುವ ಪ್ರಕಾರ, ಕಳ್ಳರು ಕಚೇರಿಗೆ ನುಗ್ಗಿ ಕಬೋರ್ಡ್‌ನಲ್ಲಿ ಇರಿಸಲಾಗಿದ್ದ ಧೂಮಾವತಿ ದೈವ ಮತ್ತು ಗಣಪತಿಗೆ ಸೇರಿದ ಆಭರಣಗಳನ್ನು ಕದ್ದಿದ್ದಾರೆ. ಧೂಮಾವತಿ ದೈವದ ಆಭರಣಗಳನ್ನು ಹೊಂದಿರುವ ಚೀಲದಿಂದ, ಕಳ್ಳರು ಎಂಟು ಬೆಳ್ಳಿ ಗುಬ್ಬೆಗಳಲ್ಲಿ ಏಳು, ಅರ್ಧಚಂದ್ರಾಕಾರದಲ್ಲಿರುವ ಎರಡು ಬೆಳ್ಳಿ ಆಭರಣಗಳಲ್ಲಿ ಒಂದು, ಎರಡು ದೊಡ್ಡ…

Read More

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ..!!

ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜನಗರ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು…

Read More

ಅನ್ಯ ಧರ್ಮದ ಯುವತಿಯರನ್ನು ಕೊಡಗಿಗೆ ಕರೆದೊಯ್ದು ರಾಸಲೀಲೆ: ವಿದ್ಯಾರ್ಥಿ ಬಂಧನ 

ಕಾಲೇಜು ವಿದ್ಯಾರ್ಥಿಯೊಬ್ಬ ಯುವತಿಯರೊಂದಿಗೆ ರಾಸಲಿಲೆ ನಡೆಸಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಡಗಿಗೆ ಯುವತಿಯರನ್ನು ಕರೆದೊಯ್ದು ಯುವಕ ರಾಸಲೀಲೆ ನಡೆಸಿದ್ದಲ್ಲದೇ, ತನ್ನದೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಸ್ಥಳೀಯ ರಾಜಕಾರಿಣಗಳ ಪುತ್ರಿಯರು, ಅನ್ಯ ಧರ್ಮದ ಯುವತಿಯರೂ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು…

Read More