Headlines

ಗಮನಿಸಿ: ಮಂಗಳೂರಿನಲ್ಲಿ ಮೇ 30 – 31ರವರೆಗೆ ಈ ಪ್ರದೇಶಗಳಿಗೆ ನೀರಿಲ್ಲ..!

ಮಂಗಳೂರು: ನೀರು ಸರಬರಾಜು ಆಗುವ ಕೊಳವೆ ಮರುಜೋಡಣೆ ಮಾಡುವ ಹಿನ್ನಲೆಯಲ್ಲಿ ಮೇ 30ರ ಬೆಳಗ್ಗೆ 6ರಿಂದ ಮೇ 31ರ ಬೆಳಗ್ಗೆ 6ರವರೆಗೆ ಮಂಗಳೂರಿನ ಈ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಮಂಗಳೂರು ಮನಪಾ ನೀರು ಸರಬರಾಜು ವ್ಯವಸ್ಥೆಯ ತುಂಬೆ HLPS-1 18 MGD ರೇಚಕ ಸ್ಥಾವರದ ಪಂಪಿಂಗ್ ಮಾಡುವ ಕೊಟ್ಟಾರ ಚೌಕಿಯಿಂದ ಗೊಲ್ಡ್ ಪಿಂಚ್ ಗ್ರೌಂಡ್‌ವರೆಗೆ ಕೆಯುಐಡಿಎಫ್‌ಸಿ ವತಿಯಿಂದ 900 ಎಂ.ಎಂ ವ್ಯಾಸದ ಕೊಳವೆ ಮರುಜೋಡಣೆ ಕಾಮಗಾರಿ ಮಾಡುವ ಕಾಮಗಾರಿ ನಡೆಯಲಿದೆ. ಆದ್ದರಿಂದ ಮೇ 30 –…

Read More

ಮಂಗಳೂರು: ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ- ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಮಂಗಳೂರು: ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂದು…

Read More

‘ರೇವ್ ಪಾರ್ಟಿ’ ಪ್ರಕರಣ : ನಟಿ ಹೇಮಾ ಸೇರಿ 8 ಮಂದಿಗೆ ಮತ್ತೆ ‘CCB’ ನೋಟಿಸ್..!

ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ಮತ್ತೆ ನೋಟಿಸ್ ನೀಡಿದ್ದಾರೆ. ಸಿಸಿಬಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಮತ್ತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಟಾಲಿವುಡ್ ಖ್ಯಾತ ನಟಿ ಹೇಮಾ, ಆಶು ರೈ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ರೇವ್ ಪಾರ್ಟಿ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು.ರೇವ್…

Read More

CANARA BANK APK: ವಾಟ್ಸಾಪ್‌ಗೆ ಈ ಮೆಸೇಜ್‌ ಬಂದರೆ ತಕ್ಷಣ ಡಿಲೀಟ್‌ ಮಾಡಿ

ವಾಟ್ಸಾಪ್‌ನಲ್ಲಿ ಬ್ಯಾಂಕ್‌ ಹೆಸರಿನಲ್ಲಿಸಿ APK ಫೈಲ್‌ ಕಳುಹಿಸುವ ಮೂಲಕ ಖಾತೆಗಳಿಂದ ಹಣ ದೋಚುವ ಹೊಸ ಮಾದರಿಸೈಬರ್‌ ಕ್ರೈಂ ಈಗ ಜಾಸ್ತಿಯಾಗಿದ್ದು ಹಲವರು ಈಗಾಗಲೇ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ. ಬ್ಯಾಂಕ್‌ KYC ಅಪ್‌ಡೇಟ್‌, ರಿಡೀಮಿಂಗ್‌ ಪಾಯಿಂಟ್ಸ್‌ ಇತ್ಯಾದಿ ನೆಪದಲ್ಲಿ ನಿಮ್ಮ ಮೊಬೈಲ್‌ಗೆ ಕನ್ನ ಹಾಕುತ್ತಾರೆ. ಒಮ್ಮೆ APK ಫೈಲ್‌ಇನ್‌ಸ್ಟಾಲ್‌ ಮಾಡಿದರೆ ಮೊಬೈಲ್‌ನ ಎಲ್ಲ ಖಾಸಗಿ ಮಾಹಿತಿ ಸೈಬರ್‌ ಕಳ್ಳರ ಪಾಲಾಗಿ ನಾನಾ ರೀತಿ ಮೋಸ ಹೋಗಬೇಕಾಗುತ್ತದೆ. ಹೀಗಾಗಿ ವಾಟ್ಸಾಪ್‌ಗೆ ಬರುವ ಯಾವುದೇ APK ಫೈಲ್‌, ಲಿಂಕ್‌ ಅಥವಾ ಮೆಸೇಜ್‌…

Read More

ಉಳ್ಳಾಲ: ಬಿಲ್ಡರ್‌ಗೆ 86 ಲಕ್ಷ ರೂ ವಂಚನೆ..! ಬ್ಯಾಂಕ್‌ ಮ್ಯಾನೇಜರ್‌ ಸೇರಿ 4 ಜನರ ವಿರುದ್ದ ಪ್ರಕರಣ ದಾಖಲು

ಮಂಗಳೂರು : ಬಿಲ್ಡರ್‌ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಅವರ ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವಬೆದರಿಕೆಯೊಡ್ಡಿರುವ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಬ್ರೋಕರ್‌ , ಸಿವಿಲ್‌ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಐಪಿಸಿ 1860 ರ ಅಡಿ ಸೆಕ್ಷನ್‌ 341, 447, 323, 504,506,420, 34 ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದೆ.ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್‌ ಜೆಪ್ಪಿನಮೊಗರುವಿನ ಪವನ್‌ ಕುಮಾರ್‌, ಬಾಕಿಮಾರು ನಿವಾಸಿ ಬ್ರೋಕರ್‌ ಆಗಿರುವ ಗುರುರಾಜ್‌, ಸಿವಿಲ್‌ ಗುತ್ತಿಗೆದಾರ…

Read More

ಮೇ.31 ರಂದು ‘SIT’ ವಿಚಾರಣೆಗೆ ಹಾಜರಾಗುತ್ತೇನೆ – ಪ್ರಜ್ವಲ್ ರೇವಣ್ಣ

ಬೆಂಗಳೂರು : ಮೇ.31 ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ವಿದೇಶದಲ್ಲಿ ವಿಡಿಯೋ ಮೂಲಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ ‘ ನಾನು ನನ್ನ ತಂದೆ-ತಾಯಿ, ತಾತನ ಕ್ಷಮೆ ಕೇಳುತ್ತೇನೆ. ವಿದೇಶದಕ್ಕೆ ಹೋದ 3 -4 ದಿನದ ಬಳಿಕ ಪ್ರಕರಣದ ಬಗ್ಗೆ ತಿಳಿಯಿತು. ಮೇ 31 ರಂದು ಬೆಳಗ್ಗೆ 10 ಗಂಟೆಗೆ ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ವಾರ್ನ್ ಮಾಡಿದ್ದ ತಾತ ನನ್ನ…

Read More

ಉಡುಪಿ : ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರ ತುಷ್ಟೀಕರಣ – ಬಿ.ವೈ. ವಿಜಯೇಂದ್ರ ಕಿಡಿ

ಉಡುಪಿ: ಕರಾವಳಿ ಸಹಿತ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾರು ಏನು ಬೇಕಾದ್ರೂ ಮಾಡಬಹುದು ಎಂಬ ವಾತಾವರಣ ಸೃಷ್ಟಿಯಾಗಿದೆ. ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ರಾಜಕಾರಣದ ಪರಿಣಾಮವನ್ನು ರಾಜ್ಯದ ಜನತೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಹಲ್ಲೆ ಮಾಡಿರುವ ಪ್ರಕರಣ‌, ಹುಬ್ಬಳಿಯಲ್ಲಿ ನಡೆದ ಕೊಲೆ ಪ್ರಕರಣದಂತಹ ಅನೇಕ ಪ್ರಕರಣಗಳು ಕಳೆದ…

Read More

402 ‘PSI’ ಸೇರಿ 4000 ಹುದ್ದೆಗಳ ಭರ್ತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ಸಂಭಾವ್ಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ. ಪೋಲಿಸ್ ಇಲಾಖೆಯ 402 ಪಿಎಸ್‌ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ಪ್ರಕಟಣೆ…

Read More

ಒಂದು ರಾಷ್ಟ್ರ, ಒಂದು ಚುನಾವಣೆ’, ಏಕರೂಪ ನಾಗರಿಕ ಸಂಹಿತೆಯನ್ನು ಮುಂದಿನ ಅವಧಿಗೆ ಜಾರಿಗೆ ತರಲಾಗುವುದು: ಅಮಿತ್ ಶಾ

ನವದೆಹಲಿ: ಬಿಜೆಪಿ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ, ಎಲ್ಲಾ ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆಯ ನಂತರ ಮುಂದಿನ ಐದು ವರ್ಷಗಳಲ್ಲಿ ಇಡೀ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಸರ್ಕಾರವು ಮುಂದಿನ ಅವಧಿಯಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ಜಾರಿಗೆ ತರುತ್ತದೆ ಎಂದು ಅವರು ಹೇಳಿದರು. “ಯುಸಿಸಿ ನಮ್ಮ ಸಂವಿಧಾನದ ನಿರ್ಮಾತೃಗಳು ಸ್ವಾತಂತ್ರ್ಯದ ನಂತರ ನಮಗೆ, ನಮ್ಮ ಸಂಸತ್ತು ಮತ್ತು ನಮ್ಮ ದೇಶದ ರಾಜ್ಯ ಶಾಸಕಾಂಗಗಳಿಗೆ ಬಿಟ್ಟ ಜವಾಬ್ದಾರಿಯಾಗಿದೆ”…

Read More

ಉಡುಪಿ: ಗೆದ್ದರೂ ಸೋತರೂ ಬಿಜೆಪಿ ಕಾರ್ಯಕರ್ತನಾಗಿಯೇ ಇರುವೆ – ಉಚ್ಚಾಟಿತ ಮಾಜಿ ಶಾಸಕ ರಘುಪತಿ ಭಟ್

ಉಡುಪಿ: ನನ್ನನ್ನು ಉಚ್ಚಾಟಿಸಿರಬಹುದು. ಕಾರ್ಯಕರ್ತನಾಗಿಯೇ ಇರುತ್ತೇನೆ. ಪಕ್ಷದಿಂದ ಉಚ್ಚಾಟಿಸಿದವರಿಗೆ ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ. ಚುನಾವಣೆಯಲ್ಲಿ ಗೆದ್ದು ಪಕ್ಷಕ್ಕೆ ಹೋಗುವೆ ಅಥವಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಇರುವೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟಿಸಿದ ಸುದ್ದಿ ಮಾಧ್ಯಮಗಳ ಮೂಲಕ ತಿಳಿಯಿತು. ಪಕ್ಷದ ನೋಟಿಸ್‌ ಕೂಡ ತಲುಪಿರಲಿಲ್ಲ. ಈಗ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಿರಬಹುದು. ಆದರೆ, ಈವರೆಗೂ ಪಕ್ಷದ ಯಾವ ನಾಯಕರಿಗೂ…

Read More