Headlines

ಮಂಗಳೂರು :‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ

ಮಂಗಳೂರು : ರಾಜ್ಯ ಸರಕಾರ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಮನೆ ಮನೆಗೆ ಪೊಲೀಸ್’ ಎಂಬ ಯೋಜನೆಯನ್ನು ಆರಂಭಿಸಿದೆ. ಆದರೆ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಮತ್ತು ಪ್ರಚಾರದ ಕೊರತೆಯಿಂದಾಗಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಯಾಗಿದೆ. ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ತುಂಬುವುದು, ಸುರಕ್ಷತೆಯ ವಾತಾವರಣ ಸೃಷ್ಟಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆದರೆ ಬಹುತೇಕ ಮಂದಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ ಹಾಗಾಗಿ ದಿಢೀರ್ ಮನೆಗೆ ಆಗಮಿಸಿ ಪ್ರಶ್ನಿಸುವ ಪೊಲೀಸರಿಗೆ…

Read More

ನಾಳೆ ಗಾಜಾ ಶಾಂತಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಗೆ ಟ್ರಂಪ್ ಆಹ್ವಾನ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಅಕ್ಟೋಬರ್ 13 ರಂದು ಈಜಿಪ್ಟ್ನ ಶರ್ಮ್-ಎಲ್ ಶೇಖ್ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಅಮೆರಿಕ ಮತ್ತು ಈಜಿಪ್ಟ್ ಶನಿವಾರ ಪ್ರಧಾನಿ ಮೋದಿಯವರಿಗೆ ಕೊನೆಯ ಕ್ಷಣದ ಆಹ್ವಾನ ನೀಡಿವೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಗಾಜಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಅಂತರರಾಷ್ಟ್ರೀಯ ಶೃಂಗಸಭೆಯಲ್ಲಿ ಮೋದಿ ಭಾಗವಹಿಸುವುದನ್ನು ಪ್ರಧಾನಿ ಕಚೇರಿ (ಪಿಎಂಒ) ಇನ್ನೂ…

Read More

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು..!

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಬಡಿದ ಸಿಡಿಲು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ

Read More

ಪುತ್ತೂರು: ಹೆಜ್ಜೇನು ದಾಳಿಗೆ ವಿದ್ಯಾರ್ಥಿನಿ ಬಲಿ..!! ಇನ್ನೋರ್ವ ವಿದ್ಯಾರ್ಥಿ ಗಂಭೀರ

ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭ ರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ…

Read More

ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ಅವಾಚ್ಯ ಪದಗಳಿಂದ ನಿಂದನೆ : ಮಂಗಳೂರಲ್ಲಿ ಕೇರಳ ನಟ ಜಯಕೃಷ್ಣನ್ ಅರೆಸ್ಟ್

ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ…

Read More

ಕಾರ್ಕಳ: ಯುವಕ ಆತ್ಮಹತ್ಯೆ ಪ್ರಕರಣ- ಸ್ನೇಹಿತರ ಮೊಬೈಲ್‌ ಪೊಲೀಸರ ವಶಕ್ಕೆ

ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿಯ ನಿವಾಸಿ ಅಭಿಷೇಕ್ ಆಚಾರ್ಯ (23), ಗುರುವಾರ ಬೆಮ್ಮಣ್‌ನ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಭಿಷೇಕ್ ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ಅಧೀಕ್ಷಕ ಹರಿರಾಮ್ ಶಂಕರ್‌ತಿಳಿಸಿದ್ದಾರೆ. ಕುಟುಂಬದವರ ಪ್ರಕಾರ ಆತ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಅಭಿಷೇಕ್…

Read More

ಬೀಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ಕೊಟ್ಟ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ

ತಂದೆ-ತಾಯಿ ಜತೆಗೆ ಮೈಸೂರಿನಿಂದ ಕಾಪು ಬೀಚ್‌ಗೆ ಬಂದಿದ್ದ ಹದಿನೈದರ ಹರೆಯದ ಬಾಲಕನಿಗೆ ಮುತ್ತು ಕೊಟ್ಟ ಆರೋಪದಲ್ಲಿ ಉಳ್ಳಾಲದ ವ್ಯಕ್ತಿಯ ವಿರುದ್ಧ ಕಾಪು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.  ಸಂತ್ರಸ್ತ ಬಾಲಕ ಮತ್ತು ಆತನ ಮನೆಯವರು  ಬೀಚ್ ನಲ್ಲಿ ಸುತ್ತಾಡುತ್ತಿದ್ದಾಗ ಶೌಚಾಲಯ ಬಳಿ ಬಂದ ಆರೋಪಿ ಶೌಕತ್ ಅಲಿ (47) ಬಾಲಕನಿಗೆ ಮುತ್ತು ಕೊಟ್ಟಿದ್ದನು. ಇದನ್ನು ಗಮನಿಸಿದ ಬಾಲಕನ ತಂದೆ ಬೊಬ್ಬೆ ಹೊಡೆದಿದ್ದು ಆರೋಪಿ ಸ್ಥಳದಿಂದ ಪರಾರಿಯಾಗಲೆತ್ನಿಸಿದ್ದಾನೆ. ಈ ವೇಳೆ ಗಸ್ತು ನಿರತ ಪೊಲೀಸರು ಮತ್ತು ಸಾರ್ವಜನಿಕರು ಜತೆ…

Read More

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆ.30ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಬೆಂಗಳೂರಿನ ಎ.ಆಲಂ ಪಾಷಾ ಎಂಬುವರು 2024ರಲ್ಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ…

Read More

ಮಂಗಳೂರು: ನಿಷೇಧಿತ ಪಿ.ಎಫ್.ಐ ಸಂಘಟನೆ ಪರ ಪೋಸ್ಟ್- ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧನ

ಮಂಗಳೂರು: ನಿಷೇದಿತ ಫಿ.ಎಫ್.ಐ ಸಂಘಟನೆಯು ಪರ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಪೋಸ್ಟ್ ಪ್ರಕಟಿಸಿರುವ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಉಪ್ಪಿನಗಂಡಿ ಸಮೀಪ ರಾಮ ಕುಂಜ ಗ್ರಾಮ ಬೀಜಾತಳಿ ಹೌಸ್ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಎಂದು ಗುರುತಿಸಲಾಗಿದೆ. ಸೆ.28ರಂದು ಫಿ.ಎಫ್.ಐ ಸಂಘಟನೆಯು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿತ್ತು. ಒ.09ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್‌ರವರು ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಕೇಂದ್ರ ಸರಕಾರದಿಂದ…

Read More

ಮಂಗಳೂರು: ಅ.12 ರಂದು ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಇದರ ನೂತನ ಜಿಲ್ಲಾ ಕಛೇರಿಯ ಉದ್ಘಾಟನೆ ಮತ್ತು ಬೃಹತ್ ರಕ್ತದಾನ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಇದರ ನೂತನ ಜಿಲ್ಲಾ ಕಛೇರಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ಅ.12 ರಂದು ರವಿವಾರ ಕಂಕನಾಡಿಯ ಎಂಪೊರಿಯಂ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ನಡೆಯಲಿದೆ. ಮತ್ತು ದಾಸ್ ಚಾರಿಟಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು, ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು…

Read More