ಉಡುಪಿ ಕೃಷ್ಣನಿಗೆ ಚಿನ್ನದ ಭಗವದ್ಗೀತೆ ಅರ್ಪಣೆ

ಉಡುಪಿ : ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರ್ಯಾಯದ ಮಂಗಳೋತ್ಸವದ ಸಂದರ್ಭದಲ್ಲಿ ದೆಹಲಿಯ ನಿವೃತ್ತ ಐಎಎಸ್ ಅಧಿಕಾರಿ ಎಸ್. ಲಕ್ಷ್ಮೀನಾರಾಯಣನ್ ಅವರು 2 ಕೋಟಿ ರೂಪಾಯಿ ವೆಚ್ಚದಲ್ಲಿ ರಚಿಸಿರುವ ಚಿನ್ನದ ಭಗವದ್ಗೀತೆಯ ಕೃಷ್ಣಾರ್ಪಣಾ ಕಾರ್ಯಕ್ರಮವು ಗುರುವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.  ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಈ ಚಿನ್ನದ ಗೀತೆಯನ್ನು ಅಲಂಕೃತ ತೊಟ್ಟಿಲಿನಲ್ಲಿಟ್ಟು ತೂಗಿ ಕೃಷ್ಣನಿಗೆ ಸಮರ್ಪಿಸಿದರು.  ಭಗವದ್ಗೀತೆಯ ಲೇಖನ ಮತ್ತು ಪಾರಾಯಣಕ್ಕೆ ಭಕ್ತರ ಇಚ್ಚೆ ಇನ್ನೂ ಹೆಚ್ಚಾಗಿರುವುದರಿಂದ…

Read More

ಮಂಗಳೂರು: ಶ್ವಾಸನಾಳದಲ್ಲಿ ಕಡಲೆ ಬೀಜ ಸಿಲುಕಿ ಪರದಾಡಿದ ಮಗುವಿನ ರಕ್ಷಣೆ!

ಮಂಗಳೂರು : 10 ತಿಂಗಳ ಮಗುವಿನ ಶ್ವಾಸನಾಳದಲ್ಲಿ ಕಡಲೆ ಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು. ಇದೀಗ ಮಗುವನ್ನು ರಕ್ಷಿಸುವಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ. ಮನೆಯಲ್ಲಿ ಆಟವಾಡುತ್ತಿರುವಾಗ ಮಗು ಕಡಲೆ ಬೀಜ ಸೇವಿಸಿತ್ತು. ಆದರೆ, ಅದು ಶ್ವಾಸನಾಳದಲ್ಲಿ ಸಿಲುಕಿದ ವಿಷಯ ಯಾರಿಗೂ ಗೊತ್ತಾಗಿರಲಿಲ್ಲ. ದಿನ ಕಳೆಯುತ್ತಿದ್ದಂತೆ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿದೆ. ಪೋಷಕರು ಶೀತ ಸಮಸ್ಯೆ ಎಂದು ಭಾವಿಸಿ ಪುತ್ತೂರಿನ ಡಾ.ಶ್ರೀಕಾಂತ್ ರಾವ್ ಬಳಿ ತಪಾಸಣೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಎಕ್ಸ್…

Read More

ವಿಟ್ಲ: ನಾಲ್ಕು ದನಗಳ ಕಳ್ಳತನ ಪ್ರಕರಣ- ಆರೋಪಿಯ ಬಂಧನ

ಬಂಟ್ವಾಳ: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 18-11-2025 ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಕಾಣೆಯಾಗಿದ್ದವು. ಈ ಸಂಬಂಧ ಗಣೇಶ ರೈ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣವನ್ನು ವಿಟ್ಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ…

Read More

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ” ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ ಪೋಸ್ಟ್…

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಗೆ ನಿಂದನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬಿಲ್ಲವ ಸಂದೇಶ್ ಎಂಬ ಫೇಸ್ಬುಕ್ ಖಾತೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.  ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪೋಸ್ಟ್ ಹಾಕಿದ…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಪಾಪಿ ತಂದೆ.! ಮಂಗಳೂರಿನ ದಂಧೆಯ ಕಿಂಗ್ ಪಿನ್ ಭರತ್ ಶೆಟ್ಟಿ ಸಹಿತ ಮೂವರ ಬಂಧನ

ಪಾಪಿ ತಂದೆ ಹಣದಾಸೆಗಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಮಾನವೀಯ ಘಟನೆ ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಅಜ್ಜಿ ಮನೆಯಲ್ಲಿ ಪಿಯುಸಿವರೆಗೂ ವ್ಯಾಸಂಗ ಮಾಡಿದ್ದಳು. ನಂತರ ಕಳೆದ ಡಿಸೆಂಬರ್ ನಲ್ಲಿ ಅಜ್ಜಿ ಮನೆಯಿಂದ ತನ್ನ ತಂದೆಯ ಜೊತೆಗೆ ತನ್ನ ಮನೆಗೆ ತೆರಳಿದ್ದಳು. ಮತ್ತೆ ಅಜ್ಜಿ ಕರೆದಳು ಎಂಬ ಕಾರಣಕ್ಕೆ ಅಜ್ಜಿ ಮನೆಗೆ ಬಾಲಕಿ ವಾಪಸ್ ಆಗಿದ್ದಾಳೆ. ಈ ವೇಳೆ ಅಜ್ಜಿ ಮನೆಗೆ ಬಂದಿದ್ದ ಭರತ್ ಶೆಟ್ಟಿ ಎಂಬಾತ ತಂದೆ-ಮಗಳ…

Read More

ಆದಾಯದಲ್ಲಿ ಕಟೀಲು ದೇಗುಲಕ್ಕೆ ರಾಜ್ಯದಲ್ಲೇ 4ನೇ ಸ್ಥಾನ

ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳ ಪೈಕಿ ಆದಾಯದಲ್ಲಿ ಅತೀ ಶ್ರೀಮಂತ ದೇವಾಲಯಗಳ ಸಾಲಿನಲ್ಲಿ ಕಟೀಲು ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದೆ.  2024-25ರ ಸಾಲಿನಲ್ಲಿ 36.25 ಕೋಟಿ ಆದಾಯ ದಾಖಲಿಸಿದೆ. 2023-24ರರಲ್ಲಿ 32.53 ಕೋಟಿ ಆದಾಯ ಗಳಿಸಿತ್ತು.  ವಿವಿಧ ಸೇವೆಗಳಿಂದ 12 ಕೋಟಿ, ಕೊಠಡಿ ಬಾಡಿಗೆಯಿಂದ 70 ಲಕ್ಷ, ಕಟ್ಟಡ ಬಾಡಿಗೆಯಿಂದ 44 ಲಕ್ಷ, ಅನ್ನದಾನ, ವಿದ್ಯಾದಾನ ಕಾಣಿಕೆ ಮತ್ತು ಹುಂಡಿಯಿOದ  6 ಕೋಟಿ, ಕಾಣಿಕೆ ಹುಂಡಿಯಿOದ 6.30 ಕೋಟಿ, ಇ-ಹುಂಡಿಯಿOದ 24 ಲಕ್ಷ, ಯಕ್ಷಗಾನ ಮೇಳದ ಕಾಣಿಕೆ, ತತ್ಕಾಲ್,…

Read More

ಪತಿಯ ಅಕ್ರಮ ಸಂಬಂಧ `ಆತ್ಮ*ಹ*ತ್ಯೆಗೆ ಪ್ರಚೋದನೆ’ ಎಂದು ಪರಿಗಣಿಸಲಾಗದು : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಪತಿಯ ಅಕ್ರಮ ಸಂಬಂಧದಿಂದಾಗಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಂತ್ರಸ್ತೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮ ಸಂಬಂಧಗಳು ನೈತಿಕವಾಗಿ ತಪ್ಪಾಗಿರಬಹುದು, ಆದರೆ ಆತ್ಮಹತ್ಯೆಗೆ ನೇರ ಮತ್ತು ಸ್ಪಷ್ಟ ಸಂಬಂಧ ಸಾಬೀತಾಗದ ಹೊರತು ಅವರನ್ನು ಸೆಕ್ಷನ್ 306 ರ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧದ ಮೇಲ್ಮನವಿಯನ್ನು ಹೈಕೋರ್ಟ್ ಸಹ ವಜಾಗೊಳಿಸಿದೆ. ವರದಿಗಳ ಪ್ರಕಾರ, ಕುಂತಿ 2011 ರಲ್ಲಿ ರವಿಕುಮಾರ್ ಗಾಯಕ್ವಾಡ್ ಅವರನ್ನು ವಿವಾಹವಾದರು. ಕುಂತಿ ಅವರ ಕುಟುಂಬವು…

Read More

ಮಂಗಳೂರು: ಮಹಿಳೆಗೆ ಕಿರುಕಳ ನೀಡಿದ ಆರೋಪ – ಹೆಡ್‌ಕಾನ್‌ಸ್ಟೇಬಲ್ ಅಮಾನತು…!!

ಮಂಗಳೂರು : ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 2023ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಸಂತೋಷ್‌ರ ಪರಿಚಯ ಆಗಿತ್ತು. ಬಳಿಕ ಸಂತೋಷ್‌ನ ನಡವಳಿಕೆ ಬಗ್ಗೆ ಅಸಮಾಧಾನಗೊಂಡ ಮಹಿಳೆ ಕಮಿಷನರ್‌ಗೆ ದೂರು ನೀಡಿದ್ದರು. ಆ ಬಗ್ಗೆ ಕ್ಷಮೆ…

Read More

ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆ..!! ಯುವತಿಯ ಸಾವಿಗೆ ಪ್ರೇಮ ವೈಫಲ್ಯವೇ ಕಾರಣ

ಮಂಗಳೂರಿನ ಗುರುಪುರ ನದಿಗೆ ಹಾರಿ ಆತ್ಮ*ಹತ್ಯೆ* ಮಾಡಿಕೊಂಡ ಯುವತಿಯ ಸಾವಿಗೆ ಪ್ರೇಮ ವೈಫಲ್ಯವೇ ಕಾರಣ ಎನ್ನಲಾಗಿದೆ. ಸೋಮವಾರ ಸ್ನೇಹಿತೆಯೊಂದಿಗೆ  ಗುರುಪುರ ಬಳಿಗೆ ಬಂದಿದ್ದ ಮೂಡಬಿದ್ರೆ ಕಡೆಪಲ್ಲ ನಿವಾಸಿ ನವ್ಯಾ ಸೇತುವೆಯಿಂದ ನದಿಗೆ ಹಾರಿದ್ದಾಳೆ.  ಈ ವೇಳೆ ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು , ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನವ್ಯಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಆತ ಮದುವೆಯಾಗುವುದಾಗಿ…

Read More